Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಟೆಂಟ್ ನಡೆಸ್ತಿದ್ದವರು ಇಂದು 1,450 ಕೋಟಿ ಒಡೆಯರು, ಅನಧಿಕೃತ ಎಷ್ಟಿದೆಯೋ? – ಡಿಕೆ ಬ್ರದರ್ಸ್ ವಿರುದ್ಧ ಹೆಚ್‌ಡಿಕೆ ಕಿಡಿ

Public TV
Last updated: August 20, 2023 5:04 pm
Public TV
Share
3 Min Read
HD Kumaraswamy 1
SHARE

ರಾಮನಗರ: ಟೆಂಟ್ ನಡೆಸುತ್ತಿದ್ದವರು ಇಂದು 1,450 ಕೋಟಿ ಒಡೆಯರು. ಅಧಿಕೃತ ಆಸ್ತಿಯೇ ಇಷ್ಟು. ಅನಧಿಕೃತ ಅದೆಷ್ಟಿದೆಯೋ ಎಂದು ಡಿಕೆ ಬ್ರದರ್ಸ್ (DK Brothers) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

ಹೆಚ್‌ಡಿಕೆ ಅವಧಿಯಲ್ಲಿ ರಾಮನಗರ (Ramanagara) ಅಭಿವೃದ್ಧಿ ಆಗಿಲ್ಲ. ಕುಡಿಯುವ ನೀರಿನ ಯೋಜನೆಗೆ ಕಾಂಗ್ರೆಸ್ (Congress) ಕೊಡುಗೆ ನೀಡಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆ ಬ್ರದರ್ಸ್ ದೊಡ್ಡಾಲಹಳ್ಳಿ ಹಾಗೂ ಸಾತನೂರಿನಲ್ಲಿ ಟೆಂಟ್ ನಡೆಸುತ್ತಿದ್ದರು. ಈಗ 1,450 ಕೋಟಿ ಅಧಿಕೃತ ಆಸ್ತಿ. ಅನಧಿಕೃತ ಎಷ್ಟಿದೆಯೋ? ಇದೇ ಅವರ ಅಭಿವೃದ್ಧಿ. ಇಂತಹ ಅಭಿವೃದ್ಧಿ ನಾನು ಮಾಡಬೇಕಿತ್ತಾ? ಈ ತಾಲೂಕು ಹಾಗೂ ಜಿಲ್ಲೆಯ ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಆರೋಪಿ ಸಚಿವರಿಗೆ ಸಿಐಡಿ ಅಧಿಕಾರಿಗಳು ತನಿಖೆ ಮಾಹಿತಿ ನೀಡುತ್ತಿದ್ದಾರೆ: ಹೆಚ್‌ಡಿಕೆ

ದೇವೇಗೌಡರ (HD Deve Gowda)  ಕಾಲದಲ್ಲೇ ರಾಮನಗರ ಹಾಗೂ ಚನ್ನಪಟ್ಟಣಕ್ಕೆ ಕುಡಿಯುವ ನೀರು ತರಲಾಯಿತು. ರಾಮನಗರ ಬೆಳೆಯುತ್ತಿರುವ ನಿಟ್ಟಿನಲ್ಲಿ ನಾನು ಹಣಕಾಸು ಮಂತ್ರಿಯಾದಾಗ ಹೆಚ್ಚುವರಿ ಯೋಜನೆ ಮಾಡಿದ್ದೇವೆ. ಆದರೆ 2013ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಕುಡಿಯುವ ನೀರಿನ ಯೋಜನೆಗೆ ಇವರ ಕೊಡುಗೆ ಏನು? ಆಗ ಯಾಕೆ ನೀರು ತರಲಿಲ್ಲ? ಆ ಸಮಯದಲ್ಲಿ ಬಂಡೆ ಒಡೆದುಕೊಂಡು ಕೂತಿದ್ರಾ? ಅಥವಾ ಸಾಕ್ಷಿ ಗುಡ್ಡೆಗಳನ್ನು ರೆಡಿ ಮಾಡಿಕೊಂಡು ಕೂತಿದ್ದರಾ? ಅಭಿವೃದ್ಧಿ ಮಾಡಿರೋದರ ಬಗ್ಗೆ ಸಾಕ್ಷಿ ಗುಡ್ಡೆ ಕೇಳುತ್ತಿರಲಿಲ್ಲ. ಕುಮಾರಸ್ವಾಮಿಯ ಅಭಿವೃದ್ಧಿ ಸಾಕ್ಷಿಗುಡ್ಡೆ ಎಲ್ಲಾ ಕಡೆ ಇದೆ. ನಿಮ್ಮದು ಏನಿದೆ? ಕಲ್ಲು ಬಂಡೆಗಳನ್ನು ಒಡೆದು ಚೀನಾಗೆ ಸಾಗಿಸಿದ್ದೇ ಇವರ ಸಾಕ್ಷಿಗುಡ್ಡೆ. ಮೊದಲು ಲಘುವಾಗಿ ಮಾತನಾಡುವುದನ್ನು ಬಿಡಲಿ. ಅನಿತಾ ಕುಮಾರಸ್ವಾಮಿ ತಂದಿರೋ ಅನುದಾನದಲ್ಲಿ ಕೆಲಸ ಮಾಡುತ್ತಿರುವವರು ಇವರು. ಒಂದು ರೂಪಾಯಿ ಬಿಡುಗಡೆ ಮಾಡಿಸಿ ಕೆಲಸ ಮಾಡಿದ್ದಾರಾ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಧಿಕೃತವಾಗಿ ಪಾರ್ಟಿ ಬಿಟ್ಟು ಹೊಗ್ತೇನೆಂದು ಯಾರೂ ಹೇಳಿಲ್ಲ: ಉಮೇಶ್ ಜಾಧವ್

ಹೆಚ್‌ಡಿಕೆ ಅಧಿಕಾರ ಇದ್ದಾಗ ಹೋಟೆಲ್‌ನಲ್ಲಿ ಕೂತು ಬ್ಯುಸಿನೆಸ್ ಮಾಡುತ್ತಿದ್ದರು ಎಂಬ ಸಂಸದ ಡಿಕೆ ಸುರೇಶ್ (DK Suresh) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊನ್ನೆ ವಿಪಕ್ಷಗಳ ಮೈತ್ರಿ ಸಭೆ ಮಾಡಿದ್ದರಲ್ಲಾ, ಅದನ್ನು ಇವರು ಎಲ್ಲಿ ಮಾಡಿದ್ರು? ಅದೇ ಖಾಸಗಿ ಹೋಟೆಲ್‌ನಲ್ಲಿ ತಾನೇ ಸಭೆ ಮಾಡಿದ್ದು. ನನ್ನಷ್ಟು ಜನರಿಗೆ ಹತ್ತಿರವಾಗಿ ಸಿಗುವವನು ಭೂಮಿ ಮೇಲೆ ಯಾರೂ ಇಲ್ಲ. ಬಡವರಿಗೆ ಹತ್ತಿರವಾಗಿ ಸಿಗುವವರು ನನ್ನನ್ನು ಬಿಟ್ಟರೆ ಯಾರಿದ್ದಾರೆ? ಇವರ ಹತ್ತಿರ ನಾನು ನಡವಳಿಕೆ ಕಲಿಯಬೇಕಾ? ಜನರ ಬಳಿ ಲೂಟಿ ಮಾಡಿಕೊಂಡು ತಿರಗಾಡುತ್ತಾ ಇದ್ದಾರೆ. ಇವನು ಎಂಪಿ ಆಗೋದಕ್ಕೂ ಮುಂಚೆ ಇವನ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂಪಿ ಆಗಿ 8 ವರ್ಷದಲ್ಲಿ ಎಷ್ಟು ಆಸ್ತಿ ಮಾಡಿಕೊಂಡಿದ್ದಾನೆ? ನಾನು ಮಾಡಿದ್ದೀನಾ ಎಂದು ಏಕವಚನದಲ್ಲೇ ಕಿಡಿಕಾರಿದರು. ಇದನ್ನೂ ಓದಿ: ಬಿಜೆಪಿ ಅಂದ್ರೆ ನಮಗೆ ಭಯ – ಸತೀಶ್ ಜಾರಕಿಹೊಳಿ

ನಮ್ಮ ಬಗ್ಗೆ ಜಿಲ್ಲೆಯಲ್ಲಿ ಅಪಪ್ರಚಾರ ಮಾಡಲಾಗಿದೆ. ರಾಮನಗರ ತಾಲೂಕಿಗಾಗಲಿ, ಜಿಲ್ಲೆಗಾಗಲಿ ನನ್ನಿಂದ ಅನ್ಯಾಯ ಆಗಿಲ್ಲ. ನಮ್ಮವರೇ ಕೆಲವರು ದುಡುಕಿನ ನಿರ್ಧಾರ ಮಾಡಿದ್ದಾರೆ. ರಾಮನಗರಕ್ಕೆ ನಮ್ಮ ಕೊಡುಗೆ ಏನೆಂದು ಎಲ್ಲರಿಗೂ ಗೊತ್ತು. ಎಲ್ಲವನ್ನೂ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ರಾಮನಗರಕ್ಕೆ ತಂದಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದು ಅವರು ರಾಮನಗರಕ್ಕೆ ಕೊಡುತ್ತಿರುವ ಬಳುವಳಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ನಿಖಿಲ್‌ಗೆ ಬದುಕಲು ಹಲವು ಮಾರ್ಗಗಳಿವೆ; ರಾಜಕೀಯದಿಂದ ಬದುಕುವ ಅವಶ್ಯಕತೆ ಇಲ್ಲ: ಹೆಚ್‌ಡಿಕೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:congressDK Shivakumardk sureshhd kumaraswamyjdsramanagaraಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಡಿಕೆ ಸುರೇಶ್ರಾಮನಗರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Fordo Nuclear Facility 1
Latest

America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

Public TV
By Public TV
49 seconds ago
Murudeshwara Beach
Districts

ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ

Public TV
By Public TV
26 minutes ago
HD Kumaraswamy 4
Bengaluru City

ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನ ಬೀದಿ-ಬೀದಿಗಳಲ್ಲಿ ಮಾತಾಡ್ತಿದ್ದಾರೆ: ಹೆಚ್‌ಡಿಕೆ

Public TV
By Public TV
29 minutes ago
Vijay
Cinema

ವಿಜಯ್ ದಳಪತಿ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್

Public TV
By Public TV
56 minutes ago
Eshwar Khandre 3
Bengaluru City

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ವೀರಶೈವ ಲಿಂಗಾಯತರ ಕೊಡುಗೆ ಅಪಾರ: ಈಶ್ವರ್ ಖಂಡ್ರೆ

Public TV
By Public TV
1 hour ago
Theft
Bengaluru City

ಮಕ್ಕಳ ಕಾಲೇಜು ಫೀಸ್‌ಗೆ ಸಾಲ ಮಾಡಿ ತಂದಿಟ್ಟ ಹಣವನ್ನೇ ದೋಚಿದ ಖದೀಮರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?