Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮೋಹನ ಮುರಳಿಗೆ ಮನಸೋತ ಕನಸು ಕಂಗಳ ಚೆಲುವೆ ಸ್ವಪ್ನ ಶೆಟ್ಟಿಗಾರ್

Public TV
Last updated: August 12, 2023 4:23 pm
Public TV
Share
6 Min Read
Swapna Shettigar 1
SHARE

ಕನ್ನಡ ಚಿತ್ರರಂಗದಲ್ಲಿ ಬಣ್ಣದ ಕನಸು ಹೊತ್ತು ಬಂದ ನಟಿ ಮಣಿಗಳ ಪೈಕಿ ಸ್ವಪ್ನ ಶೆಟ್ಟಿಗಾರ್  (Swapna Shettigar) ಕೂಡ ಒಬ್ಬರು. ಎಲ್ಲ ಯುವ ನಟಿಯರಂತೆ ಸ್ವಪ್ನ ಶೆಟ್ಟಿಗಾರ್ ಕೂಡ ಬೆಟ್ಟದಷ್ಟು ಕನಸು, ಆಸೆ-ಆಕಾಂಕ್ಷೆ ಹೊತ್ತು ಬಂದವರು. ಸ್ಯಾಂಡಲ್ ವುಡ್ ನಲ್ಲಿ ತಾನು ಗಟ್ಟಿ ನೆಲೆ ಕಾಣಬೇಕು ಅಂತ ಕನಸು ಕಂಡವರು. ತಮ್ಮ ಕನಸು ನನಸು ಮಾಡಿಕೊಳ್ಳಲು ತಯಾರಿ ಕೂಡ ನಡೆಸಿದವರು. ಇಷ್ಟಕ್ಕೂ ಈ ಯುವ ನಟಿ  ಬಗ್ಗೆ ಇಷ್ಟೊಂದು ಪೀಠಿಕೆ ಹಾಕೋಕೆ ಕಾರಣ, ಅವರು ಅಭಿನಯಿಸಿರುವ ಎರಡು ಸಿನಿಮಾಗಳು ಸದ್ಯ ಬಿಡುಗಡೆಯ ಹೊಸ್ತಿಲಲ್ಲಿ ಇರುವುದು. ತಮ್ಮ ನಿರೀಕ್ಷೆಯ ಸಿನಿಮಾಗಳೆರೆಡು ರಿಲೀಸ್ ಆಗುತ್ತಿರುವ ಖುಷಿ ಒಂದು ಕಡೆಯಾದರೆ, ಇದೀಗ ತಮ್ಮ ಹಟ್ಟು ಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾವೊಂದಕ್ಕೆ‌ ಸಹಿ ಮಾಡುವ ಸಂತಸ ಮತ್ತೊಂದು ಕಡೆ. ಸ್ವಪ್ನ  ನಾಳೆ (ಆಗಸ್ಟ್ 13) ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ದಿನವೇ ಹೆಸರಿಡದ ಸಿನಿಮಾವೊಂದರಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅತ್ತ ಪರಭಾಷೆಯಿಂದಲೂ ಅವರಿಗೆ ಅವಕಾಶ ಬಂದಿದೆ. ತಮಿಳು ಸಿನಿಮಾವೊಂದರ‌ ಮಾತುಕತೆ ನಡೆಯುತ್ತಿದ್ದು, ಅದು ಅಂತಿಮವಾಗುವ ಸಾಧ್ಯತೆ ಇದೆ ಎಂಬುದು ಅವರ ಮಾತು.

Swapna Shettigar 2

ಹಾಗೆ ನೋಡಿದರೆ, ಸ್ವಪ್ನ  ಕನ್ನಡಕ್ಕೆ ಹೊಸ ಮುಖವೇನಲ್ಲ. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ  ಗಮನ ಸೆಳೆಯುವ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸಿದರೂ,  ಅವರು ಆಯ್ಕೆಯಲ್ಲಿ ಎಚ್ಚರ ತಪ್ಪಿಲ್ಲ. ಇದುವರೆಗೂ ಮಾಡಿದ ಸಿನಿಮಾಗಳ ಪಾತ್ರಗಳ ಮೇಲೆ ಸ್ವಪ್ನ ಅವರಿಗೆ ಖುಷಿ ಇದೆ. ಅವರೀಗ ನಾಯಕಿಯಾಗಿ ನಟಿಸಿರುವ ಆರೇಳು  ಸಿನಿಮಾಗಳ ಪೈಕಿ ಎರಡು ಸಿನಿಮಾಗಳು ಬಿಡುಗಡೆಯ ಹೊಸ್ತಿಲಲ್ಲಿವೆ ಎಂಬುದು ಅವರ ಖುಷಿಗೆ ಕಾರಣ.  ನಾಯಕಿಯಾಗಿ ಅಭಿನಯಿಸಿರುವ ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಈಗ ಬಿಡುಗಡೆಯಾಗಲು ಸಜ್ಜಾಗಿದೆ. ಈಗ ಆಡಿಯೋ ರಿಲೀಸ್ ಗೆ ಚಿತ್ರತಂಡ ಮುಂದಾಗಿದ್ದು, ಚಿತ್ರದುರ್ಗದ ಚಳ್ಳಕೆರೆಯಲ್ಲಿ ಇವೆಂಟ್ ನಡೆಸಲು ತಯಾರಿ ನಡೆಸಿದೆ. ಈಗಾಗಲೇ ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಸಿನಿಮಾ ಬಗ್ಗೆ ಸ್ವಪ್ನ  ಅವರಿಗೆ ಅತೀವ ವಿಶ್ವಾಸ. ಕಾರಣ ಸಿನಿಮಾ ಕಥೆ ಹಾಗೂ ಗಟ್ಟಿ ಪಾತ್ರ. ಈ ಕುರಿತು  ಸಪ್ನ ಹೇಳುವುದಿಷ್ಟು.

Swapna Shettigar 5

‘ನಾನು ಮೂಲತಃ ಮಂಗಳೂರಿನ ಹುಡುಗಿ. ತಂದೆ ಮಂಗಳೂರಿನವರು. ತಾಯಿ  ಉತ್ತರ ಕರ್ನಾಟಕದವರು. ಹುಬ್ಬಳ್ಳಿ ಸಮೀಪದ ನವಲಗುಂದದಲ್ಲೇ ಹೆಚ್ಚು  ಆಡಿ, ಓದಿ‌ ಬೆಳೆದವಳು. ನನಗೆ ಸಿನಿಮಾಗೆ  ಬರಬೇಕು ಎಂಬ ಯಾವ ಯೋಚನೆಯೂ ಇರಲಿಲ್ಲ. ಆದರೆ, ಸಿನಿಮಾ ವಿಚಾರದಲ್ಲೇ ಒಬ್ಬರು ಮನ ನೋಯಿಸಿದ್ದರು.  ಆ ಕಾರಣಕ್ಕೆ ನಾನೇಕೆ ಇಲ್ಲಿ ಬಂದು ನಿಲ್ಲಬಾರದು ಅಂತ ಚಾಲೆಂಜ್ ಮಾಡಿ ಒಬ್ಬ ನಟಿಗೆ ಬೇಕಾದ ನಟನಾ ತರಬೇತಿ ಸೇರಿದಂತೆ ಸಿನಿಮಾಗೆ ಇರಬೇಕಾದ ಒಂದಷ್ಟು ಅರ್ಹತೆ ಪಡೆದು ಸಿನಿಮಾ ರಂಗ ಪ್ರವೇಶಿಸಿದೆ.  ಆರಂಭದಲ್ಲಿ ನಾನು ಮಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುವಾಗಲೇ ತುಳು ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ತು. ಆದರೆ, ಆ ಸಿನಿಮಾ ನಿಂತು ಹೋಯ್ತು. ಅಲ್ಲೊಂದಷ್ಟು ಅವಮಾನಗಳೂ ಆದವು. ಕೊನೆಗೆ ನಾನು ನಟಿ ಆಗಲೇಬೇಕು ಅಂತ ಡಿಸೈಡ್ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಅವಕಾಶ ಹುಡುಕಿ ಬಂತು. ಮೊದಲು ‘ನಾನು ನನ್ನ ಹುಡುಗಿ’ ಎಂಬ ಸಿನಿಮಾದಲ್ಲಿ ನಟಿಸೋ ಚಾನ್ಸ್ ಸಿಕ್ತು. ಆದರೆ, ಆ ಸಿನಿಮಾನೂ  ನಿಂತು ಹೋಯ್ತು. ಅದೇ ಸಿನಿಮಾ ನಿರ್ದೇಶಕರು ಮತ್ತೊಂದು ಸಿನಿಮಾ ಮಾಡಿದ್ರು. ಅಲ್ಲಿ  ನಟಿಸೋ ಅವಕಾಶ ಸಿಕ್ತು. ಅಲ್ಲಿಂದ ನನ್ನ ಸಿನಿಮಾ ಜರ್ನಿ ಶುರುವಾಯ್ತು ಎಂಬುದು ಸ್ವಪ್ನ ಶೆಟ್ಟಿಗಾರ್ ಮಾತು.

Swapna Shettigar 4

ಈ ಸಿನಿಮಾರಂಗಕ್ಕೆ ಬಂದಿದ್ದು ಖುಷಿ ಇದೆ. ಕಲರ್ ಫುಲ್ ಜಗತ್ತು ಇದು. ಕಲರ್ ಫುಲ್ ಆಗಿಯೇ ಬದುಕು ಕಟ್ಟಿಕೊಳ್ಳಬೇಕು ಎಂಬ ಅದಮ್ಯ ಆಸೆ ಇದೆ. ಆರು ವರ್ಷಗಳ ಈ ಜರ್ನಿಯಲ್ಲಿ ಸಿನಿಮಾ ಸಾಕಷ್ಟು ಕಲಿಸಿಕೊಟ್ಟಿದೆ. ಒಳ್ಳೆಯ ಮತ್ತು ಕೆಟ್ಟ ಅನುಭವವೂ ಆಗಿದೆ. ಇಲ್ಲೀಗ ಗಟ್ಟಿನೆಲೆ ಕಾಣಬೇಕು ಅಂತ ನಿರ್ಧರಿಸಿದ್ದೇನೆ. ಈ ನಿಟ್ಟಿನಲ್ಲಿ ಒಳ್ಳೊಳ್ಳೆಯ ಕಥೆ ಮತ್ತು ಪಾತ್ರಗಳನ್ನು ಎದುರು ನೋಡುತ್ತಿದ್ದೇನೆ.  ಆರಂಭದಲ್ಲಿ ಸಿಕ್ಕ ಪಾತ್ರಗಳನ್ನು ಮಾಡುತ್ತಿದ್ದೆ. ಹೀರೋಯಿನ್ ಆಗುವ ತುಡಿತ ಇತ್ತು. ಆದರೆ, ಕೆಲ ನಿರ್ದೇಶಕರ ದೃಷ್ಟಿಯಲ್ಲಿ ನಾನು ಹೀರೋಯಿನ್ ಮೆಟೀರಿಯಲ್ ಆಗಿರಲಿಲ್ಲ. ಆಮೇಲೆ ಹೀರೋಯಿನ್ ಆಗಲೇಬೇಕು ಅಂತ ವರ್ಕೌಟ್ ಶುರು ಮಾಡಿದೆ. ಸಿನಿಮಾ ನಾಯಕಿ ಆಗುವ ಎಲ್ಲ ಅರ್ಹತೆ ಪಡದುಕೊಂಡೆ. ಅಲ್ಲಿಂದ ಮೂರ್ನಾಲ್ಕು ಸಿನಿಮಾಗಳಿಗೆ ನಾಯಕಿ ಅದೆ. ಒಮ್ಮೊಮ್ಮೆ ನನಗೆ ಈ ಇಂಡಸ್ಟ್ರಿ ಬೇಸರ ತರಿಸಿದ್ದು ನಿಜ. ಅವಕಾಶ ಮಿಸ್ ಆದಾಗೆಲ್ಲ ಬೇಜಾರು ಆಗುತ್ತಿತ್ತು. ಆದರೂ, ತಾಳ್ಮೆಯಿಂದಲೇ ಅವಕಾಶ ಪಡೆದೆ. 19 ಸಿನಿಮಾಗಳಲ್ಲಿ ಗಮನಿಸುವ ಪಾತ್ರಗಳನ್ನು ಮಾಡುತ್ತ ಅನುಭವ ಪಡೆದೆ. ಈಗ ಆರು ಸಿನಿಮಾಗಳಲ್ಲಿ ನಾಯಕಿಯಾಗಿದ್ದೇನೆ. ‘ಡವ್ ಮಾಸ್ಟರ್’ ಸಿನಿಮಾ ಪಾತ್ರ ಚೆನ್ನಾಗಿದೆ. ಅಲ್ಲಿ ಕಥೆಯೇ ಹೈಲೆಟ್. ಇದು ಕೂಡ ರಿಲೀಸ್ ಗೆ ರೆಡಿಯಾಗುತ್ತಿದೆ. ಇನ್ನು, ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಬಗ್ಗೆ ಹೇಳಲೇಬೇಕು. ಇದು ನನಗೆ ಮಾತ್ರವಲ್ಲ, ಇಡೀ ತಂಡಕ್ಕೆ ಒಳ್ಳೆಯ ಹೆಸರು ತಂದುಕೊಡುತ್ತೆ ಎಂಬ ಭವ್ಯ ಭರವಸೆ ಇದೆ.

Swapna Shettigar 3

‘ಯಾವ ಮೋಹನ‌ ಮುರಳಿ ಕರೆಯಿತು’ (Yaava Mohana Murali Kareyitu) ಚಿತ್ರ ಇಷ್ಟ ಆಗೋಕೆ ಕಾರಣ ಕಥೆ ಮತ್ತು ಪಾತ್ರ. ಅಲ್ಲಿ ಎಮೋಷನ್ಸ್ ಇದೆ, ಭಾವನೆಗಳಿವೆ, ಭಾವುಕತೆ ಇದೆ, ಸಂಬಂಧಗಳ ಮೌಲ್ಯವಿದೆ. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯ ಗುಣ ಇದೆ. ನಾನಿಲ್ಲಿ ವಿಕಲಚೇತನ ಮಗಳ ತಾಯಿಯಾಗಿ ನಟಿಸಿದ್ದೇನೆ. ಅದೊಂದು ತೂಕದ ಪಾತ್ರ. ಇಡೀ ಸಿನಿಮಾದಲ್ಲಿ ಬದುಕಿನ ಅರ್ಥವಿದೆ. ಭಾವನೆಗಳ ಗುಚ್ಛವಿದೆ. ಅ ಕಾರಣಕ್ಕೆ ಈ ಸಿನಿಮಾ ಒಪ್ಪಿಕೊಂಡೆ. ಸದ್ಯ ಸಿನಿಮಾದ ಟೀಸರ್ ಮತ್ತು ಲಿರಿಕಲ್ ಸಾಂಗ್ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇಷ್ಟರಲ್ಲೇ ಆಡಿಯೋ ರಿಲೀಸ್ ಆಗಲಿದೆ. ಚಿತ್ರದುರ್ಗದಲ್ಲಿ ಆಡಿಯೋ ಕಾರ್ಯಕ್ರಮ ಕೂಡ ನಡೆಯಲಿದೆ.  ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಸ್ಪೆಷಲ್ ಅಂದರೆ ರಾಕಿ. ಇಡೀ ಚಿತ್ರದ ಕೇಂದ್ರ ಬಿಂದು ರಾಕಿ. ರಾಕಿ ಅಂದರೆ ಶ್ವಾನದ ಹೆಸರು. ನನ್ನ ಮಗಳು ಮತ್ತು ರಾಕಿ ನಡುವಿನ ಸಂಬಂಧ ಮತ್ತು ಅವರಿಬ್ಬರ ಬದುಕಿನ ಉತ್ಸಾಹವೇ ಜೀವಾಳ. ಶೂಟಿಂಗ್ ವೇಳೆ ನಾವುಗಳು ಟೇಕ್ ತೆಗೆದುಕೊಂಡರೆ, ರಾಕಿ ಮಾತ್ರ ಒಂದೇ ಟೇಕ್ ಓಕೆ ಮಾಡುತ್ತಿದ್ದ. ಸೋ ಆ ಕ್ಷಣಗಳೇ ಮರೆಯದ ಅನುಭವ. ಸಿನಿಮಾ ಶೂಟಿಂಗ್ ಅನಿಸಲಿಲ್ಲ ಫ್ಯಾಮಿಲಿ ಟ್ರಿಪ್ ಥರಾ ಇತ್ತು. ಅದಕ್ಕೆ ಕಾರಣ ಟೀಮ್ ಮತ್ತು ಪ್ರೊಡಕ್ಷನ್ ಹೌಸ್. ನಿರ್ಮಾಪಕ ಶರಣಪ್ಪ ಹಾಗೂ ನಿರ್ದೇಶಕ ವಿಶ್ವಾಸ್ ಕೊಟ್ಟ ಸಹಕಾರ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ.

ನನಗೆ ಬಾಲಿವುಡ್ ನಟಿ ರೇಖಾ ಅವರು ರೋಲ್ ಮಾಡೆಲ್. ಇನ್ನು ನನಗೆ ಚಾಲೆಂಜ್ ಎನಿಸುವ ಪಾತ್ರ ಮಾಡುವಾಸೆ. ಅದರಲ್ಲೂ ವಿಲನ್ ಇದ್ದರಂತೂ ಓಕೆ. ಈಗಾಗಲೇ ಕ್ಲಾಂತ ಎಂಬ ಸಿನಿಮಾದಲ್ಲಿ ನಾನು ವಿಲನ್ ಪಾತ್ರ ಮಾಡಿದ್ದೇನೆ. ನಾಯಕಿಯಷ್ಟೇ ಪ್ರಬಲ ಪಾತ್ರವದು. ಕನ್ನಡ ಮಾತ್ರವಲ್ಲ, ಪರಭಾಷೆ ಸಿನಿಮಾದಲ್ಲಿ ಒಳ್ಳೆಯ ಪಾತ್ರ ಕಂಟೆಂಟ್ ಇದ್ದರೆ ಅಲ್ಲೂ ಹೋಗೋಕೆ ರೆಡಿ. ಇನ್ನು, ನಟನೆ ಜೊತೆ ನಾನು ಹಾಡ್ತೀನಿ ಕೂಡ. ಅದರಲ್ಲೂ ಜನಪದ ಮಾತ್ರ. ಜೊತೆಗೆ ನಿರ್ದೇಶನದ ಮೇಲೂ ಒಲವಿದೆ. ಒಂದೆರೆಡು ಕಥೆ ಕೂಡ ಬರೆದಿಟ್ಟುಕೊಂಡಿದ್ದೇನೆ. ಆ  ಟೈಮ್ ಗಾಗಿ ಕಾಯುತ್ತಿದ್ದೇನೆ.  ಈಗ ರಿಲೀಸ್ ಗೆ ಏಳು ಸಿನಿಮಾಗಳಿವೆ. ಅದಕ್ಕೂ ಮುನ್ನ ಎರಡು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಒಂದಷ್ಟು ಕಥೆ ಕೇಳುತ್ತಿದ್ದೇನೆ. ತಮಿಳು ಸಿನಿಮಾದ ಕಥೆಯೊಂದು ಇಷ್ಟವಾಗಿದೆ. ಇನ್ನು ‘ಶಂಭೋ ಶಿವಶಂಕರ’ ಸಿನಿಮಾ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರ ‘ಬಿಂಗೋ’ (Bingo)ಸಿನಿಮಾದಲ್ಲೂ ನಟಿಸುತ್ತಿದ್ದೇನೆ. ಅದು ಹಾರರ್ ಕಮ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಕನ್ನಡ ಇಂಡಸ್ಟ್ರಿ ಈಗ ಯಾವುದರಲ್ಲೂ ಕಮ್ಮಿ ಇಲ್ಲ. ಒಳ್ಳೆಯ ಕಥಾಹಂದರ ಇರುವ ಸಿನಿಮಾಗಳು ಬರುತ್ತಿವೆ. ನಾನು ಗಟ್ಟಿ ಪಾತ್ರ, ಕಥೆ ಇರುವ ಸಿನಿಮಾ ಎದುರು ನೋಡುತ್ತಿದ್ದೇನೆ. ಯಾವುದೇ ಸಿನಿಮಾ ಬ್ಯಾಗ್ರೌಂಡ್ ಇರದ‌ ನನಗೆ ನನ್ನ ಮೇಲೆ ವಿಶ್ವಾಸವಿದೆ. ಒಳ್ಳೆಯ ಸಿನಿಮಾ ಕೊಟ್ಟರೆ ಕನ್ನಡಿಗರು ಖಂಡಿತ ಬಿಟ್ಟು ಕೊಡಲ್ಲ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ಸ್ವಪ್ನ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:MangaloreSwapna ShettigarYaava Mohana Murali Kareyitu Bingoಬಿಗೋಮಂಗಳೂರುಯಾವ ಮೋಹನ ಮುರಳಿ ಕರೆಯಿತೋಸ್ವಪ್ನ ಶೆಟ್ಟಿಗಾರ್
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
6 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
6 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
42 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
51 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?