Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Navratri 2025 Day 1: ಶೈಲಪುತ್ರಿಯ ಮಹತ್ವವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Navratri 2025 Day 1: ಶೈಲಪುತ್ರಿಯ ಮಹತ್ವವೇನು?

Latest

Navratri 2025 Day 1: ಶೈಲಪುತ್ರಿಯ ಮಹತ್ವವೇನು?

Public TV
Last updated: September 21, 2025 9:52 am
Public TV
Share
3 Min Read
Navratri Day 1 Shailaputri
SHARE

ಈ ಬಾರಿಯ ನವರಾತ್ರಿ ಹಬ್ಬವು ಸೆ.22ರಿಂದ ಪ್ರಾರಂಭವಾಗಿ ಅ.3ಕ್ಕೆ ಕೊನೆಗೊಳ್ಳುತ್ತದೆ. ನವರಾತ್ರಿಯು ದೇವಿ ದುರ್ಗೆಯ ಮತ್ತು ಅವಳ 9 ರೂಪಗಳ ಆಚರಣೆಯಾಗಿದ್ದು, ಹಿಂದೂಗಳು ಈ ಹಬ್ಬವನ್ನು ಅತ್ಯಂತ ವೈಭವದಿಂದ ಆಚರಿಸುತ್ತಾರೆ. ದೇವಿ ದುರ್ಗೆಯ ಒಂಬತ್ತು ರೂಪಗಳನ್ನು ನೋಡುವುದಾದರೆ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿ ಮತ್ತು ಸಿದ್ಧಿದಾತ್ರಿ. ಆದಿ ಶಕ್ತಿಯ ಈ 9 ರೂಪಗಳನ್ನು ನವದುರ್ಗೆ ಎಂದು ಕರೆಯಲಾಗುತ್ತದೆ. ಈ ಹಬ್ಬವು ವಿಜಯದಶಮಿ ಆಚರಣೆಗಳೊಂದಿಗೆ ಕೊನೆಗೊಳ್ಳುತ್ತದೆ. ಮೊದಲನೇ ದಿನ ಪೂಜಿಸಲ್ಪಡುವ ಶೈಲಪುತ್ರಿಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ.

ಶೈಲ ಪುತ್ರಿಯ ಮಹತ್ವ:
ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಈ ದೇವಿಯ ಅವತಾರದ ಹಿಂದೆ ಒಂದು ಕಥೆ ಇದೆ. ಪ್ರಜಾಪತಿ ಬ್ರಹ್ಮನ ಮಗನಾದ ದಕ್ಷ ತನ್ನ 27 ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದಳು. ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಸ್ಮಶಾನದಲ್ಲಿ ವಾಸ ಮಾಡುವ, ಕುತ್ತಿಗೆಯಲ್ಲಿ ನಾಗರ ಹಾವನ್ನು ಸುತ್ತಿಕೊಂಡಿರುವ ಶಿವನಿಗಿಂತ, ಚೆಲುವೆಯಾಗಿರುವ ತನ್ನ ಮಗಳಿಗೆ ಉತ್ತಮ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

ಶಿವನ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ದಕ್ಷ ಒಮ್ಮೆ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲಾ ಮಕ್ಕಳಿಗೆ, ಬಂಧುಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈಗ ದಕ್ಷ, ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ ಎಂದು ಮನಸ್ಸಿನಲ್ಲೇ ಉರಿದು ಬಿದ್ದ. ಇದಕ್ಕೆ ಪ್ರತೀಕಾರವೆಂಬಂತೆ ದಕ್ಷ ಶಿವನಿಗೆ ಅವಮಾನ ಮಾಡಬೇಕೆಂದು ಇನ್ನೊಂದು ಯಜ್ಞವನ್ನು ಆಯೋಜಿಸಿದ. ಆದರೆ ಮಗಳು ದಾಕ್ಷಾಯಿಣಿ ಹಾಗೂ ಅಳಿಯ ಶಿವನಿಗೆ ಆಹ್ವಾನ ನೀಡದೇ ಉಳಿದ ಎಲ್ಲಾ ಮಕ್ಕಳಿಗೂ ಆಹ್ವಾನ ನೀಡಿದ್ದ.

ತಂದೆಯು ಯಾಗವನ್ನು ಆಯೋಜಿಸಿರುವುದನ್ನು ತಿಳಿದ ದಾಕ್ಷಾಯಿಣಿ ಶಿವನೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ ಎಂದು ಕೇಳುತ್ತಾಳೆ. ಅದಕ್ಕೆ ಶಿವ ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆಯಾದರೂ ಹೋಗಬಾರದು ಎಂದು ಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತು ಹೋಗಿರಬಹುದು. ತವರು ಮನೆಗೆ ಹೋಗಲು ಮಗಳಿಗೆ ಏಕೆ ಆಹ್ವಾನ ಬೇಕು ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿ ದಾಕ್ಷಾಯಿಣಿಯ ಹಠಕ್ಕೆ ಕರಗಿ ಶಿವ ಅನುಮತಿ ನೀಡುತ್ತಾನೆ.

ಶಿವನಿಂದ ಅನುಮತಿಯನ್ನು ಪಡೆದು ದಾಕ್ಷಾಯಿಣಿ ತಂದೆಯ ಯಾಗಕ್ಕೆ ಹೋಗುತ್ತಾಳೆ. ಆದರೆ ದಕ್ಷನು ಯಾಗಕ್ಕೆ ಬಂದ ಮಗಳನ್ನು ನೋಡಿ ನಾನು ಆಹ್ವಾನ ನೀಡದಿದ್ದರೂ ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನನ್ನು ಅವಮಾನಿಸುತ್ತಾನೆ. ಎಲ್ಲರ ಮುಂದೆ ಪತಿಗೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ತನ್ನ ಮುಂದಿದ್ದ ಯಜ್ಞಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ. ಹೀಗೆ ತನ್ನ ಶರೀರವನ್ನು ಭಸ್ಮವಾಗಿಸಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ಶೈಲ ಪುತ್ರಿ ಎಂಬ ಹೆಸರಿನಿಂದ ಗುರುತಿಸಿಕೊಳ್ಳುತ್ತಾಳೆ. ಮತ್ತೆ ಶಿವನ ಮಡದಿ ಸತಿಯಾಗಿ ಹೆಸರು ಪಡೆಯುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯವಿದೆ.

ಶೈಲಪುತ್ರಿಯ ಸ್ವರೂಪ ಹೇಗೆ?
ಶೈಲ ಪುತ್ರಿಯನ್ನು ಆದಿಶಕ್ತಿಯೆಂದು ಗುರುತಿಸಲಾಗುತ್ತದೆ. ಆಕೆಯು ಗೂಳಿಯ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ವೃಷರುಧ ಎಂದೂ ಕರೆಯಲಾಗುತ್ತದೆ. ಶೈಲಪುತ್ರಿಯು ಮನೋಕಾರಕನಾದ ಚಂದ್ರನನ್ನು ತನ್ನ ಮಸ್ತಿಷ್ಕದ ಮೇಲೆ ಧರಿಸಿದ್ದಾಳೆ. ತಮೋಗುಣದ ಸಂಕೇತವಾದ ತ್ರಿಶೂಲವನ್ನು ತನ್ನ ಬಲಗೈಯಲ್ಲಿ ಧಾರಣೆ ಮಾಡಿದ್ದಾಳೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿ ಮಲ್ಲಿಗೆ ಪ್ರಿಯಳು.

ಶೈಲಪುತ್ರಿಯ ರೂಪವೂ ನಾವು ಪಾಲಿಸಬೇಕಾದ ಬದುಕಿನ ತತ್ವವನ್ನು ಸೂಚಿಸುತ್ತದೆ. ಶ್ವೇತ ವಸ್ತ್ರದಲ್ಲಿರುವ ಆಕೆ ಶಾಂತಿಯುತವಾದ ನಡವಳಿಕೆಯನ್ನು ಬೆಳೆಸಿಕೊಳ್ಳಲು ಪ್ರೇರಣೆಯಾಗಿದ್ದಾಳೆ. ಪರ್ವತರಾಜನ ಮಗಳಾಗಿ ಪರ್ವತ ಎಂದರೆ ಪ್ರಕೃತಿಯನ್ನು ಪ್ರೀತಿಸಿ, ಶುದ್ಧವಾಗಿರಿಸಿಕೊಳ್ಳಿರೆಂದು ಸೂಚಿಸುವಳು. ಗೂಳಿಯ ಮೇಲೆ ಕುಳಿತಿರುವ ಮೂಲಕ ಮೂಕಪ್ರಾಣಿಗಳು ದೇವ- ದೇವತೆಯರ ವಾಹನವಾಗಿದ್ದು ಅವುಗಳನ್ನು ಹಿಂಸಿಸಬಾರದೆಂಬುದರ ಸಂಕೇತ ನೀಡುತ್ತಾಳೆ. ಒಂದು ಕೈಯಲ್ಲಿರುವ ತ್ರಿಶೂಲ ತಾಪತ್ರಯಗಳ ನಿವಾರಣೆಯ ಸೂಚಕ ಮತ್ತು ನಮ್ಮ ಮನಸ್ಸು ದುಷ್ಟತನದತ್ತ ದೃಷ್ಟಿ ಹಾಯಿಸಬಾರದು, ಅದರಿಂದ ಶೂಲದಂತಹ ಅಸ್ತ್ರದಿಂದ ನಮ್ಮನ್ನು ನಾವೇ ಇರಿದುಕೊಂಡಂತೆ ಎಂಬುದನ್ನು ಸಾರುತ್ತದೆ. ಇನ್ನೊಂದು ಕೈಯಲ್ಲಿರುವ ಕಮಲವು ಕೋಮಲವಾದ ಎಸಳುಗಳುಳ್ಳ, ನೀರಿನಲ್ಲಿ ಅರಳುವ ಸುಂದರ ಹೂವು ವಿನಯ ಮತ್ತು ತಾಳ್ಮೆಯ ಸಂಕೇತ. ಇದು ತಿಳಿಯಾದ ಮನಸ್ಸಿನಲ್ಲಿ ತಳಮಳವಿರುವುದಿಲ್ಲ ಎಂಬುದನ್ನು ಸೂಚಿಸುತ್ತದೆ.

TAGGED:GoddessnavratriNavratri 2025ShailaputriSignificanceದೇವಿನವರಾತ್ರಿಶೈಲ ಪುತ್ರಿ
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
3 hours ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
3 hours ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
3 hours ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
4 hours ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
5 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?