Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

‘ಗ್ಯಾಂಗ್‌ಸ್ಟರ್’ ಸಿನಿಮಾ ನಿರ್ಮಿಸಿದ ಮೊದಲ ಮಹಿಳಾ ನಿರ್ಮಾಪಕಿ ರೂಪಾ ರಾವ್!

Public TV
Last updated: November 7, 2023 4:01 pm
Public TV
Share
3 Min Read
roopa rao
SHARE

ರೂಪಾ ರಾವ್ ಈ ಹೆಸರು ನಿಮ್ಮೆಲ್ಲರಿಗೂ ಚಿರಪರಿಚಿತವೇ. ಮೂಲತಃ ಬೆಂಗಳೂರಿನವರಾದ ರೂಪಾ ರಾವ್ ಮಹಿಳಾ ನಿರ್ದೇಶಕಿಯಾಗಿ ಗುರ್ತಿಸಿಕೊಂಡಿದ್ದಾರೆ. ಇಂಗ್ಲೀಷ್, ಹಿಂದಿ, ಜರ್ಮನ್ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಶಾರ್ಟ್ಫಿಲ್ಮ್, ಡಾಕ್ಯೂಮೆಂಟರಿ, ವೆಬ್ ಸೀರೀಸ್ ಡೈರೆಕ್ಟ್ ಮಾಡಿ ಹೆಸರು ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ‘ಗಂಟುಮೂಟೆ’ ಹೆಸರಲ್ಲೊಂದು ಸಿನಿಮಾ ಮಾಡಿದ್ದರು. ವಿಭಿನ್ನ ಕಥಾಹಂದರವುಳ್ಳ ಈ ಸಿನಿಮಾ ಕನ್ನಡಿಗರ ಮನಸೂರೆಗೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಸ್ಪರ್ಧೆ ಮಾಡಿತ್ತು. ಒಂದಿಷ್ಟು ಅವಾರ್ಡ್‌ಗಳನ್ನು ಕೊಳ್ಳೆಹೊಡೆಯೋ ಮೂಲಕ ನಿರ್ದೇಶಕಿ ರೂಪಾ ರಾವ್‌ಗೆ ಜನಪ್ರಿಯತೆಯ ಕಿರೀಟ ತೊಡಿಸಿತ್ತು. ಇದೀಗ ರೂಪಾ ರಾವ್ (Roopa Rao) ಮತ್ತೆ ಕನ್ನಡ ಕಲಾಭಿಮಾನಿಗಳನ್ನು ಎದುರುಗೊಳ್ಳಲು ರೆಡಿಯಾಗಿದ್ದಾರೆ. ಆದರೆ, ನಿರ್ದೇಶಕಿಯಾಗಿ ಅಲ್ಲ ಬದಲಾಗಿ ನಿರ್ಮಾಪಕಿಯಾಗಿ ಎಂಬುದು ವಿಶೇಷ.

roopa rao

ಸಿನಿಮಾ ನಿರ್ಮಾಣ ಸುಲಭದ ಕೆಲಸವಲ್ಲ. ಚಿತ್ರಕ್ಕಾಗಿ ತಮ್ಮ ಮನೆಯ ಖಜಾನೆಯನ್ನೆಲ್ಲಾ ಖಾಲಿ ಮಾಡಿಕೊಳ್ಳುವುದು ಇದೆಯಲ್ಲ ಅದಕ್ಕೆ ಬಂಢ ಧೈರ್ಯ ಬೇಕು. ಆ ಎದೆಗಾರಿಕೆ ಒನ್ ಟು ಡಬ್ಬಲ್ ಇರುವುದರಿಂದಲೇ ನಿರ್ದೇಶಕಿ ರೂಪಾ ರಾವ್ ಗ್ಯಾಂಗ್‌ಸ್ಟರ್ (Gangstar) ಸಿನಿಮಾಗೆ ಕೈ ಹಾಕಿದ್ದಾರೆ. ಒಬ್ಬ ಮಹಿಳಾ ನಿರ್ಮಾಪಕಿಯಾಗಿ ನಯಾ ಸವಾಲೊಂದನ್ನು ಸ್ವೀಕರಿಸಿರುವ ರೂಪಾ ರಾವ್, ಭಾರತೀಯ ಚಿತ್ರರಂಗದಲ್ಲೇ ಗ್ಯಾಂಗ್ ಸ್ಟರ್ ಸಿನಿಮಾ ನಿರ್ಮಿಸ್ತಿರುವ ಮೊದಲ ಮಹಿಳಾ ನಿರ್ಮಾಪಕಿ ಎನ್ನುವ ಖ್ಯಾತಿಗೆ ಪಾತ್ರರಾಗಲು ಹೊರಟಿದ್ದಾರೆ. ಸಹದೇವ್ ಕೆಲವಡಿ ನಿರ್ದೇಶನದ ಪಕ್ಕಾ ಗ್ಯಾಂಗ್ ಸ್ಟರ್ ಕಥೆಯುಳ್ಳ ‘ಕೆಂಡ’ ಸಿನಿಮಾಗೆ ಬಂಡವಾಳ ಸುರಿದಿದ್ದಾರೆ. ವಿಶೇಷ ಅಂದರೆ ಈ ಸಿನಿಮಾ ಶೀರ್ಷಿಕೆಯಿಂದಲೇ ಸಿನಿದುನಿಯಾದಲ್ಲಿ ಸಾಕಷ್ಟು ಸದ್ದು ಮಾಡ್ತಿದೆ. ಮೋಷನ್ ಪೋಸ್ಟರ್‌ನಿಂದ ಸ್ಯಾಂಡಲ್‌ವುಡ್ ಅಂಗಳದಲ್ಲಿ ಸುದ್ದಿಯಾದ ‘ಕೆಂಡ’ ಈಗ ಕ್ಯಾರೆಕ್ಟರ್ ಟೀಸರ್‌ನಿಂದ ಸಮಸ್ತ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ.

kenda film

ಹೌದು, ಇತ್ತೀಚೆಗಷ್ಟೇ ‘ಕೆಂಡ’ (Kenda Film) ಕ್ಯಾರೆಕ್ಟರ್ ಟೀಸರ್ ಹೊರಬಿದ್ದಿದೆ. ಸಚ್ಚಾ, ಶರತ್ ಗೌಡ, ಪ್ರಣವ್ ಶ್ರೀಧರ್, ಬಿ.ವಿ ಭರತ್ ಅವರ ಮೊದಲ ನೋಟಕ್ಕೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಈ ಹುಡುಗರು ಹೊಸಬರಾದ್ರೂ ಕೂಡ ರಂಗಭೂಮಿಯಲ್ಲಿ ಪಳಗಿರುವುದರಿಂದ ಕನ್ನಡ ಕಲಾಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ದುಗದಲವಿಲ್ಲದೇ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿರುವ ‘ಕೆಂಡ’ ಚಿತ್ರವನ್ನ ಈ ಹುಡುಗರು ಅದ್ದೂರಿಯಾಗಿ ಪ್ರಮೋಟ್ ಮಾಡ್ತಿದ್ದಾರೆ. ಕೆಂಪೇಗೌಡ್ರ ಕಣದಲ್ಲಿ ಅಖಾಡಕ್ಕಿಳಿದು ಕರಪತ್ರ ಹಂಚುವ ಮೂಲಕ ‘ಕೆಂಡ’ ಸಿನಿಮಾವನ್ನ ಕರುನಾಡಿನ ಮೂಲೆಮೂಲೆಗೆ ತಲುಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

roopa rao 1

ವಿಶೇಷ ಅಂದರೆ ‘ಕೆಂಡ’ ಅಖಾಡ ಹೊಸಬರಿಂದಲೇ ಕೂಡಿದೆ. ರಂಗಭೂಮಿ ಪ್ರತಿಭೆಗಳು ಪ್ರಧಾನ ಪಾತ್ರ ವಹಿಸಿರುವುದರಿಂದ ‘ಕೆಂಡ’ ಕಣ ರಣರಣ ರಂಗೇರಿದೆ. ಬೆಂಗಳೂರಿನಂತಹ ಮಹಾನಗರಿಯಲ್ಲಿ ನಾನಾ ನಿರಾಸೆಗೊಳಗಾದ ಯುವ ಸಮೂಹ ವ್ಯವಸ್ಥೆಯ ವಿಷವ್ಯೂಹಕ್ಕೆ ಸಿಲುಕಿ ಹೇಗೆ ನರಳುತ್ತಿದೆ ಎಂಬುದನ್ನು, ರಾಜಕೀಯ ಹಾಗೂ ಅಪರಾಧದ ತನಿಖೆ ಮೂಲಕ ಜಗತ್ತಿನ ಮುಂದೆ ಹರವಿಡಲು ಸಹದೇವ್ ಕೆಲವಡಿಯವರು ‘ಕೆಂಡ’ ಚಿತ್ರ ಆಯ್ಕೆ ಮಾಡಿಕೊಂಡಿದ್ದಾರೆ. ನಿರ್ದೇಶಕ ಸಹದೇವ್ ಕೆಲವಡಿಯವರು ವಿದೇಶಗಳಲ್ಲಿ ಸಿನಿಮಾ ಬಗ್ಗೆ ಅಧ್ಯಯನ ನಡೆಸಿ ಬಂದು, ತನ್ನ ಮಾತೃ ಭಾಷೆಯಲ್ಲಿಯೇ ಸಿನಿಮಾ ಮಾಡಬೇಕೆಂಬ ಬಯಕೆ ಹೊಂದಿದ್ದವರು . ಅದರ ಆರಂಭಿಕ ಹೆಜ್ಜೆಯಾಗಿ ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರ್ ಹುಟ್ಟುಹಾಕಿದರು. ರೂಪಾ ರಾವ್ ನಿರ್ದೇಶನದ ‘ಗಂಟುಮೂಟೆ’ ಚಿತ್ರಕ್ಕೆ ಬಂಡವಾಳ ಹೂಡೋದ್ರ ಜೊತೆಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ನಿರ್ವಹಿಸಿದರು. ಆ ಚಿತ್ರ ಇಬ್ಬರಿಗೂ ಹೆಸರು ತಂದುಕೊಟ್ಟಿತ್ತು. ಇದೀಗ ಮತ್ತೊಮ್ಮೆ ಇವರಿಬ್ಬರು ‘ಕೆಂಡ’ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಮೂಲಕ ಸಹದೇವ್ ಕೆಲವಡಿ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅಮೇಯುಕ್ತಿ ಬ್ಯಾನರ್ ಅಡಿಯಲ್ಲಿ ‘ಕೆಂಡ’ ತಯಾರಾಗಿದ್ದು, ಈ ಭಾರಿ ನಿರ್ಮಾಪಕಿಯಾಗಿ ರೂಪಾ ರಾವ್ (Roopa Rao) ಸಾಥ್ ಕೊಟ್ಟಿದ್ದಾರೆ.

roopa rao 2

ಈ ಸಿನಿಮಾ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ (Jayanth Kaikini) ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂತಹ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಸದ್ದಿಲ್ಲದೇ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿರುವ ‘ಕೆಂಡ’ ರೂವಾರಿಗಳು, ಸದ್ಯದಲ್ಲಿಯೇ ಟೀಸರ್ ಲಾಂಚ್ ಮಾಡಲು ತಯಾರಾಗುತ್ತಿದ್ದಾರೆ.ಅಚ್ಚರಿ ಅಂದರೆ ‘ಕೆಂಡ’ ಹಲವಾರು ಅಂತಾರಾಷ್ಟ್ರೀಯ ಫಿಲ್ಮ್ಂ ಫೆಸ್ಟಿವಲ್‌ಗಳಲ್ಲಿ ಮಿಂಚಲು ಅಣಿಗೊಳ್ಳುತ್ತಿದೆ. ಇದೇ ಹೊತ್ತಿನಲ್ಲಿ ನಿರ್ದೇಶಕಿಯಾಗಿಯೂ ಕ್ರಿಯಾಶೀಲರಾಗಿರುವ ರೂಪಾ ರಾವ್, ಸಣ್ಣ ಗ್ಯಾಪಿನಲ್ಲಿ ‘ಆಸ್ಮಿನ್’ ಎಂಬ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಅದು ಇಷ್ಟರಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಗೊಳ್ಳಲಿದೆ. ಕೆಂಡ ಬಿಡುಗಡೆಯಾದ ಬೆನ್ನಲ್ಲೇ ರೂಪಾ ರಾವ್ ನಿರ್ದೇಶನದ ಬಿಗ್ ಬಜೆಟ್ ಚಿತ್ರ ಶುರು ಆಗಲಿದೆ.

TAGGED:kenda filmRoopa Raosandalwoodಕೆಂಡ ಸಿನಿಮಾರೂಪಾ ರಾವ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema News

Rajath Kishan
ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು
Bengaluru City Cinema Latest Top Stories
love u muddu
ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ
Cinema Latest Sandalwood Top Stories
Thalapathy Vijay Jana Nayagan
ಮಲೇಷಿಯಾದಲ್ಲಿ ರಿಲೀಸ್ ಆಗಲಿದೆ ‘ಜನನಾಯಗನ್’ ಆಡಿಯೋ
Cinema Latest Top Stories
madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows

You Might Also Like

Philippines President Ferdinand R. Marcos Jr visits to bengaluru
Bengaluru City

ಬೆಂಗಳೂರಿಗೆ ಫಿಲಿಪೈನ್ಸ್ ಅಧ್ಯಕ್ಷರ ಭೇಟಿ – ರಾಜ್ಯಪಾಲರ ಜೊತೆ ಸಂವಾದ

Public TV
By Public TV
4 hours ago
Yuva Nidhi Scheme
Bengaluru City

ಆ.14ಕ್ಕೆ ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮ

Public TV
By Public TV
4 hours ago
car driver commits suicide by writing k sudhakars name
Chikkaballapur

ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

Public TV
By Public TV
4 hours ago
Vidhana Soudha
Bengaluru City

ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ

Public TV
By Public TV
5 hours ago
Prahlad Joshi 1
Latest

ವಿಧಾನಸಭೆ ಚುನಾವಣೆ ಹೇಗೆ ಗೆದ್ದಿರಿ ಉತ್ತರಿಸಿ – ರಾಹುಲ್ ಗಾಂಧಿಗೆ ಜೋಶಿ ಸವಾಲು

Public TV
By Public TV
5 hours ago
Rahul Gandhi
Bengaluru City

ಮತಗಳ್ಳತನ ಆರೋಪ; ನಿಮ್ಮ ಆರೋಪಕ್ಕೆ ದಾಖಲೆ ಸಲ್ಲಿಸಿ – ರಾಹುಲ್ ಗಾಂಧಿ ಆರೋಪ ಅಲ್ಲಗಳೆದ ಚುನಾವಣಾ ಆಯೋಗ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?