ಮೈಸೂರು: ಕಾವೇರಿ ನೀರು ವಿವಾದದ (Cauvery Water Dispute) ಕುರಿತು ಬೆಂಗಳೂರು ಬಂದ್ಗೆ (Bengaluru Bandh) ಕರೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡಲು ನಮ್ಮದೇನು ತಕರಾರಿಲ್ಲ. ಆದರೆ ರಾಜಕೀಯ ಮಾಡಬಾರದು. ಕಾವೇರಿ ವಿವಾದವನ್ನು ರಾಜಕೀಯಕ್ಕೆ ಹೋಲಿಸುವುದು ರಾಜ್ಯದ ಹಿತದೃಷ್ಟಿಯಲ್ಲಿ ಒಳ್ಳೆಯದಲ್ಲ. ಬಿಜೆಪಿಯವರು (BJP) ಕಾವೇರಿ ಪ್ರತಿಭಟನೆ ರಾಜಕೀಯಕ್ಕಾಗಿ (Politics) ಮಾಡುತ್ತಿದ್ದಾರೆ ಹೊರತು ಜನರ ಹಿತದೃಷ್ಟಿಗಾಗಲಿ, ನಾಡಿನ ಹಿತದೃಷ್ಟಿಗಾಗಲಿ ಮಾಡುತ್ತಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು ಬಂದ್ ಎಫೆಕ್ಟ್- ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದು
ಕರ್ನಾಟಕ ಬಂದ್ (Karnataka Bandh) ಕುರಿತು ಮಾತನಾಡಿದ ಅವರು, ಯಾವುದೇ ಬಂದ್ಗಳನ್ನು ಮಾಡಬಾರದು, ಮೆರವಣಿಗೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಆದರೆ ಇದಕ್ಕೆ ನಾವೇನೂ ಅಡ್ಡಿಪಡಿಸಲು ಹೋಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಬಂದ್ – ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ
ಕಾವೇರಿ ವಿವಾದದ ಕುರಿತು ದೇವೇಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಾನು ಅದನ್ನು ಸ್ವಾಗತಿಸುತ್ತೇನೆ. ರಾಜ್ಯಸರ್ಕಾರ ರಾಜ್ಯದ ಹಿತ್ತಾಸಕ್ತಿ ಕಾಪಾಡಲು ಬದ್ಧವಾಗಿದೆ. ನಮಗೆ ಅಧಿಕಾರ ಮುಖ್ಯ ಅಲ್ಲಾ. ರಾಜ್ಯದ ಜನರ ಹಿತ ಮುಖ್ಯ ಎಂದರು. ಇದನ್ನೂ ಓದಿ: ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್ಡಿಕೆ ಕಿಡಿ
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ವಿರುದ್ಧವಾಗಿದ್ದ ಶಕ್ತಿಗಳು ಈ ಬಾರಿ ಒಂದುಗೂಡಿವೆ. ಬಿಜೆಪಿಯವರು ಕಳೆದ 9 ವರ್ಷಗಳಲ್ಲಿ ಭಾವನಾತ್ಮಕವಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೋಸ್ಕರ ಈ ಸತ್ಯ ತಿಳಿದ ಮೇಲೆ ಅನೇಕ ಶಕ್ತಿಗಳು ಇಂದು ಬಿಜೆಪಿಯೇತರ ಗುಂಪುಗಳಲ್ಲಿ ಗುರುತಿಸಿಕೊಳ್ಳುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ, ತಮಿಳುನಾಡು ನಡುವೆ ಸಾರಿಗೆ ಬಸ್ಗಳ ಸಂಚಾರಕ್ಕೆ ಬ್ರೇಕ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]