Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

Nagara Panchami : ವಾಸುಕಿಯನ್ನು ಹಿಡಿದು ಎಳೆದಾಡಿದ ದೇವತೆಗಳು, ರಾಕ್ಷಸರು!

Public TV
Last updated: August 20, 2023 9:41 pm
Public TV
Share
3 Min Read
Nagara Panchami Special What is the role of Vasuki in Samudra Manthan
SHARE

ಪುರಾಣ ಕಥೆಗಳಲ್ಲಿ ದೇವತೆಗಳಿಗೆ ಅಮೃತ ಸಿಕ್ಕಿದ್ದನ್ನು ನೀವು ಓದಿರಬಹುದು. ಈ ಅಮೃತ ಸಿಗುವಲ್ಲಿ ವಾಸುಕಿಯ (Vasuki) ಪಾತ್ರವೂ ದೊಡ್ಡದು. ಶಿವನ ಅಷ್ಟಸರ್ಪಗಳಾದ ಅನಂತ (ಶೇಷ), ವಾಸುಕಿ, ತಕ್ಷಕ, ಕುಲಿಕ, ಕಾರ್ಕೋಟಕ, ಪದ್ಮ, ಮಹಾಪದ್ಮ, ಶಂಖಪಾಲ ಇವುಗಳಲ್ಲಿ ಒಬ್ಬ. ಕಶ್ಯಪನಿಂದ ಕದ್ರುವಿನಲ್ಲಿ ಜನಿಸಿದ ವಾಸುಕಿಯು ಶಿವನ ಕುತ್ತಿಗೆಯ ಸುತ್ತ ಸುತ್ತಿಕೊಂಡಿರುವುದರಿಂದ ಪ್ರಸಿದ್ಧನಾಗಿದ್ದಾನೆ. ಶಿವನು ಇವನನ್ನು ಆಶೀರ್ವದಿಸಿ ಆಭರಣವಾಗಿ ಧರಿಸಿದ್ದಾನೆ. ನಾಗರ ಪಂಚಮಿಯ (Nagara Panchami) ಹಬ್ಬದ ಹಿನ್ನೆಲೆಯಲ್ಲಿ ಸಮುದ್ರ ಮಂಥನದ (Samudra Manthan) ಕಿರು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ದುರ್ವಾಸ ಮುನಿ ಶಿಷ್ಯರೊಂದಿಗೆ ಶಿವನನ್ನು ಭೇಟಿಯಾಗಲು ಕೈಲಾಸದತ್ತ ಪ್ರಯಾಣ ಬೆಳೆಸುತ್ತಿದ್ದಾಗ ದಾರಿ ಮಧ್ಯೆ ದೇವೇಂದ್ರ ಸಿಗುತ್ತಾನೆ. ದೇವೇಂದ್ರ ದುರ್ವಾಸ ಮುನಿಗಳಿಗೆ ನಮಸ್ಕರಿಸಿ ಗೌರವದಿಂದ ಕಾಣುತ್ತಾನೆ. ದೇವೇಂದ್ರನ ಗುರು ಭಕ್ತಿಗೆ ಮೆಚ್ಚಿದ ದುರ್ವಾಸರು ಆತನಿಗೆ ವಿಶೇಷ ಹೂವಿನ ಹಾರವನ್ನು ಕೊಡುತ್ತಾರೆ. ಇಂದ್ರನು ಹೂವಿನ ಹಾರವನ್ನು ತನ್ನ ವಾಹನವಾದ ʼಐರಾವತʼದ ಸೊಂಡಿಲಿನ ಮೇಲಿಡುತ್ತಾನೆ.

ಹೂವಿನ ಹಾರದ ಸುವಾಸನೆ ಐರಾವತಕ್ಕೆ ಕಿರಿಕಿರಿ ಉಂಟುಮಾಡುತ್ತದೆ. ಕೊನೆಗೆ ಸೊಂಡಿಲಿನಿಂದ ಹಾರವನ್ನು ನೆಲಕ್ಕೆ ಎಸೆಯುತ್ತದೆ. ಇದನ್ನು ನೋಡಿದ ದುರ್ವಾಸರು, ಈ ಹಾರವು ಸಿರಿ ಮತ್ತು ಭಾಗ್ಯದ ಸಂಕೇತವಾಗಿದ್ದು, ಅದನ್ನು ಪ್ರಸಾದವಾಗಿ ನೀನು ನೋಡಬೇಕಿತ್ತು. ಆದರೆ ಅದನ್ನು ಆನೆಯ ಮೇಲೆ ಹಾಕಿದ್ದು ಸರಿಯಲ್ಲ. ಇದು ನೀನು ನನಗೆ ಮಾಡಿದ ಅವಮಾನ ಎಂದು ಹೇಳಿ ದೇವಲೋಕದಲ್ಲಿನ ಎಲ್ಲಾ ದೇವತೆಗಳ ಶಕ್ತಿ, ಸಾಮರ್ಥ್ಯ ಹಾಗೂ ವರಗಳು ನಾಶವಾಗಲಿ ಎಂದು ಶಾಪ ನೀಡುತ್ತಾರೆ. ದುರ್ವಾಸರ ಶಾಪದಿಂದ ಲಕ್ಷ್ಮಿ ಸ್ವರ್ಗ ಲೋಕವನ್ನು ತೊರೆಯುತ್ತಾಳೆ. ಇದನ್ನೂ ಓದಿ: Naga Panchami 2023: ಬಾಯಲ್ಲಿ ನೀರೂರಿಸುವ ಅಳ್ಳಿಟ್ಟು, ಅರಿಶಿನ ಎಲೆ ಕಡುಬು ಮಾಡಿ ನೋಡಿ

ದುರ್ವಾಸರ ಶಾಪದ ವಿಚಾರವನ್ನು ತಿಳಿದ ರಾಕ್ಷಸರು ದೇವಲೋಕದ ಮೇಲೆ ದಾಳಿ ಮಾಡುತ್ತಾರೆ. ದೇವರನ್ನು ಸೋಲಿಸಿ ಆಡಳಿತ ಮಾಡಲು ಆರಂಭಿಸುತ್ತಾರೆ. ದೇವಲೋಕವನ್ನು ಕಳೆದ ದು:ಖದಲ್ಲಿ ದೇವೇಂದ್ರ ಮತ್ತು ದೇವತೆಗಳು ಬ್ರಹ್ಮನ ಬಳಿ ಹೋಗಿ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತಾರೆ. ಇದಕ್ಕೆ ಬ್ರಹ್ಮ ಲಕ್ಷ್ಮಿಯನ್ನು ಕಳೆದುಕೊಂಡಿದ್ದರಿಂದ ವಿಷ್ಣುವಿನ ಬಳಿ ಹೋಗಿ ನೀವು ಪ್ರಾರ್ಥಿಸಿ. ಆತ ನಿಮಗೆ ಸಹಾಯ ಮಾಡುತ್ತಾನೆ ಎಂದು ಹೇಳುತ್ತಾನೆ.

Nagara Panchami 7

ವೈಕುಂಠಕ್ಕೆ ದೇವತೆಗಳು ಬಂದಾಗ ಎಲ್ಲಾ ವಿಚಾರಗಳನ್ನು ತಿಳಿದಿದ್ದ ವಿಷ್ಣು ಸದ್ಯ ಈಗ ಏನು ಮಾಡಲು ಸಾಧ್ಯವಿಲ್ಲ. ಮುಂದೆ ರಾಕ್ಷಸರ ಅಧಿಕಾರದ ಸಮಯ ಅಂತ್ಯವಾಗಲಿದೆ. ಸಮಯ ಅಂತ್ಯವಾಗುವ ಮೊದಲು ಅವರ ಜೊತೆ ಸ್ನೇಹ ಬೆಳೆಸಬೇಕು. ರಾಕ್ಷಸರಿಂದ ಮುಕ್ತಿ ಪಡೆಯಬೇಕೆಂದರೆ ಸಮುದ್ರ ಮಂಥನವಾಗಬೇಕು. ಸಮುದ್ರ ಮಂಥನ ನಿಮ್ಮ ಒಬ್ಬರಿಂದ ಸಾಧ್ಯವಿಲ್ಲ. ರಾಕ್ಷಸರ ಸಹಾಯವೂ ಬೇಕು. ಸಮುದ್ರ ಮಂಥನವಾದಾಗ ಅಮೃತ ಬರುತ್ತದೆ. ಈ ಅಮೃತವನ್ನು ನೀವು ಸೇವಿಸಿದರೆ ಮುಂದೆ ರಾಕ್ಷಸರಿಗೆ ಏನು ಮಾಡಲು ಸಾಧ್ಯವಿಲ್ಲ. ಈ ಅಮೃತವನ್ನು ಹಂಚುವ ಕೆಲಸ ನಾನು ಮಾಡುತ್ತೇನೆ ಎಂದು ಅಭಯ ನೀಡುತ್ತಾನೆ. ಇದನ್ನೂ ಓದಿ: ‘ನಾಗರಪಂಚಮಿ’ ವಿಶೇಷತೆ ಏನು?

ದೇವತೆಗಳು ಸಮುದ್ರ ಮಥನದ ಬಗ್ಗೆ ರಾಕ್ಷಸರಲ್ಲಿ ತಿಳಿಸಿದಾಗ ಅವರು ಒಪ್ಪಿಗೆ ನೀಡುತ್ತಾರೆ. ಸಮದ್ರವನ್ನು ಕಡೆಯಲು ಮಂದಾರ ಪರ್ವತವನ್ನು ಕಡೆಗೋಲಾಗಿ ಬಳಸಲಾಯಿತು. ಮಹಾದೇವನ ಸರ್ಪವಾದ ವಾಸುಕಿಯು ಹಗ್ಗವಾಗಿ ನಾನು ಬರುತ್ತೇನೆ ಎಂದು ಹೇಳಿದ. ರಾಕ್ಷಸರು ಮಂದಾರ ಪರ್ವತವನ್ನು ಸುತ್ತಿದ ವಾಸುಕಿಯ ಹೆಡೆಯನ್ನು ಹಿಡಿದರೆ ದೇವತೆಗಳು ಬಾಲವನ್ನು ಹಿಡಿದು ಕಡೆಯಲು ಆರಂಭಿಸಿದರು.

ದೇವತೆಗಳು, ರಾಕ್ಷಸರು ಕಡೆಯುವ ರಭಸಕ್ಕೆ ಮಂದಾರ ಪರ್ವತ ಕುಸಿಯಲು ಆರಂಭವಾದಾಗ ವಿಷ್ಣು ಕೂರ್ಮಾ (ಆಮೆ) ಅವತಾರವನ್ನು ತಾಳಿ ತನ್ನ ಬೆನ್ನಿನ ಮೇಲೆ ಬೆಟ್ಟವನ್ನು ಹೊತ್ತುಕೊಂಡನು.

 

ಸಮುದ್ರ ಮಂಥನ ಮಾಡುವಾಗ ಕೇವಲ ಅಮೃತ ಮಾತ್ರವಲ್ಲ, ವಿಷವು ಸಮುದ್ರದಿಂದ ಹೊರಬಂತು. ಈ ವಿಷವು ವಿಶ್ವವನ್ನೇ ನಾಶ ಮಾಡುವ ಶಕ್ತಿಯನ್ನು ಹೊಂದಿತ್ತು. ಕ್ಷೀರ ಸಮುದ್ರದಿಂದ ಹಾಲಾಹಲದ ಪರಿಣಾಮ ಗೋಚರಿಸುತ್ತಿದ್ದಂತೆ ದೇವತೆಗಳು ಶಿವನ ಬಳಿ ಹೋಗಿ ಪೃಥ್ವಿಯನ್ನು ರಕ್ಷಿಸು ಎಂದು ಮೊರೆಯಿಟ್ಟರು. ಶಿವನು ವಿಷವನ್ನು ಸೇವಿಸಿ, ತನ್ನ ಗಂಟಲಲ್ಲೇ ಹಿಡಿದಿಟ್ಟುಕೊಳ್ಳುತ್ತಾನೆ. ಜೀವಕೋಟಿಯ ಮೇಲಿನ ಅನುಕಂಪದಿಂದ ವಿಷವನ್ನು ನುಂಗಿ ತನ್ನ ಕಂಠದಲ್ಲಿ ಹಿಡಿದಿಟ್ಟ ಪರಿಣಾಮ ಶಿವನ ಕಂಠವು ನೀಲಿ ಬಣ್ಣಕ್ಕೆ ತಿರುಗುತ್ತದೆ. ಆದ್ದರಿಂದ ಶಿವನನ್ನು ನೀಲಕಂಠನೆಂದು ಕರೆಯುತ್ತಾರೆ. ಕ್ಷೀರಸಾಗರದಿಂದ ಅಮೃತವು ಹೊರಬಂದಾಗ ವಿಷ್ಣು ಮೋಹಿನಿ ಅವತಾರವನ್ನು ಧರಿಸಿ ದೇವರುಗಳು ಅಮೃತವನ್ನು ಸೇವಿಸುವಂತೆ ಮಾಡುತ್ತಾನೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:nagara panchamiSamudra ManthanVasukiಅಮೃತನಾಗರ ಪಂಚಮಿವಾಸುಕಿಸಮುದ್ರ ಮಂಥನ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
9 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
10 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
11 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
12 hours ago

You Might Also Like

SRH
Cricket

ಸನ್‌ ರೈಸರ್ಸ್‌ಗೆ 110 ರನ್‌ಗಳ ಭರ್ಜರಿ ಗೆಲುವು – ಸೋಲಿನ ವಿದಾಯ ಹೇಳಿದ ಕೆಕೆಆರ್‌

Public TV
By Public TV
4 hours ago
Pakistan Rain
Latest

ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

Public TV
By Public TV
5 hours ago
Shiekh Hasina
Latest

ಬಾಂಗ್ಲಾದೇಶವನ್ನ ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ – ಯೂನಸ್ ವಿರುದ್ಧ ಶೇಖ್ ಹಸೀನಾ ಬಾಂಬ್‌

Public TV
By Public TV
5 hours ago
Corona
Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
By Public TV
6 hours ago
Heinrich Klaasen
Cricket

ಕ್ಲಾಸೆನ್‌ ಕ್ಲಾಸಿಕ್‌ ಶತಕ – ಸನ್‌ ರೈಸರ್ಸ್‌ ಆರ್ಭಟಕ್ಕೆ ದಾಖಲೆಗಳು ಧೂಳಿಪಟ

Public TV
By Public TV
7 hours ago
Udupi Rain 1
Districts

ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?