ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ

Public TV
1 Min Read
Siddaramaiah 2 3

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ (Caste Census) ಸಂಘರ್ಷ ತೀವ್ರಗೊಂಡಿದೆ. ನಿರೀಕ್ಷೆಯಂತೆಯೇ ವೀರಶೈವ ಸಮುದಾಯ (Veerashaiva Community) ಕೂಡ ಕಾಂತರಾಜು ವರದಿಯನ್ನೂ ತೀವ್ರವಾಗಿ ವಿರೋಧಿಸಿದೆ.

ಬೆಂಗಳೂರಿನಲ್ಲಿ (Bengaluru) ಗುರುವಾರ ಸಭೆ ನಡೆಸಿದ ಅಖಿಲ ಭಾರತ ವೀರಶೈವ ಮಹಾಸಭಾ, ಜಾತಿಗಣತಿಯಲ್ಲಿನ ಲೋಪದೋಷ ಸರಿಪಡಿಸುವಂತೆ ಸರ್ಕಾರವನ್ನ ಆಗ್ರಹಿಸಿದೆ. ಮಹಾಸಭಾ ಅಧ್ಯಕ್ಷ, ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು, ಕಾಂತರಾಜು ಜಾತಿಗಣತಿ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ಧವೇ ಸಿಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ 10 ಸಾವಿರ ಕೋಟಿ ಬರ ಪರಿಹಾರ ಘೋಷಣೆ ಮಾಡದಿದ್ರೆ ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ: ಕೋಟ ಎಚ್ಚರಿಕೆ

ನಾವು ಜಾತಿಗಣತಿಯ ವಿರೋಧಿಗಳಲ್ಲ, ಆದ್ರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದಷ್ಟೇ ನಮ್ಮ ಒತ್ತಾಯ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಯಾರೂ ಸಮೀಕ್ಷೆಯನ್ನೇ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

ಮತ್ತೊಂದೆಡೆ ಕಾಂತರಾಜು ಆಯೋಗದ ವರದಿಯನ್ನ ಸರ್ಕಾರ ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಗೃಹಮಂತ್ರಿ ಮನವಿ ಮಾಡಿದ್ದಾರೆ. ಇನ್ನೂ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಲಿಂಗಾಯತ ನಾಯಕರು ಕಾಂಗ್ರೆಸ್‌ನಲ್ಲಿ ಅಲೆಮಾರಿಗಳಾಗಿದ್ದಾರೆ: ಗೋವಿಂದ ಕಾರಜೋಳ

Share This Article