ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ (Vijay Raghavendra) ಅವರ ಮನೆಗೆ ಸುದೀಪ್ ದಂಪತಿ ಭೇಟಿ ನೀಡಿದ್ದರು. ಸ್ಪಂದನಾ (Spandana) ನಿಧನದ ಹಿನ್ನೆಲೆ ಸಾಂತ್ವನ ಹೇಳಲು ವಿಜಯ ಮನೆಗೆ ಸುದೀಪ್, ಪ್ರಿಯಾ ದಂಪತಿ ಬಂದಿದ್ದರು.
ಜಕ್ಕೂರಿನಲ್ಲಿರುವ ವಿಜಯ ರಾಘವೇಂದ್ರ ಮನೆಗೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಜೊತೆ ನಿರ್ಮಾಪಕ ಕಾರ್ತಿಕ್ ಗೌಡ ಕೂಡ ಆಗಮಿಸಿದ್ದರು. ಶ್ರೀಮುರಳಿ ಮತ್ತು ವಿಜಯ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ:ಸುದೀಪ್ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡಲಿದ್ದಾರೆ ಪತ್ನಿ ಪ್ರಿಯಾ
ವಿಜಯ-ಸ್ಪಂದನಾ ಪ್ರೀತಿಸಿ ಗುರುಹಿರಿಯರ ಸಮ್ಮತಿ ಪಡೆದು ಮಾದುವೆಯಾಗಿದ್ದರು. ಈ ಜೋಡಿಗೆ ಪುತ್ರ ಶೌರ್ಯ ಜನಿಸಿದರು. ಕಳೆದ ತಿಂಗಳು ಕುಟುಂಬದ ಆಪ್ತರ ಜೊತೆ ಥೈಲ್ಯಾಂಡ್ಗೆ ಹೋಗಿದ್ದಾಗ, ಹಾರ್ಟ್ ಅಟ್ಯಾಕ್ನಿಂದ ವಿಜಯ ಪತ್ನಿ ನಿಧನರಾದರು. ಸ್ಪಂದನಾ ಅಗಲಿಕೆ ವಿಜಯ ಕುಟುಂಬಕ್ಕೆ ಶಾಕ್ ಕೊಟ್ಟಿದೆ.