Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ಟೆಕ್ ಸಮ್ಮಿಟ್‌ಗೆ ಸರ್ಕಾರ ಸಿದ್ಧತೆ – ಉದ್ಯಮಿಗಳ ಜೊತೆ ಸಿಎಂ, ಡಿಸಿಎಂ ಸಂವಾದ

Public TV
Last updated: September 4, 2023 5:28 pm
Public TV
Share
3 Min Read
Bengaluru Tech Summit 2
SHARE

ಬೆಂಗಳೂರು: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.

ಸೋಮವಾರ ಅವರು ಬೆಂಗಳೂರು ಟೆಕ್ ಸಮ್ಮೇಳನದ (Bengaluru Tech Summit) ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಭಾಗವಹಿಸಿ ಮಾತನಾಡಿದರು. ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

Bengaluru Tech Summit 1

ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆ:
80ರ ದಶಕದ ಅಂತ್ಯ ಹಾಗೂ 90 ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊಟ್ಟ ಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ 1992 ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಸರ್ಕಾರ ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆಯನ್ನು ತಂದುಕೊಟ್ಟಿದ್ದು, ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ ಹೂಡಿಕೆಗಳನ್ನು ಕೈಗೊಳ್ಳಲು ಶ್ರಮಿಸಿದೆ ಎಂದರು.

ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ:
ಬೆಂಗಳೂರು ಐಟಿ ರಾಜಧಾನಿಯಾಗಿದ್ದು ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ. ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು ಅತ್ಯಂತ ಸೂಕ್ತವಾಗಿದೆ. ಐಒಟಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟರಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ. ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಇದನ್ನೂ ಓದಿ: ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

bengaluru tech summit

ಕೌಶಲ್ಯ ಮಂಡಳಿ ರಚನೆ:
ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಿಸಿ ಭವಿಷ್ಯದ ಬೇಡಿಕೆಗಳನ್ನು ಪರಿಣಾಮಕಾರಿಯಾಗಿ ಪೂರೈಸುವಂತೆ ಮಾಡಲಾಗಿದೆ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧ ಪಟ್ಟ ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದರು. ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ಧರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹಾವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ ಎಂದರು.

ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ ಅಗತ್ಯವಿರುವ ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ ಎಂದರು.

ಮೂಲಸೌಕರ್ಯ ಅಭಿವೃದ್ಧಿ:
ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು, ವಿಮಾನನಿಲ್ದಾಣಕ್ಕೆ ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಸ್ಕಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ. ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:bengaluruBengaluru Tech Summitsiddaramaiahಬೆಂಗಳೂರುಬೆಂಗಳೂರು ಟೆಕ್ ಸಮ್ಮಿಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

Volodymyr Zelensky Donald Trump and Vladimir Putin
Latest

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

Public TV
By Public TV
7 minutes ago
C.T Ravi
Dakshina Kannada

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

Public TV
By Public TV
8 minutes ago
Hassan 4
Districts

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

Public TV
By Public TV
49 minutes ago
Sukla
Latest

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ

Public TV
By Public TV
1 hour ago
Indira Canteen
Bengaluru City

ಘೋಷಣೆಯಾಗಿ 1 ವರ್ಷ ಕಳೆದ್ರೂ ಬದಲಾಗದ ಮೆನು – ಇಂದಿರಾ ಕ್ಯಾಂಟೀನ್‌ನಲ್ಲಿ ರಾಗಿ ಮುದ್ದೆ, ಚಪಾತಿ ವಿತರಣೆಗೆ ಆಗ್ರಹ

Public TV
By Public TV
1 hour ago
Dharmasthala 3 3
Bengaluru City

ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?