Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

`ಇನಾಮ್ದಾರ್’ಗೆ ಪ್ಯಾನ್ ಇಂಡಿಯಾ ಬೇಡಿಕೆ: ಡೈರೆಕ್ಟರ್ ಸಂದೇಶ್ ಗೆ ಸಿಗ್ತು ನಾನಾ ಪಾಟೇಕರ್ ಕಾಲ್ ಶೀಟ್

Public TV
Last updated: October 20, 2023 7:01 pm
Public TV
Share
4 Min Read
Inamdar 1 3
SHARE

ಪಂಚಭಾಷೆಯಲ್ಲಿ ತಯ್ಯಾರಾಗುತ್ತಾ ಪ್ಯಾನ್ ಇಂಡಿಯಾ ತುಂಬೆಲ್ಲಾ ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳ ಮಧ್ಯೆ ಕನ್ನಡದಲ್ಲಿ ನಿರ್ಮಾಣಗೊಂಡು ಬಿಡುಗಡೆಯ ಹೊಸ್ತಿಲಲ್ಲಿರುವ `ಇನಾಮ್ದಾರ್’ (Inamdar) ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಳ್ತಿದೆ. ಹೌದು, ಟ್ರೇಲರ್ ನೋಡಿ ಇಂಪ್ರೆಸ್ ಆಗಿರುವ ಪರಭಾಷಾ ಸಿನಿಮಾ ಮಂದಿ `ಇನಾಮ್ದಾರ್’ ಚಿತ್ರದ ಹಕ್ಕುಗಳನ್ನು ತಮ್ಮ ಸ್ವಾದೀನಕ್ಕೆ ಪಡೆಯಲು ಮುಂದೆ ಬರುತ್ತಿದ್ದಾರಂತೆ. ಈ ಕುರಿತು ಸಂತೋಷ ಹಂಚಿಕೊಂಡ ಚಿತ್ರದ ನಿರ್ದೇಶಕರಾದ ಸಂದೇಶ್ ಶೆಟ್ಟಿ (Sandesh Shetty) ಆಜ್ರಿಯವರು `ಇನಾಮ್ದಾರ್’ ಸೃಷ್ಟಿಸಲಿರುವ ಸಂಚಲನ ಹಾಗೂ ತಲ್ಲಣದ ಬಗ್ಗೆ ಮಾತಿಗಿಳಿದರು. ಹೆಸರಾಂತ ಹಿರಿಯ ನಟ ನಾನಾ ಪಾಟೇಕರ್ ಗೆ ಆ್ಯಕ್ಷನ್ ಕಟ್ ಹೇಳುವ ಅವಕಾಶ ಸಿಕ್ಕಿರುವ ಕುರಿತು ಮಾಹಿತಿ ಹೊರಹಾಕಿದರು. ಪಂಕಜ್ ತ್ರಿಪಾಠಿ ಹಾಗೂ ನಾನಾ ಪಾಟೇಕರ್ (Nana Patekar) ಇಬ್ಬರನ್ನೂ ಸೇರಿಸಿ ಸಿನಿಮಾ ಮಾಡಲಿದ್ದು, ಬಾಲಿವುಡ್ ನಿರ್ಮಾಪಕರು ಬಂಡವಾಳ ಹೂಡಲು ಮುಂದೆ ಬಂದಿರುವುದಾಗಿ ಹೇಳಿಕೊಂಡರು.

Inamdar 1 1

ಸಂದೇಶ್ ಶೆಟ್ಟಿ ಆಜ್ರಿ ಕರಾವಳಿ ಭಾಗದ ನಿರ್ದೇಶಕರು. ಕಳೆದ ಮೂರು ವರ್ಷಗಳ ಹಿಂದೆ `ಕತ್ತಲೆ ಕೋಣೆ’ ಎಂಬ ಸೈಂಟಿಫಿಕ್ ಥ್ರಿಲ್ಲರ್ ಸಿನಿಮಾ ಮಾಡಿದ್ದರು. ಈಗ ಭಿನ್ನ ಕಥಾಹಂದರವುಳ್ಳ `ಇನಾಮ್ದಾರ್’ ಚಿತ್ರದ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳಲು ರೆಡಿಯಾಗಿದ್ದಾರೆ. ಟೀಸರ್ ನಲ್ಲಿ ದಟ್ಟಕಾನನ ಹಾಗೂ ಬುಡಕಟ್ಟು ಜನಾಂಗದ ದರ್ಶನ ಮಾಡಿಸಿ ಸಿನಿಮಾಪ್ರೇಮಿಗಳಲ್ಲಿ ಕುತೂಹಲ ಕೆರಳಿಸಿದ್ದರು. ಕೌತುಕದ ಜೊತೆಗೆ ಕಿಕ್ ಇರಲೆಂದು `ಸಿಲ್ಕು ಮಿಲ್ಕು’ ಸುಂದರಿನಾ ಕಣಕ್ಕಿಳಿಸಿದ್ದರು. ಆಕೆ ಅಖಾಡವನ್ನ ಕಬ್ಜ ಮಾಡಿಕೊಂಡ ಬೆನ್ನಲ್ಲೇ ಈಗ ಟ್ರೈಲರ್ ಹೊರಬಿದ್ದಿದೆ. ಮಾಸ್, ಕ್ಲಾಸ್ ಎನ್ನದೇ ಎಲ್ಲಾ ವರ್ಗದ ಸಿನಿಮಾ ಪ್ರೇಮಿಗಳನ್ನ ತನ್ನತ್ತ ಸೆಳೆಯುತ್ತಿದೆ. ಅಚ್ಚರಿಯೆಂಬಂತೆ `ಇನಾಮ್ದಾರ್’ಗೆ ಪರಭಾಷೆಯಲ್ಲಿಯೂ ಬೇಡಿಕೆ ಹೆಚ್ಚುತ್ತಿದೆ. ಡಬ್ಬಿಂಗ್ ರೈಟ್ಸ್ ಕೊಳ್ಳಲು ಹಲವರು ಮುಂದೆ ಬಂದಿದ್ದು `ಇನಾಮ್ದಾರ್’ ತಂಡಕ್ಕೆ ಹೊಸ ಹುರುಪು ತುಂಬಿದೆ. ಕನ್ನಡದ ಜೊತೆಗೆ ಬೇರೆ ಭಾಷೆಗೂ ಸಿನಿಮಾನ ಡಬ್ ಮಾಡಿ ರಿಲೀಸ್ ಮಾಡುವ ಪ್ಲ್ಯಾನ್ ನಿರ್ದೇಶಕರಿಗಿದೆ.

Inamdar 2 3

ಇನ್ನೂ `ಇನಾಮ್ದಾರ್’ ಚಿತ್ರಕ್ಕಾಗಿ ನಿರ್ದೇಶಕ ಸಂದೇಶ್ ಶೆಟ್ಟಿ ಎರಡು ವರ್ಷ ಶ್ರಮಪಟ್ಟಿದ್ದಾರೆ. ಛತ್ರಪತಿ ಶಿವಾಜಿ ಮಹರಾಜ್ ರಿಂದ ಇನಾಮ್ ಪಡೆದಂತಹ ವಂಶಸ್ಥರನ್ನು ಸಂಪರ್ಕ ಮಾಡಿ ಮಾಹಿತಿ ಕಲೆಹಾಕಿರುವ ನಿರ್ದೇಶಕರು, ಸಾಹಿತಿ ಡಾ. ಸರಜೂ ಕಾಟ್ಕರ್ ಅವರು ಬರೆದಿರುವ `ಶಿವಾಜಿ ಮೂಲ ಕನ್ನಡದ ನೆಲ’ ಪುಸ್ತಕವನ್ನು ಆಧಾರಗ್ರಂಥವನ್ನಾಗಿಸಿಕೊಂಡು `ಇನಾಮ್ದಾರ್’ ಚಿತ್ರ ಕಟ್ಟಿಕೊಟ್ಟಿದ್ದಾರೆ. ಉತ್ತರ ಕರ್ನಾಟಕದಲ್ಲಿ ಛತ್ರಪತಿ ಶಿವಾಜಿಯನ್ನು ಆರಾಧಿಸುವ ಇನಾಮ್ದಾರ್ ಕುಟುಂಬ ಹಾಗೂ ಕರಾವಳಿಯಲ್ಲಿ ಸಾಕ್ಷಾತ್ ಶಿವನನ್ನು ಪೂಜಿಸುವ ಕಾಡು ಜನರ ನಡುವೆ ನಡೆಯುವ ವರ್ಣಸಂಘರ್ಷದ ಕಥೆಯನ್ನು ಸಿನಿಮಾವಾಗಿಸಿದ್ದಾರೆ. ಕೆಳಜಾತಿಯವರ ಮೇಲೆ ಮೇಲ್ವರ್ಗದ ದಬ್ಬಾಳಿಕೆ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಸಮಾನತೆ-ಸೌಹಾರ್ದತೆ ಬರೀ ಬಾಯಿಮಾತಿಗಷ್ಟೇ ಸೀಮಿತವಾಗಿರಬಾರದು, ಅದು ಜಾರಿಯಾಗ್ಬೇಕು ಎನ್ನುವ ನಿಟ್ಟಿನಲ್ಲಿಯೇ ಶೆಟ್ರು ಅಖಾಡಕ್ಕಿಳಿದಿದ್ದಾರೆ. ತನ್ನ ಕನಸಿನ `ಇನಾಮ್ದಾರ್’ ಮೂಲಕ ಕರಾಳತೆಯನ್ನು ಬಟಾಬಯಲು ಮಾಡಿ ಜನರನ್ನೂ ಜಾಗೃತಗೊಳಿಸ್ತೇನೆ ಎಂತಲೂ ತಿಳಿಸಿದ್ದಾರೆ.

inamdar 1 2

ಇಂತಹದ್ದೊಂದು ಸಾಹಸಕ್ಕೆ ಕೈಹಾಕಿರುವ ಸಂದೇಶ್ ಶೆಟ್ಟಿ, ಸ್ಯಾಂಡಲ್ವುಡ್ನ ಹಿರಿಯ ಕಲಾವಿದರಾದ ಶರತ್ ಲೋಹಿತಾಶ್ವ, ಅವಿನಾಶ್, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ, ಎಂಕೆ ಮಠ, ಚಿತ್ರಕಲಾ ರಾಜೇಶ್ ಸೇರಿದಂತೆ ಹಲವರನ್ನ ಒಟ್ಟುಗೂಡಿಸಿದ್ದಾರೆ. ನಿರ್ದೇಶನದ ಜೊತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಕರಡಿ ಕಾಮ ಮತ್ತು ಕಮರಕಾಳ ಈ ಎರಡು ಪಾತ್ರಗಳನ್ನೂ ಪೋಷಣೆ ಮಾಡಿದ್ದಾರೆ. ಸಿನಿದುನಿಯಾದಲ್ಲಿ ತಮ್ಮದೊಂದು ಛಾಪು ಮೂಡಿಸಲೇಬೇಕು ಅಂತ ಪಣತೊಟ್ಟಿರುವ ಸಂದೇಶ್ ಗೆ ನೆಗೆಟೀವ್ ಶೇಡ್ ಪಾತ್ರಗಳಲ್ಲಿ ಗುರ್ತಿಸಿಕೊಳ್ಳಬೇಕು ಎನ್ನುವ ಹೆಬ್ಬಯಕೆ. ಅದನ್ನು ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಈಡೇರಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಮೂರ್ನಾಲ್ಕು ಗಂಟೆಗಳ ಕಾಲ ಮೇಕಪ್ ಹಾಕಿಸಿಕೊಂಡು ನಟಿಸುವುದರ ಜೊತೆಗೆ ಘಟಾನುಘಟಿ ತಾರೆಯರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹಳೆಬೇರು-ಹೊಸ ಚಿಗುರು ಎನ್ನುವಂತೆ ಸೀನಿಯರ್ಸ್ ಜೊತೆಗೆ ಜೂನಿಯರ್ಸ್ ಗಳು ಇದ್ದಾರೆ. ಕಾಂತಾರ ಖ್ಯಾತಿಯ ನಾಗರಾಜ್ ಬೈಂದೂರು, ಪ್ರಶಾಂತ್ ಸಿದ್ದಿ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಹಾಲಂಬಿ, ಸಂಜು ಬಸಯ್ಯ ಜೊತೆಗೆ ಚಿರಶ್ರೀ ಅಂಚನ್ ಹಾಗೂ ಎಸ್ತರ್ ನರೋನಾ ನಾಯಕಿಯರಾಗಿ ಮಿಂಚಿದ್ದಾರೆ. `ಸಿಲ್ಕು ಮಿಲ್ಕು’ ಸಾಂಗ್ ಮೂಲಕ ಎಸ್ತರ್ ಎಕ್ಕಾಮಕ್ಕಾ ಕಿಕ್ ಕೊಟ್ಟಿದ್ದಾರೆ. ಬುಡಕಟ್ಟು ಜನಾಂಗದ ಹೆಣ್ಣುಮಗಳ ಪಾತ್ರದಲ್ಲಿ ಚಿರಶ್ರೀ ಅಂಚನ್ ಕಾಣಿಸಿಕೊಂಡಿದ್ದಾರೆ. ರಂಜನ್ ಛತ್ರಪತಿ ನಾಯಕನಟನಾಗಿ ಧಗಧಗಿಸಿದ್ದಾರೆ.

ಬೆಳಗಾವಿ, ನಿಪ್ಪಾಣಿ, ಧಾರವಾಡ, ಹುಬ್ಬಳಿ, ಚಿಕ್ಕಮಂಗಳೂರು, ಕರಾವಳಿ ಭಾಗ ಸುತ್ತಮುತ್ತ ಸುಮಾರು 65 ದಿನ `ಇನಾಮ್ದಾರ್’ ಶೂಟಿಂಗ್ ನಡೆದಿದೆ. ಚಿತ್ರದಲ್ಲಿ ಒಟ್ಟು 6 ಫೈಟ್ ಸೀಕ್ವೆನ್ಸ್ ಗಳಿದ್ದು ಥ್ರಿಲ್ಲರ್ ಮಂಜು ಅವರು 5 ಆ್ಯಕ್ಷನ್ ಸೀಕ್ವೆನ್ಸ್ ನ ಕಂಪೋಸ್ ಮಾಡಿಕೊಟ್ಟಿದ್ದಾರೆ. ನಿರ್ದೇಶನ, ನಟನೆ ಜೊತೆಗೆ ಟೈಗರ್ ಫೈಟ್ ಸೀಕ್ವೆನ್ಸ್ ಸಂಯೋಜನೆ ಮಾಡಿದ್ದಾರಂತೆ ಡೈರೆಕ್ಟರ್ ಸಂದೇಶ್ ಶೆಟ್ಟಿ. ಈಗಾಗಲೇ ಟ್ರೇಲರ್ ನಲ್ಲಿ ಟೈಗರ್ ಫೈಟ್ ಸೀಕ್ವೆನ್ಸ್ ಝಲಕ್ ಹೊರಬಿದ್ದಿದೆ. ರಾಕಿ ಸೋನು ಸಂಗೀತ, ನಕುಲ್ ಅಭಯಂಕರ್ ಹಿನ್ನಲೆ ಸಂಗೀತ `ಇನಾಮ್ದಾರ್’ಗೆ ಶಕ್ತಿತುಂಬಿದೆ. ಮುರುಳಿ ಕ್ಯಾಮೆರಾ ಕೈಚಳಕ ತೋರಿದ್ದು, ಶಿವರಾಜ್ ಮೇಹು ಸಂಕಲನ ತೋರಿದ್ದಾರೆ. ನಿರ್ದೇಶಕ ಸಂದೇಶ್ ಶೆಟ್ಟಿಯವರ ಸ್ನೇಹಿತ ನಿರಂಜನ್ ಶೆಟ್ಟಿ ತಲ್ಲೂರು `ಇನಾಮ್ದಾರ್’ಗೆ ಬಂಡವಾಳ ಹೂಡಿದ್ದು, ಶ್ರೀ ಕುಂತಿಯಮ್ಮ ಪ್ರೊಡಕ್ಷನ್ ಹಾಗೂ ತಸ್ಮೈ ಪ್ರೊಡಕ್ಷನ್ ನಿರ್ಮಾಣದಲ್ಲಿ  ಅದ್ದೂರಿಯಾಗಿ ಸಿನಿಮಾ ನಿರ್ಮಿಸಿದ್ದಾರೆ. ವಿಜಯ್ ಫಿಲಂಸ್ ವಿತರಣೆ ಹೊಣೆ ಹೊತ್ತಿದ್ದು, ಸುಮಾರು 150 ಥಿಯೇಟರ್ ನಲ್ಲಿ ರಾಜ್ಯಾದ್ಯಂತ ರಿಲೀಸ್ ಮಾಡುವ ಪ್ಲ್ಯಾನ್ ಹಾಕ್ಕೊಂಡಿದೆ. ಇದೇ ಅಕ್ಟೋಬರ್ 27ರಂದು ಚಿತ್ರ ತೆರೆಗಪ್ಪಳಿಸಲಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:InamdarNana patekarSandesh Shettyಇನಾಮ್ದಾರ್ನಾನಾ ಪಾಟೇಕರ್ಸಂದೇಶ್ ಶೆಟ್ಟಿ
Share This Article
Facebook Whatsapp Whatsapp Telegram

Cinema News

Darshan
ಗುರುವಾರ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?
Cinema Court Karnataka Latest Main Post
Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood

You Might Also Like

supreme Court 1
Court

ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿ ಕೇಸ್‌ – ಹೊಸ ತ್ರಿಸದಸ್ಯ ಪೀಠ ರಚಿಸಿದ ಸಿಜೆಐ ಗವಾಯಿ

Public TV
By Public TV
5 hours ago
Arjun Tendulkar engaged to Ravi Ghais granddaughter Saaniya Chandok
Cricket

ಖ್ಯಾತ ಉದ್ಯಮಿಯ ಮೊಮ್ಮಗಳ ಜೊತೆ ಅರ್ಜುನ್‌ ತೆಂಡ್ಕೂಲರ್‌ ಎಂಗೇಜ್‌

Public TV
By Public TV
6 hours ago
Doddaballapura Teacher Love
Chikkaballapur

ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಲವ್ವಿ-ಡವ್ವಿ; NCC ಪಾಠ ಹೇಳಿಕೊಟ್ಟ ಗುರುವಿನ ಜೊತೆಯೇ ಜೂಟ್

Public TV
By Public TV
6 hours ago
ICICI Bank
Latest

ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮಿನಿಮಮ್ ಬ್ಯಾಲನ್ಸ್ ಮೊತ್ತ ಇಳಿಸಿದ ICICI ಬ್ಯಾಂಕ್‌

Public TV
By Public TV
6 hours ago
puri jagannath temple
Crime

ದೇವಸ್ಥಾನವನ್ನು ಸ್ಫೋಟಿಸುತ್ತೇವೆ – ಪುರಿ ದೇಗುಲದ ಗೋಡೆ ಮೇಲೆ ಬರಹ

Public TV
By Public TV
6 hours ago
Rahul Gandhi
Court

ಸಂಸದರ ವಿರುದ್ಧ ನೀಡಿದ್ದ ಜೀವಬೆದರಿಕೆ ದೂರನ್ನು ಹಿಂಪಡೆದ ರಾಹುಲ್‌

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?