Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

Bengaluru City

ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

Public TV
Last updated: November 9, 2023 7:13 pm
Public TV
Share
3 Min Read
munirathna yediyurappa
SHARE

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅನುದಾನ ತಾರತಮ್ಯ ಸಂಘರ್ಷ ಜೋರಾಗಿದೆ. ರಾಜರಾಜೇಶ್ವರಿ ನಗರದಲ್ಲಿ (Rajarajeshwari Nagar) ಕಾಮಗಾರಿಗಳು ಅರ್ಧಕ್ಕೆ ನಿಂತ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಮತ್ತು ಬಿಜೆಪಿ ನಾಯಕರು (BJP Leaders) ಇಂದು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಅನುದಾನ ನೀಡದೇ ಇದ್ದರೆ ಸರ್ಕಾರದ ವಿರುದ್ಧ ಮೂರು ದಿನ ಸತ್ಯಾಗ್ರಹ ಮಾಡುವುದಾಗಿ ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ.

ಆರ್‌ಆರ್ ನಗರಕ್ಕೆ ಬೊಮ್ಮಾಯಿ (Basavaraj Bommai) ಸರ್ಕಾರ ನೀಡಿದ್ದ 126 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಹಿಂಪಡೆದು ಕಾಂಗ್ರೆಸ್ ಶಾಸಕರ (Congress Government) ಕ್ಷೇತ್ರಕ್ಕೆ ಹಂಚಿತ್ತು. ಈ ತಾರತಮ್ಯವನ್ನು ಕ್ಷೇತ್ರದ ಶಾಸಕ, ಮಾಜಿ ಮಂತ್ರಿ ಮುನಿರತ್ನ (Munirathna) ತಿಂಗಳ ಹಿಂದೆಯೇ ಪ್ರಶ್ನಿಸಿದ್ದರು.

 

ಗಾಂಧಿ ಪ್ರತಿಮೆ ಮುಂದೆ ಧರಣಿಗೆ ಕುಳಿತಿದ್ದರು. ಅಲ್ಲದೇ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಕಾಲಿಗೆ ಬಿದ್ದು ಕ್ಷೇತ್ರದ ಅಭಿವೃದ್ಧಿ ಸಹಕರಿಸಿ. ಅನುದಾನ ವಾಪಸ್ ಕೊಡಿ ಎಂದು ಕೋರಿದ್ದರು.

ಮನವಿ ಮಾಡಿ ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ. ಪರಿಣಾಮ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಳ್ಳದೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಈ ಬೆಳವಣಿಗೆಯನ್ನು ವಿಪಕ್ಷ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ 10 ಸಾವಿರ ಕೋಟಿ ಬರ ಪರಿಹಾರ ಘೋಷಣೆ ಮಾಡದಿದ್ರೆ ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ: ಕೋಟ ಎಚ್ಚರಿಕೆ

ಮಾಜಿ ಮಂತ್ರಿ ಮುನಿರತ್ನ, ಅಶ್ವಥ್‌ನಾರಾಯಣ್, ಸಂಸದ ಪಿಸಿ ಮೋಹನ್ ಜೊತೆಗೂಡಿ ಮಾಜಿ ಸಿಎಂ ಯಡಿಯೂರಪ್ಪ ಆರ್‌ಆರ್ ನಗರ ಕ್ಷೇತ್ರ ಪ್ರದಕ್ಷಿಣೆ ಮಾಡಿದರು. ಅನುದಾನ ಇಲ್ಲದೇ ಸ್ಥಗಿತಗೊಂಡ ಅರ್ಧಂಬರ್ಧ ಕಾಮಗಾರಿಗಳನ್ನು ಪರಿಶೀಲಿಸಿ ಸ್ಥಳೀಯರಿಂದಲೂ ಸಮಸ್ಯೆಗಳನ್ನು ಆಲಿಸಿದರು. ರಾಜ್ಯ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಕೂಡಲೇ ಅನುದಾನ ರಿಲೀಸ್ ಮಾಡದೇ ಇದ್ದರೆ ಇದರ ವಿರುದ್ಧ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

 

ಯಾವೆಲ್ಲ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ?
*ಪಿಇಎಸ್ ಕಾಲೇಜ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಪರಿಣಾಮ ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದೆ.
*ಹೊಸಕೆರೆಹಳ್ಳಿ ಕೆರೆ ಅಭಿವೃದ್ಧಿ, ಕೆರೆಕೋಡಿ ರಸ್ತೆ ಕಾಮಗಾರಿ ನಿಂತಿದ್ದು, 42 ಕೋಟಿ ರೂ. ಅನುದಾನ ವಾಪಸ್ ಮಾಡಲಾಗಿದೆ.
*ಬೇಮೆಲ್ ಲೇಔಟ್ ಬಳಿ ವೈಟ್ ಟಾಪಿಂಗ್ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಟ್ರಾಫಿಕ್ ಸಮಸ್ಯೆ ತೀವ್ರಗೊಂಡಿದೆ.
*ರಾಜರಾಜೇಶ್ವರಿನಗರ ಆರ್ಚ್ ಬಳಿ ಸಿಗ್ನಲ್ ಫ್ರೀ ಕಾರಿಡಾರ್ ಕಾಮಗಾರಿ ಅಪೂರ್ಣ.
*ಉಲ್ಲಾಳ ಜಂಕ್ಷನ್‌ನಲ್ಲಿ ಗ್ರೇಡ್ ಸಪರೇಟರ್ ಕಾಮಗಾರಿ ಅಪೂರ್ಣ.
*ಮಲ್ಲತಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿದೆ. 81 ಕೋಟಿ ರೂ. ಅನುದಾನ ಘೋಷಣೆಯಾಗಿದ್ದರೂ ಮಂಜೂರಾಗಿಲ್ಲ.

ಬಿಎಸ್‌ವೈ ಹೇಳಿದ್ದೇನು?
ಮುಂದಾದ್ರೂ ವೈಯಕ್ತಿಕ ದ್ವೇಷ ಮಾಡಬೇಡಿ. ಅಭಿವೃದ್ಧಿ ಕಾರ್ಯದ ಕಡೆಗೆ ಸರ್ಕಾರ ಗಮನ ಕೊಡಬೇಕು. ಈ ಕ್ಷೇತ್ರದಲ್ಲಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಅಭಿವೃದ್ಧಿ ಕಾರ್ಯಕ್ಕೆ ಕೊಡಲಿ ಪೆಟ್ಟು ಕೊಡಲಾಗಿದೆ. ಈ ಕ್ಷೇತ್ರ ಮಾತ್ರವಲ್ಲ ಹಲವು ಕ್ಷೇತ್ರಗಳ ಸ್ಥಿತಿ ಇದೇ ಆಗಿದೆ. ಗುತ್ತಿಗೆದಾರರು ಕೆಲಸಕ್ಕೆ ಬರಲು ಒಪ್ಪ್ಪುತ್ತಿಲ್ಲ. ಗುತ್ತಿಗೆದಾರರಿಂದ 8% ಕಮಿಷನ್ ಕೇಳುತ್ತಿದ್ದಾರೆ. ಸರ್ಕಾರದ ತಾರತಮ್ಯ, ಸೇಡಿನ ರಾಜಕೀಯ ನೀತಿ ವಿರುದ್ಧ ನಾನು ಮೂರು ಸತ್ಯಾಗ್ರಹ ಮಾಡುತ್ತೇನೆ.

ಮುನಿರತ್ನ ಹೇಳಿದ್ದೇನು?
ಕ್ಷೇತ್ರದ 126 ಕೋಟಿ ಅನುದಾನ ನನಗೆ ಇನ್ನೂ ಹಿಂತಿರುಗಿಸಿಲ್ಲ. ಖುದ್ದು ಯಡಿಯೂರಪ್ಪ ಬಂದು ಕ್ಷೇತ್ರ ವೀಕ್ಷಿಸಿ ದ್ವೇಷದ ರಾಜಕೀಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವ್ಯಾರೂ ಶಾಶ್ವತ ಅಲ್ಲ, ಒಟ್ಟಾಗಿ ಕೆಲಸ ಮಾಡೋಣ ಅಂತಾ ನನ್ನಾಸೆ.

 
ಡಿಕೆ ಶಿವಕುಮಾರ್‌ ಹೇಳಿದ್ದೇನು?
ಬಹಳ ಸಂತೋಷ. ಬಿಎಸ್‌ ಯಡಿಯೂರಪ್ಪನವರಿಗೆ ಲೋಕಾಯುಕ್ತ ರಿಪೋರ್ಟ್, ಬಸವರಾಜ ಬೊಮ್ಮಾಯಿ ವರದಿ ಎರಡನ್ನೂ ಕಳುಹಿಸಿಕೊಡುತ್ತೇನೆ.

TAGGED:Basavaraj BommaiDK ShivakumarMunirathnaRajarajeshwari Nagarrr nagarYediyurappaಕಾಮಗಾರಿಡಿಕೆ ಶಿವಕುಮಾರ್ಮುನಿರತ್ನಯಡಿಯೂರಪ್ಪರಾಜಕೀಯರಾಜರಾಜೇಶ್ವರಿ ನಗರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
20 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
31 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
36 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
58 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?