ದೇಶದಲ್ಲೇ ಪ್ರಥಮ 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ

Public TV
1 Min Read
KVA INAUGURATION

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ (Underground 500-kVA Electric Transformer) ಲೋಕಾರ್ಪಣೆ ಕಾರ್ಯಕ್ರಮವು ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ 15ನೇ ಅಡ್ಡ ರಸ್ತೆ ಮಲ್ಲೇಶ್ವರಂ (Malleshwaram) ವಿಭಾಗದಲ್ಲಿ ಉದ್ಘಾಟನೆಗೊಂಡಿದೆ.

BENGALURU KVA

ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್ (K J George) ಅವರು ಉದ್ಘಾಟನೆ ಮಾಡಿದ್ರು. ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ (Ashwath Narayan) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ರು. ಬೆಸ್ಕಾಂ ಹಾಗೂ ಬಿಬಿಎಂಪಿ (BBMP) ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದರಡಿ ಬೆಸ್ಕಾಂ 1.33 ಕೋಟಿ ರೂ. ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ. ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಸಿವಿಲ್ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು

ಅಲ್ಲದೇ ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್ ಗಳು, ಫಿಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article