ಬೆಂಗಳೂರು: ಶಕ್ತಿ ಯೋಜನೆಯಿಂದ ತಮಗಾಗುತ್ತಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಬೆಂಗಳೂರಿನಾದ್ಯಂತ (Bengaluru) ಖಾಸಗಿ ಸಾರಿಗೆ (Private Transport) ನೌಕರರು, ರಿಕ್ಷಾ, ಕ್ಯಾಬ್ ಚಾಲರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆ ಮಧ್ಯೆ ಬಂದಿದ್ದ ರ್ಯಾಪಿಡೋ ಬೈಕ್ ಸವಾರನಿಗೆ ಪ್ರತಿಭಟನಾ ನಿರತರು ಥಳಿಸಿರುವ ಘಟನೆ ನಡೆದಿದೆ.
ಪ್ರತಿಭಟನಾ ನಿರತರು ಬೈಕ್, ಟ್ಯಾಕ್ಸಿಗಳ ಮೇಲೆ ಕೆಂಗಣ್ಣು ತೋರುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಪ್ರಯಾಣಿಕನನ್ನು ಕೂರಿಸಿಕೊಂಡು ಸಾಗುತ್ತಿದ್ದ ರ್ಯಾಪಿಡೋ ಬೈಕ್ ಸವಾರನನ್ನು ತಡೆದು, ಪ್ರತಿಭಟನಾಕಾರರು ಥಳಿಸಿದ್ದಾರೆ. ಮಾತ್ರವಲ್ಲದೇ ದ್ವಿಚಕ್ರ ವಾಹನ ಸವಾರರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮತ್ತೊಂದೆಡೆ ಜಾಥಾ ಹೊರಟಿದ್ದ ಆಟೋ ಚಾಲಕರ ವಿರುದ್ಧ ದ್ವಿಚಕ್ರ ವಾಹನ ಸವಾರ ಆಕ್ರೋಶ ವ್ಯಕ್ತಪಡಿಸಿದ್ದ. ಈ ವೇಳೆ ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಕಿತ್ತು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ
ಪ್ರತಿಭಟನಾ ನಿರತರು ನಗರದಲ್ಲಿ ಸಂಚಾರ ಮಾಡುತ್ತಿರುವ ಆಟೋ ಚಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಟೋ ಚಾಲಕರಿಗೆ ಬುದ್ದಿ ಹೇಳಿ ಕಳುಹಿಸುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿಕ ಆಟೋಗಳು ಜಮಾವಣೆಗೊಳ್ಳುತ್ತಿದ್ದು, ನೂರಾರು ಆಟೋಗಳು ಫ್ರೀಡಂ ಪಾರ್ಕ್ ಕಡೆ ತೆರಳುತ್ತಿವೆ.
ನಮ್ಮ ಬೇಡಿಕೆಗಳನ್ನು ಈಡೇರಿಸಿ, ಇಲ್ಲದೇ ಹೋದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ. ಯಾವ ಸರ್ಕಾರವೂ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ. ಇವತ್ತಿನ ಬಂದ್ ನಂತರವೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನ ಗಾರ್ಡನ್ ಟರ್ಮಿನಲ್ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್, ಲ್ಯಾಂಡಿಂಗ್
Web Stories