Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಸಮುದ್ರಂ’ ಚಿತ್ರದ ವಿವಾದ : ನಟಿ ಅನಿತಾ ಭಟ್ ಪ್ರತಿಕ್ರಿಯೆ ಏನು?

Public TV
Last updated: September 4, 2023 10:10 am
Public TV
Share
3 Min Read
Anitha bhat 2
SHARE

ತಮ್ಮ ನಿರ್ಮಾಣದ ‘ಸಮುದ್ರಂ’ (Samudram) ಸಿನಿಮಾದ ಹಾರ್ಡ್ ಡಿಸ್ಕ್ ನೀಡಿಲ್ಲವೆಂದು ಮತ್ತು ಹಾಡ್ಸ್ ಡಿಸ್ಕ್ ಕೊಡುವಂತೆ ಕೇಳಿದರೆ ಚಿತ್ರದ ಸಿನಿಮಾಟೋಗ್ರಾಫರ್ ರಿಶಿಕೇಷ್ (Rishikesh) ಎನ್ನುವವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈ ಕುರಿತಂತೆ ಸಿನಿಮಾದ ನಾಯಕಿ ಮತ್ತು ಚಿತ್ರಕ್ಕೆ ಸಹಯೋಗ ನೀಡಿರುವ ಅನಿತಾ ಭಟ್ (Anita Bhatt) ಪ್ರತಿಕ್ರಿಯೆ ನೀಡಿದ್ದಾರೆ.

Rishikesh

‘ಈ ಸಿನಿಮಾ ಶುರು ಮಾಡಿದ್ದು ನಾವೇ. ನಾನೇ ಈ ಸಿನಿಮಾವನ್ನು ಮೊದಲು ನಿರ್ಮಾಣ ಮಾಡಿದ್ದು. ಆನಂತರ ಹಣಕಾಸಿನ ತೊಂದರೆ ಆದ ಕಾರಣಕ್ಕಾಗಿ ನಿರ್ದೇಶಕ ರಾಘವ ಮಹರ್ಷಿ ಅವರು ರಾಜಲಕ್ಷ್ಮಿ ಅವರನ್ನು ಕರೆತಂದರು. ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಆದರೆ, ರಾಜಲಕ್ಷ್ಮಿ (Rajalakshmi) ನಿರ್ಮಾಪಕರು ತಾವೊಬ್ಬರೇ ನಿರ್ಮಾಣ ಮಾಡುತ್ತೇನೆ ಎಂದು ಹೇಳಿದರು. ಅದಕ್ಕೂ ಒಪ್ಪಿ, ನಾವು ಈವರೆಗೂ ಮಾಡಿರುವ ಖರ್ಚನ್ನು ಕೊಡುವಂತೆ ಕೇಳಿದಾಗ ಒಪ್ಪಿಕೊಂಡರು. ಈವರೆಗೂ ಅವರು ಹಣ ಕೊಟ್ಟಿಲ್ಲ’ ಎನ್ನುತ್ತಾರೆ ಅನಿತಾ ಭಟ್.

Samudram 1

ಮುಂದುವರೆದು ಮಾತನಾಡಿದ ಅನಿತಾ, ‘ಟೆಕ್ನಿಷನ್ ಗೆ ಕೊಡಬೇಕಾದ ಹಣ ಇನ್ನೂ ಬಾಕಿ ಉಳಿಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್ ರಿಶಿಕೇಷ ಅವರಿಗೂ ದುಡ್ಡು ಕೊಡಬೇಕು. ಹಾಗಾಗಿ ಇಬ್ಬರ ಮಧ್ಯ ಮನಸ್ತಾಪವಾಗಿದೆ. ಈ ದೂರು ಕೊಡುವುದು ಇವತ್ತಿನದ್ದೇನೂ ಅಲ್ಲ. ಈ ಹಿಂದೆ ಎರಡ್ಮೂರು ಬಾರಿ ಹೀಗೆ ಮಾಡಿ ತೊಂದರೆ ಕೊಟ್ಟಿದ್ದಾರೆ. ಇದರಲ್ಲಿ ರಿಶಿಕೇಷ್ ಅವರದ್ದು ಯಾವುದೇ ತಪ್ಪಿಲ್ಲ’ ಅಂತಾರೆ ಅನಿತಾ ಭಟ್.

Samudram 2

‘ರಾಜಲಕ್ಷ್ಮಿ ಅವರ ವಿರುದ್ಧ ನಾವೂ ಕೂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೆವು. ಸಿನಿಮಾ ರಿಲೀಸ್ ಆದ ನಂತರ ಹಣ ಕೊಡುವುದಾಗಿ ಅವರು ಹೇಳಿದರು. ಆದರೆ, ಈಗ ಅವರ ವರ್ತನೆಯೇ ಬೇರೆಯಾಗಿದೆ. ಆ ಸಿನಿಮಾಗಾಗಿ ಈಗಲೂ ಎಲ್ಲರೂ ಕೆಲಸ ಮಾಡುತ್ತಾರೆ. ಆದರೆ, ಕೊಡಬೇಕಾದ ಹಣವನ್ನು ಕೊಡಬೇಕು’ ಎನ್ನುವುದು ಅನಿತಾ ಭಟ್ ಮಾತು.

Anitha bhat 3

‘ಸಿನಿಮಾಗಳಿಗೆ ಸುಪ್ರೀಂ ಅಂದರೆ ಅದು ನಿರ್ದೇಶಕರು. ಸಿನಿಮಾಟೋಗ್ರಾಫರ್ ಹೇಗೆ ಹಾರ್ಡ್ ಡಿಸ್ಕ್ ಇಟ್ಟುಕೊಳ್ಳಲು ಸಾಧ್ಯ? ಹಣಕಾಸಿನ ವಿಷಯದಲ್ಲಿ ಮನಸ್ತಾಪ ಆಗಿರುವುದು ನಿಜ. ಅದನ್ನು ಹೇಳದೇ ಸುಖಾಸುಮ್ಮನೆ ಯಾರಿಗೂ ತೊಂದರೆ ಕೊಡಬಾರದು. ಆ ಸಿನಿಮಾದಲ್ಲಿ ನಾನ ನಟಿಸಿದ್ದೇನೆ. ನಿರ್ಮಾಪಕಿಯೂ ಆಗಿದ್ದೇನೆ. ಆ ಸಿನಿಮಾದ ಬಿಡುಗಡೆಗೆ ಬೇಕಾದ ಎಲ್ಲ ಸಹಾಯವನ್ನು ಈಗಲೂ ನಾನು ಮಾಡಲು ಸಿದ್ದಳಿದ್ದೇನೆ. ಆದರೆ, ತಂಡವನ್ನು ಒಡೆಯುವುದು ಸರಿಯಾದದ್ದು ಅಲ್ಲ’ ಅಂತಾರೆ ಅನಿತಾ ಭಟ್.ಇದನ್ನೂ ಓದಿ:ವಿಜಯ್ ದೇವರಕೊಂಡ ಬಳಿ ‘ಸಮಂತಾ ಎಲ್ಲಿ’ ಎಂದು ಪ್ರಶ್ನಿಸಿದ ನಾಗಾರ್ಜುನ

FotoJet

ಏನಿದು ವಿವಾದ?

ಅನಿತಾ ಭಟ್ ಮತ್ತು ಶಿವಧ್ವಜ ಕಾಂಬಿನೇಷನ್ ‘ಸಮುದ್ರಂ’ ಸಿನಿಮಾದ ಸಿನಿಮಾಟೋಗ್ರಾಫರ್ ರಿಶಿಕೇಷ್ ವಿರುದ್ಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾಟೋಗ್ರಫರ್ ರಿಶಿಕೇಷ್ ಸಮುದ್ರಂ ಚಿತ್ರದ ಹಾರ್ಡ್ ಡಿಸ್ಕ್ ಕೊಡದೆ ನಿರ್ಮಾಪಕರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಚಿತ್ರತಂಡ ದೂರು ನೀಡಿದೆ.

Anitha bhat 1

ರಾಜಲಕ್ಷ್ಮಿ ಸಿನಿ ಕ್ರಿಯೇಷನ್ ನಿರ್ಮಾಣ  ಮತ್ತು ಅನಿತಾ ಭಟ್ ಕ್ರಿಯೇಷನ್ ಹಾಗೂ ಡಾಟ್ ಟಾಕೀಸ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಚಿತ್ರದ ಸಂಗೀತ, ಡಬ್ಬಿಂಗ್, ರೀ ರೆಕಾರ್ಡಿಂಗ್, ಎಡಿಟಿಂಗ್ ಸೇರಿ ಡಿಐ ಜವಾಬ್ದಾರಿಯನ್ನು ರಿಶಿಕೇಷ್ ವಹಿಸಿಕೊಂಡಿದ್ದರಂತೆ. ಇದಕ್ಕೆ ಹಂತಹಂತವಾಗಿ 19 ಲಕ್ಷ ಹಣವನ್ನೂ ನಿರ್ಮಾಪಕರಿಂದ ಪಡೆದುಕೊಂಡಿದ್ದರಂತೆ ರಿಶಿಕೇಷ್. ಇಲ್ಲಿಯವರೆಗೂ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೊಡದೆ ಪರಾರಿ’ ಆಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿರ್ಮಾಪಕರು ಕರೆ ಮಾಡಿ ಕೇಳಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಆರೋಪ ಮಾಡಿದ್ದಾರೆ. ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ
ಯೋಗ ದಿನದಂದು ನಟಿ ಪ್ರಣಿತಾ ಯೋಗ
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:Anita BhattRajalakshmiRishikeshSamudramಅನಿತಾ ಭಟ್ದೂರು ಸಿನಿಮಾರಾಜಲಕ್ಷ್ಮಿರಿಶಿಕೇಷ್ಸಮುದ್ರ
Share This Article
Facebook Whatsapp Whatsapp Telegram

You Might Also Like

Sruthi Hariharan Doora Theera Yaana
Cinema

‘ದೂರ ತೀರ ಯಾನ’ ಚಿತ್ರದಲ್ಲಿ ಶ್ರುತಿ ಹರಿಹರನ್ ಗೆಸ್ಟ್

Public TV
By Public TV
33 minutes ago
International Space Station 2
Latest

ಡಾಕಿಂಗ್‌ ನಂತರದ ಪ್ರಕ್ರಿಯೆ ಶುರು – ಸಂಜೆ 6 ಗಂಟೆ ವೇಳೆಗೆ ಬಾಹ್ಯಾಕಾಶ ನಿಲ್ದಾಣದೊಳಕ್ಕೆ ಅಧಿಕೃತ ಎಂಟ್ರಿ

Public TV
By Public TV
1 hour ago
Chinnaswamy Stampede IPS Officer Dayanand
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಐಪಿಎಸ್ ಅಧಿಕಾರಿ ದಯಾನಂದ್ ವಿಚಾರಣೆಗೆ ಹಾಜರು

Public TV
By Public TV
1 hour ago
black box 2
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್ ಡೌನ್‌ಲೋಡ್ ಪ್ರಕ್ರಿಯೆ ಪೂರ್ಣ, ವಿಶ್ಲೇಷಣೆ ಶುರು – ವಿಮಾನಯಾನ ಸಚಿವಾಲಯ

Public TV
By Public TV
1 hour ago
mangaluru man killed his mother
Crime

ಮಂಗಳೂರು| ಹೆತ್ತ ತಾಯಿಯನ್ನೇ ಕೊಲೆಗೈದು ಸುಟ್ಟು ಹಾಕಿದ ಪಾಪಿ ಮಗ

Public TV
By Public TV
1 hour ago
nvidia
Latest

ಮೈಕ್ರೋಸಾಫ್ಟ್‌ ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾದ ಎನ್‌ವಿಡಿಯಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?