ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅನೇಕ ಜಿಲ್ಲೆಗಳಲ್ಲಿ ಮಳೆ ಸುರಿದ ಪರಿಣಾಮ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮಳೆ ಕೊರತೆಯಿಂದ ಒಣಗುತ್ತಿದ್ದ ಬೆಳೆಗೆ ಜೀವಕಳೆ ಬಂದಿದೆ. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 22 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 24-19
ಮಂಗಳೂರು: 30-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 29-21
ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 27-21
ಹಾಸನ: 27-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 22-18
ಕೋಲಾರ: 26-20
ತುಮಕೂರು: 24-20
ಉಡುಪಿ: 30-24
ಕಾರವಾರ: 29-25
ಚಿಕ್ಕಮಗಳೂರು: 25-18
ದಾವಣಗೆರೆ: 25-21
ಹುಬ್ಬಳ್ಳಿ: 24-21
ಚಿತ್ರದುರ್ಗ: 24-20
ಹಾವೇರಿ: 25-22
ಬಳ್ಳಾರಿ: 25-22
ಗದಗ: 24-21
ಕೊಪ್ಪಳ: 24-21
ರಾಯಚೂರು: 26-22
ಯಾದಗಿರಿ: 25-22
ವಿಜಯಪುರ: 26-22
ಬೀದರ್: 26-22
ಕಲಬುರಗಿ: 26-23
ಬಾಗಲಕೋಟೆ: 26-22
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]