ಆಯುಧ ಪೂಜೆ – ಸರ್ಕಾರಿ ಬಸ್‌ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್

Public TV
1 Min Read
KSRTC

ಬೆಂಗಳೂರು: ನವರಾತ್ರಿ (Navratri) ಹಿನ್ನೆಲೆ ಸೋಮವಾರ ನಾಡಿನಾದ್ಯಂತ ಆಯುಧ ಪೂಜೆಗೆ (Ayudha Puja) ತಯಾರಿ ನಡೆಯುತ್ತಿದೆ. ಈ ಬಾರಿ ಸರ್ಕಾರಿ ಬಸ್‌ಗಳ (Bus) ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಬೇಡಿಕೆ ಇಡಲಾಗುತ್ತಿದೆ.

KSRTC BMTC 1

ಪ್ರತಿ ವರ್ಷ ನಿಗಮಗಳು ಆಯುಧ ಪೂಜೆಗೆ ಜೀಪ್, ಕಾರುಗಳಿಗೆ 40 ರೂ. ಬಸ್‌ಗಳಿಗೆ ತಲಾ 100 ರೂ. ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಪ್ರತಿ ಬಸ್‌ಗೆ 500 ರೂ. ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಬೆಲೆ ಏರಿಕೆ ಹಿನ್ನೆಲೆ ನೌಕರರು ಹೆಚ್ಚುವರಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದನ್ನೂ ಓದಿ: ಘೋಸ್ಟ್ ಪ್ರದರ್ಶನ : ಸಂತೋಷ್ ಚಿತ್ರಮಂದಿರದ ಕಚೇರಿ ಗ್ಲಾಸ್ ಪುಡಿಪುಡಿ

ಈ ಬಾರಿ ಆಯುಧ ಪೂಜೆ ಸಂಭ್ರಮದಿಂದ ಆಚರಿಸಲು ಸಾರಿಗೆ ನಿಗಮದ ನೌಕರರು ತೀರ್ಮಾನ ಮಾಡಿದ್ದಾರೆ. ಒಂದು ಬಸ್‌ಗೆ ಸರಳವಾಗಿ ಪೂಜೆ ಮಾಡಲು ಬಾಳೆಕಂದು, ತೆಂಗಿನಕಾಯಿ, ಕರ್ಪೂರ, ಕುಂಕುಮ, ಬೂದು ಕುಂಬಳಕಾಯಿ, ವಿಭೂತಿ ಅಗತ್ಯ. ಆದರೆ ಪ್ರತಿ ಬಾರಿ ಬಿಎಂಟಿಸಿ (BMTC) ಹಾಗೂ ಕೆಎಸ್‌ಆರ್‌ಟಿಸಿ (KSRTC) ಜಿಪುಣತನ ತೋರಿದೆ. ಹೀಗಾಗಿ ಈ ಬಾರಿ ಆಯುಧ ಪೂಜೆ ಸಂಭ್ರಮಕ್ಕೆ ಹೆಚ್ಚುವರಿ ಹಣ ನೀಡುವಂತೆ ನೌಕರರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯ

Web Stories

Share This Article