ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಸಿನಿಮಾ ರಂಗದವರು ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Film Chamber) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎನ್.ಎಂ ಸುರೇಶ್ (N.M Suresh) ಕಾವೇರಿ ಹೋರಾಟದ ಕುರಿತು ಮಾತನಾಡಿದ್ದಾರೆ.
ಕನ್ನಡ ಸಿನಿಮಾ ರಂಗ ಯಾವತ್ತಿಗೂ ರೈತರ ಪರವಾಗಿ ಇದೆ. ಕಾವೇರಿ ಹೋರಾಟ (Cauvery Protest) ಸೇರಿದಂತೆ ನಾಡು, ನುಡಿಗೆ ಸಂಬಂಧಿಸಿದ ಎಲ್ಲ ಹೋರಾಟಗಳಲ್ಲೂ ಚಿತ್ರರಂಗ ಭಾಗಿಯಾಗಿದೆ. ರೈತರ ಪರವಾಗಿ ನಿಂತು, ಅವರಿಗೆ ಸಪೋರ್ಟ್ ಮಾಡಲಿಲ್ಲ ಎಂದು ನಮ್ಮ ಜನ್ಮ ಸಾರ್ಥವಾಗಲ್ಲ ಎಂದಿದ್ದಾರೆ. ಶೀಘ್ರದಲ್ಲೇ ಈ ಕುರಿತು ಚರ್ಚೆ ಮಾಡಿ, ಒಂದು ನಿರ್ಧಾರಕ್ಕೆ ಬರುವುದಾಗಿಯೂ ಅವರು ತಿಳಿಸಿದ್ದಾರೆ.
ತಮ್ಮ ಗೆಲುವಿನ ಕುರಿತು ಮಾತನಾಡದ ಸುರೇಶ್, ‘ಈಗ ತಾನೇ ಗೆದ್ದು ಆಯ್ಕೆ ಆಗಿದ್ದೇನೆ ಸಂತೋಷವಾಗಿದೆ. ಇದು ವಾಣಿಜ್ಯ ಮಂಡಳಿಯ ಚರಿತ್ರೆಯಲ್ಲಿ ಬರೆಯೋ ಚುನಾವಣೆ. ನಾನು ನಾಲ್ಕು ಅಭ್ಯರ್ಥಿಗಳ ಮಧ್ಯೆ ಹೆಚ್ಚು ಮತ ಪಡೆಯೋಕೆ ಕಾರಣ ನನ್ನ ಗುರುಗಳಾದ ಸಾ.ರಾ ಗೋವಿಂದು ಅವರು. ಅವರ ಮಾರ್ಗದರ್ಶನದಲ್ಲಿ ಗೆದ್ದಿದ್ದೀನಿ. ಅವ್ರಿಗೆ ಭಾರಿ ಸಂತೋಷವಾಗಿದೆ. ನನ್ನ ಗೆಲುವಿಗೆ ಕಾರಣವಾದ ಎಲ್ಲಾ ನಿರ್ಮಾಪಕರಿಗೆ, ವಿತರಕರಿಗೆ ಹಾಗೂ ಪ್ರದರ್ಶಕರಿಗೆ ಧನ್ಯವಾದಗಳು ಎಂದರು.
Web Stories