Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

Public TV
Last updated: November 10, 2023 10:56 pm
Public TV
Share
3 Min Read
Udupi
SHARE

ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ (Udupi CJM Court) ಶುಕ್ರವಾರ ಆದೇಶಿಸಿದೆ.

ಜೂನ್ 10, 2008 ರಂದು ಉಡುಪಿಯಲ್ಲಿ (Udupi) ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ರಾವ್‌ಗೆ 1 ವರ್ಷ ಜೈಲು (Jail) ಶಿಕ್ಷೆಯೊಂದಿಗೆ ದಂಡ ವಿಧಿಸಿದೆ.

Udupi 2

15 ವರ್ಷಗಳ ಹಿಂದೆ ನಡೆದಿದ್ದಾದ್ರೂ ಏನು?
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್‌, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿದೆ.

ಕಾರನ್ನು ಅಲ್ಲೇ ಬಿಟ್ಟು ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದು ಹೋಗಿದ್ದನು. ಕುಮಟಾಕ್ಕೆ ಬೆಂಗಳೂರಿನ ಚಾಲಕನೋರ್ವನನ್ನು ಕರೆಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದನು. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ರಾವ್‌ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದನು. ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್‌ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನು. ಈ ಘಟನೆ ನಡೆಯುವ ಮೊದಲು ದೆಹಲಿಗೆ ಹೋಗಿದ್ದ ಅತುಲ್ ರಾವ್‌, ಅಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದನು. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರಕ್ಕೆ ನೀಡಿದ್ದನು. ಇದು ಅಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಣಿಯಾಗಿತ್ತು. ಆ ಬಾಡಿಗೆ ಕರಾರು ಪತ್ರದಿಂದಲೇ ಅತುಲ್ ರಾವ್‌ ಅಲ್ಲಿ ಬ್ಯಾಂಕ್ ಖಾತೆ ತೆರೆದಿದ್ದನು. ಅತುಲ್ ರಾವ್‌ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕ್ಲರ್ಕ್‌ ಆಗಿದ್ದರೂ ಅಲ್ಲಿ ತನ್ನ ವಿದ್ಯಾರ್ಹತೆಯನ್ನು ಬಿಇ ಮತ್ತು ಇಂಟಲ್ ಕಂಪೆನಿಯಲ್ಲಿ ಇಂಜಿನಿಯರ್ ಎಂಬುದಾಗಿ ಉಲ್ಲೇಖ ಮಾಡಿದ್ದನು ಎಂದು ದೂರಲಾಗಿದೆ.

ದೆಹಲಿಯಲ್ಲಿ ಬಾಡಿಗೆ ರೂಮಿಗೆ ಓಡಾಟ ನಡೆಸುತ್ತಿದ್ದಾಗ ಲಾಡ್ಜ್‌ನಲ್ಲಿಯೂ ಬೆಂಗಳೂರಿನ ನಕಲಿ ವಿಳಾಸ ನೀಡುತ್ತಿದ್ದನು. ಜೂ.10ರಂದು ದೆಹಲಿಗೆ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಅಲ್ಲಿಂದ ಜೂ.12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದನು. ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾಥಮಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಠಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರು ಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 468ಕಾಯಿದೆಯಡಿ 1 ವರ್ಷ ಜೈಲುಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿದೆ. ಐಪಿಸಿ 417, 465, 471 ಕಾಯ್ದೆಯಡಿ ತಲಾ 6 ತಿಂಗಳು ಸಜೆ ಹಾಗೂ 5,000ರೂ. ದಂಡ ವಿಧಿಸಿದೆ. ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

TAGGED:bengaluruCrime NewsRaghupathi BhatUdupi CJM CourtUdupi Policeಉಡುಪಿ ಪೊಲೀಸ್‌ಉಡುಪಿ ಸಿಜೆಎಂ ಕೋರ್ಟ್‌ಬೆಂಗಳೂರುರಘುಪತಿ ಭಟ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
22 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
29 minutes ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
44 minutes ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
58 minutes ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
1 hour ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?