ಹಾವೇರಿ: ವಿಜಯದಶಮಿ (Vijayadashami) ದಿನದಂದು ಇಲ್ಲಿನ ವರದಾ ನದಿಯಲ್ಲಿ (Varada River) ಈಜಲು ಹೋಗಿದ್ದ 17 ವರ್ಷದ ಹುಡುಗ ಸಾವನ್ನಪ್ಪಿರುವ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನ ಅಮೋಘ್ ಹೊಸಮನಿ (17) ಎಂದು ಗುರುತಿಸಲಾಗಿದೆ. ಹಬ್ಬದ (Festival) ಹಿನ್ನೆಲೆ ಅಮೋಘ್ ಸ್ನೇಹಿತರೊಂದಿಗೆ ವರದಾ ನದಿಗೆ ಸ್ನಾನಕ್ಕೆ ಬಂದಿದ್ದ. ಈ ವೇಳೆ ನದಿ ಮಧ್ಯ ಭಾಗಕ್ಕೆ ಹೋಗಿದ್ದು, ಈಜು ಬಾರದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?
ಸ್ಥಳಕ್ಕೆ ಧಾವಿಸಿದ ಹಾವೇರಿ ಮತ್ತು ಸವಣೂರು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಹುಡುಗನ ಮೃತದೇಹವನ್ನು ನದಿಯಿಂದ ಹೊರ ತೆಗೆದಿದ್ದಾರೆ. ಹುಡುಗನ ಮೃತದೇಹ ನೋಡುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲುಮಟ್ಟಿದೆ. ಸದ್ಯ ಸವಣೂರು ಪೊಲೀಸ್ (Savanur Police) ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?
Web Stories