Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚಂದ್ರನ ಮೇಲೆ ಭಾರತ – 14 ದಿನಗಳ ನಂತ್ರ ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌ ಕಥೆ ಏನು?

Public TV
Last updated: August 24, 2023 8:07 pm
Public TV
Share
3 Min Read
Chandrayaan 3 rover to imprint ISRO logo national emblem on the moon 1
SHARE

ಬೆಂಗಳೂರು: ಚಂದ್ರಯಾನ- 3 (Chandrayaan-3) ಮಿಷನ್‌ ಸಕ್ಸಸ್‌ ಆಗಿದ್ದು ವಿಕ್ರಮ್‌ ಲ್ಯಾಂಡರ್‌ (Vikram Lander) ದಕ್ಷಿಣ ಧ್ರುವದ ಮೇಲ್ಮೈನಲ್ಲಿ ಯಶಸ್ವಿಯಾಗಿ ಕಾಲಿಟ್ಟಿದೆ. 6 ವೈಜ್ಞಾನಿಕ ಪೇಲೋಡ್‌ಗಳನ್ನು (Scientific Payloads) ಹೊತ್ತು ತಂದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಅಂಗಳದಲ್ಲಿ ನಡೆದಾಡಲು ಶುರು ಮಾಡಿದೆ.

ಲ್ಯಾಂಡರ್‌ ಹಾಗೂ ರೋವರ್‌ ಜೀವಿತಾವಧಿ ಕೇವಲ 1 ಚಂದ್ರನ ದಿನ (ಭೂಮಿಯ 14 ದಿನಗಳು) ಮಾತ್ರ. ವಿಕ್ರಮ್ ಮತ್ತು ಪ್ರಗ್ಯಾನ್‌ಗೆ (Pragyan Rover) ಅಲ್ಲಿ ಅಧ್ಯಯನ ನಡೆಸಲು ಇರುವ ಸಮಯವಿದು. ಅಷ್ಟರ ಒಳಗೆ ಈ ಎರಡೂ ತಂತ್ರಜ್ಞಾನಗಳು ವಿಜ್ಞಾನಿಗಳ ಕುತೂಹಲ ತಣಿಸುವ ಮಹತ್ವದ ಅಂಶಗಳನ್ನ ಭೂಮಿಗೆ ರವಾನಿಸಬೇಕಿದೆ. ಏಕೆಂದರೆ 14 ದಿನಗಳು ಕಳೆದ ಬಳಿಕ ಕಾರ್ಯಾಚರಣೆ ನಡೆಸಲು ಅಲ್ಲಿ ಬೇಕಾದ ಸೌರಶಕ್ತಿ ಸಿಗುವುದಿಲ್ಲ. ಹಾಗಾದರೆ 14 ದಿನಗಳ ನಂತರ ಇವೆರಡ ಕಥೆ ಏನು ಎಂಬುದೇ ಪ್ರಶ್ನೆ.

ISRO 1

ಚಂದ್ರನಲ್ಲಿ 14 ದಿನಗಳು ಹಗಲು, 14 ದಿನಗಳು ಇರುಳು ಕವಿದಿರುತ್ತದೆ. ಇರುಳಿನ ಸಂದರ್ಭದಲ್ಲಿ ಸೌರ ಶಕ್ತಿ ಇಲ್ಲದ ಕಾರಣ ಅವು (ವಿಕ್ರಮ್‌ ಲ್ಯಾಂಡರ್‌ ಮತ್ತು ಪ್ರಗ್ಯಾನ್‌ ರೋವರ್‌) ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವುದಿಲ್ಲ. ಮುಖ್ಯವಾಗಿ ಕತ್ತಲಿನಲ್ಲಿ ಚಂದ್ರನ ಮೇಲ್ಮೈ ತಾಪಮಾನ -208 ಡಿಗ್ರಿ ಫ್ಯಾರನ್‌ ಹೀಟ್ ಅಥವಾ -133 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ಇಷ್ಟು ಚಳಿಯ ವಾತಾವರಣದಲ್ಲಿ ಕಾರ್ಯಾಚರಣೆ ನಡೆಸುವಷ್ಟು ಸಾಮರ್ಥ್ಯ ಲ್ಯಾಂಡರ್, ರೋವರ್ ಹಾಗೂ ಅವುಗಳಲ್ಲಿನ ಪೇಲೋಡ್‌ಗಳಲ್ಲಿ ಇರುವುದಿಲ್ಲ. ಹೀಗಾಗಿ ಕಾರ್ಯಾಚರಣೆ ವೇಳೆ ಅವು ಸಾಕಷ್ಟು ಸಮಸ್ಯೆ ಎದುರಿಸಬಹುದು. ಈ ಅವಧಿಯಲ್ಲಿ ಕೂಡ ಚಂದ್ರನ ಮೇಲಿನ ಲ್ಯಾಂಡರ್ ಜೊತೆ ರೋವರ್ ಸಂಪರ್ಕದಲ್ಲಿ ಇರುತ್ತದೆ. ಅದರ ಮೂಲಕ ಬೆಂಗಳೂರಿನಲ್ಲಿರುವ ಇಸ್ರೋದ ಮಿಷನ್ ಕಮಾಂಡ್ ಕೇಂದ್ರಕ್ಕೆ ಮಾಹಿತಿಗಳು ರವಾನೆಯಾಗುತ್ತದೆ. ಈ ವೇಳೆಯಲ್ಲಿ ರೋವರ್ ಜೊತೆಗೆ ಇಸ್ರೋ ನೇರ ಸಂಪರ್ಕ ಹೊಂದಿರುವುದಿಲ್ಲ.

ISRO PHOTO

14 ದಿನಗಳ ನಂತರ ಮುಂದೇನು?
ಚಂದ್ರನ ಕತ್ತಲೆಯ ಅವಧಿ ಮುಗಿದ ಬಳಿಕ ಅಥವಾ ಅಮಾವಾಸ್ಯೆ ಅವಧಿ ಕಳೆದ ಮೇಲೆ ಮತ್ತೆ ದಕ್ಷಿಣ ಧ್ರುವದ ಮೇಲೆ ಸೂರ್ಯ ರಶ್ಮಿ ಬೀಳುತ್ತದೆ. ಆಗ ರೋವರ್ ಹಾಗೂ ಲ್ಯಾಂಡರ್ ಪುನಃ ಸಕ್ರಿಯವಾಗುತ್ತವೆಯೇ? ಅದರ ಸಾಧ್ಯತೆ ತೀರಾ ಕಡಿಮೆಯಾದರೂ ಅಲ್ಲಗಳೆಯಲಾಗದು. ಹಾಗೊಮ್ಮೆ ರೋವರ್ ಮತ್ತು ಲ್ಯಾಂಡರ್ ಸಕ್ರಿಯವಾಗಿದ್ದರೆ ಅದು ವಿಜ್ಞಾನದ ಅದೃಷ್ಟವಾಗಿರಲಿದೆ. ಅದರ ಯಂತ್ರಗಳು 14 ದಿನಗಳ ವಿಪರೀತ ಚಳಿ ಸಹಿಸಿಕೊಂಡು, ಬಿಸಿಲು ಬಿದ್ದಾಗ ಕಾರ್ಯಾಚರಣೆ ನಡೆಸಿದರೆ, ಮತ್ತೆ 14 ದಿನಗಳ ಅಧ್ಯಯನಕ್ಕೆ ಅವಕಾಶ ಸಿಗಲಿದೆ. ಇದನ್ನೂ ಓದಿ: ನಮ್ಗೆ ಚಂದ್ರನ ಬಳಿಗೆ ಹೋಗುವ ಅಗತ್ಯವಿಲ್ಲ, ಚಂದ್ರನ ಮೇಲೆಯೇ ಬದುಕುತ್ತಿದ್ದೇವೆ: ಪಾಕ್‌ ಪ್ರಜೆ ವ್ಯಂಗ್ಯ

ISRO LANDER

ಯೋಜನೆ ಮುಗಿದ ಬಳಿಕ ಏನು?
ಚಂದ್ರನಲ್ಲಿನ ತಮ್ಮ ಹೊಣೆಗಾರಿಕೆ ಪೂರ್ಣಗೊಳಿಸಿದ ನಂತರ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ವಾಪಸ್ ಭೂಮಿಗೆ ಬರುವುದಿಲ್ಲ. ಚಂದ್ರಲೋಕಕ್ಕೆ ತೆರಳಿದ ಅವುಗಳ ಜೀವನ ಅಲ್ಲಿಯೇ ಅಂತ್ಯಗೊಳ್ಳಲಿವೆ. ತಮ್ಮ ಪ್ರಯೋಗಗಳನ್ನು ಮುಗಿಸಿದ ರೋವರ್ ಹಾಗೂ ಲ್ಯಾಂಡರ್ ಚಂದಮಾಮನಲ್ಲಿ ಪಳೆಯುಳಿಕೆಗಳಾಗಿ ಉಳಿಯಲಿವೆ. ಮುಂದೊಂದು ದಿನ ಚಂದ್ರನ ಅಂಗಳಕ್ಕೆ ಮಾನವ ಕಾಲಿಟ್ಟಾಗ ಚಂದ್ರನ ಮೇಲೆ ಆಟಿಕೆಗಳಂತೆ ಕಾಣುವ ಈ ಲ್ಯಾಂಡರ್ ಮತ್ತು ರೋವರ್ ಸಿಗಬಹುದು. ಚಂದ್ರಯಾನ-2ರ ಪುಡಿಯಾದ ಲ್ಯಾಂಡರ್‌ನ ಅವಶೇಷಗಳೂ ಕಾಣಿಸಬಹುದು ಎನ್ನಲಾಗಿದೆ. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌ – ವಿಕ್ರಮ್‌ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?

CHANDRAYAAN LANDING

ದಕ್ಷಿಣ ಧ್ರುವ ಆಯ್ಕೆ ಮಾಡಿಕೊಂಡಿದ್ದೇಕೆ?
ಭಾರತ ಚಂದ್ರನ ದಕ್ಷಿಣ ಧ್ರುವದ ಬಳಿ ಸಾಫ್ಟ್‌ ಲ್ಯಾಂಡಿಗ್‌ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಗೆ ಸಾಧಿಸಿದೆ. ದಕ್ಷಿಣ ಧ್ರುವ ಪ್ರದೇಶವು ನಾಸಾದ ಸಿಬ್ಬಂದಿ ಅಪೊಲೊ ಲ್ಯಾಂಡಿಂಗ್‌ಗಳು ಸೇರಿದಂತೆ ಇತರ ಕಾರ್ಯಾಚರಣೆಗಳಿಂದ ಗುರಿಯಾಗಿರುವ ಸಮಭಾಜಕ ಪ್ರದೇಶದಿಂದ ದೂರವಿದೆ. ಇಲ್ಲಿನ ಪ್ರದೇಶ ಕುಳಿಗಳು ಮತ್ತು ಆಳವಾದ ಕಂದಕಗಳಿಂದ ಕೂಡಿರುತ್ತದೆ. ಚಂದ್ರಯಾನ-3 ಮಿಷನ್‌ನ ಸಂಶೋಧನೆಗಳು ಚಂದ್ರನ ನೀರಿನ ಮಂಜುಗಡ್ಡೆಯ ಅಧ್ಯಯನವನ್ನ ಮುಂದುವರಿಸಬಹುದು. ಜೊತೆಗೆ ಚಂದ್ರನ ಮೇಲ್ಮೈನಲ್ಲಿರುವ ಇತರೇ ಅತ್ಯಮೂಲ್ಯ ಸಂಪನ್ಮೂಲಗಳ ಅಧ್ಯಯನ ಗುರಿ ಹೊಂದಿದೆ. ಅದಕ್ಕಾಗಿ ಭಾರತ ದಕ್ಷಿಣ ಧ್ರುವವನ್ನ ಆಯ್ಕೆ ಮಾಡಿಕೊಂಡಿದೆ.

ಜುಲೈ 14 ರಂದು ಚಂದ್ರಯಾನ-3 ನೌಕೆಯನ್ನ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು. 41 ದಿನಗಳ ಸುದೀರ್ಘ ಪ್ರಯಾಣದ ನಂತರ ವಿಕ್ರಮ್‌ ಲ್ಯಾಂಡರ್‌ ಚಂದ್ರಯನ ಮೇಲೆ ಯಶಸ್ವಿಯಾಗಿ ಕಾಲಿಟ್ಟಿತು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Chandrayaan-3ISROScientific PayloadsVikram Landerಚಂದ್ರಯಾನಪ್ರಗ್ಯಾನ್‌ ರೋವರ್‌ವಿಕ್ರಮ್ ಲ್ಯಾಂಡರ್ಶ್ರೀಹರಿಕೋಟಾ
Share This Article
Facebook Whatsapp Whatsapp Telegram

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
28 minutes ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
47 minutes ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
52 minutes ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
1 hour ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
2 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?