ಶಿವಮೊಗ್ಗ: ಈದ್ ಮಿಲಾದ್ ಹಬ್ಬದ (Eid Milad Festival) ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ (Shikaripura) ಕೆಹೆಚ್ಬಿ ಬಡಾವಣೆಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ಹಲವರು ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆಯಾದ ಕಾರಣ ಸಭೆಯನ್ನ ಅರ್ಧಕ್ಕೆ ಮೊಟುಕುಗೊಂಡಿದೆ. ಇದನ್ನೂ ಓದಿ: ಹೊಳೆಹೊನ್ನೂರು ಗಾಂಧಿ ಸರ್ಕಲ್ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ
ಸೋಮವಾರ ಮಧ್ಯಾಹ್ನ ಗಲಾಟೆ ನಡೆದ ಯುವಕರ ನಡುವೆ ರಾಜಿ ಸಂಧಾನ ನಡೆಸಲು ಎರಡು ಗುಂಪಿನ ಯುವಕರನ್ನ ಕರೆಸಿದ್ದರು. ಆದರೆ ಮತ್ತೆ ಪುನಃ ಗಲಾಟೆ ನಡೆದು, ಜಾಫರ್ ಎಂಬಾತನ ಎದೆಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ಇನ್ನೂ ಘಟನೆ ನಂತರ ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ
Web Stories