Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ

Public TV
Last updated: November 7, 2023 7:59 am
Public TV
Share
2 Min Read
D. B. Chandregowda
SHARE

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ‌ ಸಂಸ್ಕಾರ ನೆರವೇರಿಸಲಾಗುವುದು.

Indira gandhi

ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ (D.B.Chandregowda) ಅವರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.

ಮೂರು ಬಾರಿ ಶಾಸಕರು, ಮೂರು ಸಲ ಸಂಸದರು, ಒಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ (Indira Gandhi) ರಾಜಕೀಯ ಮರು ಹುಟ್ಟು ನೀಡಲು ರಾಜೀನಾಮೆ ನೀಡಿದ್ದರು. ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿ ಸ್ಪರ್ಧೆಗೆ ಚಂದ್ರೇಗೌಡರು ಅವಕಾಶ ಮಾಡಿಕೊಟ್ಟಿದ್ದರು.

D. B. Chandregowda 1

ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ, ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26 ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ವಕೀಲರಾಗಿ ವೃತ್ತಿ ಆರಂಭಿಸಿದ್ದರು.

ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81 ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. 1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶ ಪಡೆದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ 1999 ರಿಂದ 2004ರ ವರೆಗೆ ಎಸ್.ಎಂ. ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2009ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

TAGGED:ChikkamagaluruD. B. ChandregowdaIndira Gandhiಇಂದಿರಾ ಗಾಂಧಿಚಿಕ್ಕಮಗಳೂರುಡಿ.ಬಿ.ಚಂದ್ರೇಗೌಡ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
13 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
17 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
26 minutes ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
1 hour ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
2 hours ago
Haveri Bankapura POCSO Case Four arrested
Crime

ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

Public TV
By Public TV
2 hours ago
Anekal 2
Crime

ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

Public TV
By Public TV
3 hours ago
Capture
Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?