Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

2021ರ ಹೊಸ ಐಟಿ ನಿಯಮವೇನು? ಭಾರತದಲ್ಲಿ 74 ಲಕ್ಷ ವಾಟ್ಸಪ್ ‌ಖಾತೆಗಳ ನಿಷೇಧವೇಕೆ?

Public TV
Last updated: October 12, 2023 8:58 pm
Public TV
Share
4 Min Read
WhatsApp 22
SHARE

ಭಾರತ (India) ಸರ್ಕಾರ ಸೋಶಿಯಲ್ ಮೀಡಿಯಾ ಕಂಪನಿಗಳ ಮೇಲೆ ಹೊಸ ನಿಯಮಗಳನ್ನು ಪರಿಷ್ಕರಿಸಿದ ಬಳಿಕ, ಮೆಸೇಜಿಂಗ್ ಪ್ಲಾಟ್‍ಫಾರ್ಮ್ ವಾಟ್ಸಪ್ (Whatsapp) ಆಗಸ್ಟ್‌ನಲ್ಲಿ ಸುಮಾರು 74.2 ಲಕ್ಷ ಖಾತೆಗಳನ್ನು ನಿಷೇಧಿಸಿದೆ. 2021ರ ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ವಾಟ್ಸಪ್ ಈ ನಿರ್ಧಾರ ಕೈಗೊಂಡಿದೆ.

ಹೊಸ ಐಟಿ ನಿಯಮದ (IT Act 2021) ಅನ್ವಯ ಪ್ರತಿ ತಿಂಗಳ ವರದಿ ನೀಡುವ ವಾಟ್ಸಪ್ ಇದೀಗ ಆಗಸ್ಟ್ 2023ರ ಮಾಸಿಕ ವರದಿ ಪ್ರಕಟಿಸಿದೆ. ಈ ವರದಿಯಲ್ಲಿ ಹಿಂದೆಂದಿಗಿಂತಲೂ ಈ ಬಾರಿಯ ಮಾಸಿಕ ವರದಿಯಲ್ಲಿ ಭಾರತೀಯರ ವಾಟ್ಸಪ್ ಖಾತೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿಸಲಾಗಿದೆ. ಹೊಸ ಐಟಿ ನಿಯಮ 2021ರ ನಿಯಮ 4(1)(ಡಿ) ಯ ಅನುಸಾರವಾಗಿ ವಾಟ್ಸಪ್ ಖಾತೆಗಳನ್ನು ಬ್ಲಾಕ್ ಮಾಡಿದೆ. ಹೀಗೆ ಬ್ಲಾಕ್ ಮಾಡಿದ ಖಾತೆಗಳಲ್ಲಿ ಬಳಕೆದಾರರಿಂದ ಸ್ವೀಕರಿಸಿದ ಕುಂದುಕೊರತೆಗಳ ರಿಪೋರ್ಟ್‌ಗಳು ಸೇರಿವೆ. ಬಳಕೆದಾರರಿಂದ ಪಡೆದ ಕುಂದುಕೊರತೆಗಳಿಗೆ ಪ್ರತಿಕ್ರಿಯೆಯಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವರದಿ ಮಾಡಿದೆ.

ಅಹಿತಕರ ಸಂದೇಶ ತಡೆಗಟ್ಟುವಲ್ಲಿ ಮತ್ತು ಎದುರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸುರಕ್ಷತಾ ವೈಶಿಷ್ಟ್ಯತೆಗಳು ಮತ್ತು ನಿಯಂತ್ರಣಗಳ ಜೊತೆಗೆ ಈ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡಲು ಎಂಜಿನಿಯರ್‌ಗಳು, ಡೇಟಾ ವಿಜ್ಞಾನಿಗಳು, ವಿಶ್ಲೇಷಕರು, ಸಂಶೋಧಕರು ಮತ್ತು ಕಾನೂನು ತಜ್ಞರನ್ನು ನೇಮಿಸಿಕೊಳ್ಳುವುದಾಗಿ ವಾಟ್ಸಪ್ ತಿಳಿಸಿದೆ.

WHATSAPP

ಭಾರತೀಯರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಈ ನಿಯಮಗಳು ಅವಶ್ಯಕವಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಹೇಳಿತ್ತು. ಈ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರ ಸೋಶಿಯಲ್ ಮೀಡಿಯಾ ಕಂಪನಿಗಳು ಹಾಗೂ ಸರ್ಕಾರದ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಇದರ ನಡುವೆ ನಿಯಮಗಳಿಗೆ ಹೊಸ ಪರಿಷ್ಕರಣೆಯನ್ನು ಸರ್ಕಾರ ಯಶಸ್ವಿಯಾಗಿ ಮಾಡಿ ಮುಗಿಸಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಮಾಹಿತಿ ಕಲೆಹಾಕಿದೆ.

ವಾಟ್ಸಪ್ ಮೂಲಕ ಸುಳ್ಳು ಸುದ್ದಿ ಮತ್ತು ನಕಲಿ ಸಂದೇಶ ರವಾನೆಯಾಗಿ, ಅದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂತಹ ಸುದ್ದಿಗಳ ಮೂಲ ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ವಾಟ್ಸಪ್‍ಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ವಾಟ್ಸಪ್ ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚುವಲ್ಲಿ ವಿಫಲವಾದರೆ ದೇಶದಲ್ಲಿ ವಾಟ್ಸಪ್ ನಿಷೇಧಕ್ಕೆ ಒಳಗಾಗಬಹುದು ಎಂದು ಗಂಭೀರ ಎಚ್ಚರಿಕೆ ನೀಡಲಾಗಿದೆ.  ಆದರೆ ಕೇಂದ್ರದ ಬೇಡಿಕೆಗೆ ವಾಟ್ಸಪ್ ಸಮ್ಮತಿ ಸೂಚಿಸಿರಲಿಲ್ಲ. ಬದಲಾಗಿ ಬಳಕೆದಾರರ ಸಂದೇಶವನ್ನು ಕಂಪನಿ ನೋಡುವುದಿಲ್ಲ ಎಂದು ಹೇಳಿಕೊಂಡಿತ್ತು. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಹಿತಾಸಕ್ತಿ ರಕ್ಷಿಸುವುದು ಕಂಪನಿಯ ನಿಯಮವಾಗಿದ್ದು, ಅದನ್ನು ಮೀರಲಾಗದು ಎಂದು ಕಂಪನಿ ಸ್ಪಷ್ಟಪಡಿಸಿತ್ತು.

ವಾಟ್ಸಪ್ ಬಳಸಿ ಕಳುಹಿಸಲಾಗುವ ಎಲ್ಲಾ ಸಂದೇಶಗಳು ಎಂಡ್ ಟು ಎಂಡ್ ಎನ್‍ಕ್ರಿಪ್ಷನ್‍ಗೆ ಒಳಪಟ್ಟಿವೆ. ಇದರಿಂದ ಸಂದೇಶ ಸೋರಿಕೆಯಾಗುವುದಿಲ್ಲ. ಹೀಗಾಗಿ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂದು ವಾಟ್ಸಪ್ ಹೇಳಿತ್ತು. ಆದರೆ ದೇಶದಲ್ಲಿ ಕೆಲವೊಂದು ಪ್ರಕರಣಗಳಲ್ಲಿ ವಾಟ್ಸಪ್ ಮೂಲಕ ಹರಡಲಾದ ಸಂದೇಶಗಳೇ ಗಲಭೆಗೆ ಮೂಲ ಎಂದು ತನಿಖೆಯ ವೇಳೆ ಪತ್ತೆಯಾಗಿತ್ತು. ಹೀಗಾಗಿ ಅದನ್ನು ಪತ್ತೆ ಹಚ್ಚಲು ವಾಟ್ಸಪ್ ಸೂಕ್ತ ವ್ಯವಸ್ಥೆ ರೂಪಿಸಬೇಕು ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಹೊಸ ಐಟಿ ನಿಯಮ ಜಾರಿಗೆ ಬಂದ ನಂತರ ಅನೇಕ ತಂತ್ರಜ್ಞಾನ ಮಧ್ಯವರ್ತಿಗಳು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸರ್ಕಾರ ಹೇಳಿತ್ತು. ಯಾವುದೇ ನಿರ್ಧಿಷ್ಟ ಕಂಪನಿ ಅಥವಾ ನಿರ್ಧಿಷ್ಟ ವಿಚಾರವನ್ನು ಹೇಳದೇ ಕೇವಲ ಮಾಹಿತಿಯನ್ನು ಉಲ್ಲೇಖಿಸಿತ್ತು. ಈ ವಿಚಾರವಾಗಿ ಟ್ವಿಟ್ಟರ್‌ ಮತ್ತು ಕೇಂದ್ರ ಸರ್ಕಾರದ ನಡುವೆ ತಿಕ್ಕಾಟ ನಡೆಯುತ್ತಲೇ ಇದೆ. ಇದರೊಂದಿಗೆ ಫೇಸ್‍ಬುಕ್ ಮತ್ತು ಯೂಟ್ಯೂಬ್ ನಡುವೆಯೂ ಆಗಾಗ ತಿಕ್ಕಾಟ ನಡೆಯುತ್ತಿದೆ. 

ಈ ಹಿಂದೆ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಗಳ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿರುವ ಖಾತೆಗಳ ಮೇಲೆ ಕ್ರಮಕೈಗೊಳ್ಳುವಂತೆ ಸರ್ಕಾರ ಟ್ವಿಟ್ಟರ್‌ರ್‌ಗೆ ಹೇಳಿತ್ತು. ಆದರೆ ಟ್ವಿಟ್ಟರ್‌ ಸರ್ಕಾರ ಹೇಳಿದ ಆದೇಶಗಳನ್ನು ಸಂಪೂರ್ಣವಾಗಿ ಅನುಸರಿಸಲು ನಿರಾಕರಿಸಿತ್ತು. ಇದರಿಂದ ಟ್ವಿಟ್ಟರ್‌ ಭಾರತದಲ್ಲಿ ಹಿನ್ನಡೆಯನ್ನು ಕೂಡ ಅನುಭವಿಸುತ್ತಿದೆ.

ಏನಿದು ಮಾಹಿತಿ ತಂತ್ರಜ್ಞಾನ ಕಾಯ್ದೆ – 2021

ಮಾಹಿತಿ ತಂತ್ರಜ್ಞಾನ ಕಾಯ್ದೆ ಡಿಜಿಟಲ್ ಮಾಧ್ಯಮ ನೀತಿ ಸಂಹಿತೆಯಾಗಿದೆ. 2021 ಭಾರತ ಸರ್ಕಾರ ಇದನ್ನು ತಿದ್ದುಪಡಿ ಮಾಡಿತು. 

ಈ ಹೊಸ ನಿಯಮದ ಪ್ರಕಾರ ದೇಶದಲ್ಲಿ ಸಾಮಾಜಿಕ ಜಾಲತಾಣಗಳು ಕುಂದುಕೊರತೆ ನಿವಾರಣಾ ಕಚೇರಿಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. ಇದರ ಅನ್ವಯ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಮುಖ್ಯ ಅಧಿಕಾರಿ ಮತ್ತು ಸಂಪರ್ಕ ಅಧಿಕಾರಿಯನ್ನು ನೇಮಿಸಬೇಕು. ಅವರು ಕಾನೂನು ಜಾರಿ ಸಂಸ್ಥೆಗಳೊಂದಿಗೆ 24/7 ಸಂಪರ್ಕದಲ್ಲಿರಬೇಕು. ದಾಖಲಾದ ದೂರುಗಳನ್ನು ಅವರು 15 ದಿನಗಳಲ್ಲಿ ವಿಲೇವಾರಿ ಮಾಡಬೇಕು.

ಸಾಮಾಜಿಕ ಮಾಧ್ಯಮ ಬಳಕೆದಾರರ ಘನತೆಗೆ ವಿರುದ್ಧವಾಗಿ ದೂರುಗಳಿದ್ದರೆ, ನಿರ್ದಿಷ್ಟವಾಗಿ ಮಹಿಳೆಯರು – ವ್ಯಕ್ತಿಗಳ ಖಾಸಗಿ ಭಾಗಗಳು, ನಗ್ನತೆ ಅಥವಾ ಲೈಂಗಿಕ ಕ್ರಿಯೆ ಇತ್ಯಾದಿಗಳ ಬಗ್ಗೆ ದೂರುಗಳಿದ್ದರೆ 24 ಗಂಟೆಗಳ ಒಳಗೆ  ಅಂತಹ ವಿಷಯವನ್ನು ತೆಗೆದುಹಾಕಬೇಕು. ಸಾಮಾಜಿಕ ಮಾಧ್ಯಮ ವೇದಿಕೆಗಳು ಸ್ವೀಕರಿಸಿದ ದೂರುಗಳ ಸಂಖ್ಯೆ ಮತ್ತು ಪರಿಹಾರದ ಸ್ಥಿತಿಯ ಮಾಸಿಕ ವರದಿಯನ್ನು ಸಲ್ಲಿಸಬೇಕು.

ಸುದ್ದಿ ಪ್ರಕಾಶಕರಿಗೆ ಮೂರು ಹಂತದ ನಿಯಂತ್ರಣವಿರುತ್ತದೆ. ಸ್ವಯಂ ನಿಯಂತ್ರಣ, ಸ್ವಯಂ-ನಿಯಂತ್ರಣ ಸಂಸ್ಥೆ, ಇದು ನಿವೃತ್ತ ನ್ಯಾಯಾಧೀಶರು ಅಥವಾ ಅಧಿಕಾರಿಗಳ ನೇತೃತ್ವ ವಹಿಸುತ್ತದೆ. ಇದರ ಜೊತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೇಲ್ವಿಚಾರಣೆ ಇರಲಿದೆ. 

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ಕಂಪನಿಗಳನ್ನು `ಉನ್ನತ ಸಾಮಾಜಿಕ ಮಾಧ್ಯಮಗಳು’ ಎಂದು ಪರಿಗಣಿಸಲಾಗುತ್ತದೆ. ಅವರು ನಿಯಮಗಳನ್ನು ಅನುಸರಿಸದಿದ್ದರೆ ನಿಷೇಧವನ್ನು ಎದುರಿಸಬೇಕಾಗುತ್ತದೆ. ಅಲ್ಲದೇ ಕ್ರಿಮಿನಲ್ ಮೊಕದ್ದಮೆ ಎದುರಿಸಬೇಕಾಗುತ್ತದೆ.

ಮಾಹಿತಿ ತಂತ್ರಜ್ಞಾನ ಕಾಯಿದೆ – 2000

ಇದು ಇ-ಕಾಮರ್ಸ್ ಮತ್ತು ಸೈಬರ್ ಕ್ರೈಮ್‍ಗಳ ಕುರಿತು ಪ್ರತಿಯೊಂದು ದೇಶವೂ ತನ್ನದೇ ಆದ ಕಾನೂನುಗಳನ್ನು ಹೊಂದಲು ಕಡ್ಡಾಯವಾಯಿತು. ಇದರ ನಂತರ ಭಾರತ ಸರ್ಕಾರ 2000 ರಲ್ಲಿ ಐಟಿ ಕಾಯ್ದೆಯನ್ನು ಅಂಗೀಕರಿಸಿತು. ಭಾರತವು ಸೈಬರ್ ಅಪರಾಧಗಳಿಗೆ ಕಾನೂನನ್ನು ಅಂಗೀಕರಿಸಿದ ವಿಶ್ವದ 12 ನೇ ರಾಷ್ಟ್ರವಾಯಿತು.

ಈ ಕಾಯಿದೆಯ ಮುಖ್ಯ ಉದ್ದೇಶ:

ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಮಾಡುವ ಎಲ್ಲಾ ವಹಿವಾಟುಗಳನ್ನು ರಕ್ಷಿಸುವುದು. ಯಾವುದೇ ರೀತಿಯ ಕಾನೂನು ದೃಢೀಕರಣಕ್ಕಾಗಿ ಬಳಸಲಾಗುವ ಡಿಜಿಟಲ್ ಸಹಿಗಳನ್ನು ಗುರುತಿಸುವುದು. ಸೈಬರ್ ವಿಚಾರವಾಗಿ ಮದ್ಯವರ್ತಿಗಳ ನಿಯಂತ್ರಣ ಮತ್ತು ಸೈಬರ್ ಅಪರಾಧದಿಂದ ನಾಗರಿಕರನ್ನು ರಕ್ಷಿಸುವುದಾಗಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:indiaIT Act 2021whatsappಭಾರತಮಾಹಿತಿ ತಂತ್ರಜ್ಞಾನ ಕಾಯ್ದೆವಾಟ್ಸಪ್
Share This Article
Facebook Whatsapp Whatsapp Telegram

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Bidar rain
Bidar

ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

Public TV
By Public TV
10 minutes ago
Amith Shah
Karnataka

ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

Public TV
By Public TV
16 minutes ago
Tamil Nadu CRPF Woman Home gold theft
Crime

CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

Public TV
By Public TV
27 minutes ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
40 minutes ago
Muslim Marriage
Bengaluru City

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

Public TV
By Public TV
1 hour ago
dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?