Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರಕ ಚತುರ್ದಶಿ ಏಕೆ ಆಚರಿಸ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನರಕ ಚತುರ್ದಶಿ ಏಕೆ ಆಚರಿಸ್ತಾರೆ?

Bengaluru City

ನರಕ ಚತುರ್ದಶಿ ಏಕೆ ಆಚರಿಸ್ತಾರೆ?

Public TV
Last updated: November 11, 2023 5:33 pm
Public TV
Share
2 Min Read
1
SHARE

ನರಕ ಚತುರ್ದಶಿ ದೀಪಾವಳಿಯ (Deepavali Festival) 2ನೇ ಮಹತ್ವದ ದಿನವಾಗಿದೆ. ಇದನ್ನು ಪ್ರತಿವರ್ಷ ಕಾರ್ತಿಕ ಮಾಸದ 14ನೇ ದಿನದಂದು ಆಚರಿಸಲಾಗುತ್ತದೆ. ಈ ದಿನ ಶ್ರೀಕೃಷ್ಣ ಮತ್ತು ಸತ್ಯಭಾಮಾ ಇಬ್ಬರೂ ಸೇರಿ ನರಕಾಸುರ ಎಂಬ ರಾಕ್ಷಸನನ್ನು ಸಂಹಾರ (Narakasura Vadha) ಮಾಡಿದರು. ಅದಕ್ಕಾಗಿ ನರಕ ಚತುರ್ದಶಿ ಆಚರಣೆಗೆ ಬಂದಿತು ಎಂಬ ನಂಬಿಕೆಯಿದೆ. ಇದಕ್ಕೆ ಭಾಗವತ ಪುರಾಣದಲ್ಲಿ ಉಲ್ಲೇಖಗಳಿವೆ ಎನ್ನುತ್ತಾರೆ. ಆದ್ರೆ ಕಾಳಿಕಾ ಪುರಾಣದಲ್ಲಿ ಮಹಾಕಾಳಿ (Mahakali) ಈ ದಿನದಂದು ನರಕಾಸುರನನ್ನು ಸಂಹರಿಸಿದಳು, ಅದಕ್ಕಾಗಿ ನರಕ ಚತುರ್ದಶಿ ಆಚರಣೆಗೆ ಬಂತು ಎಂಬ ಉಲ್ಲೇಖಗಳಿವೆ.

2

ಭಾಗವತಾ ಪುರಾಣ ಕಥೆ ಹೇಳುವಂತೆ, ಹಿಂದೆ ಪ್ರಾಗ್‌ಜ್ಯೋತಿಷಪುರ ಎಂಬಲ್ಲಿ ಭೌಮಾಸುರ ಅಥವಾ ನರಕಾಸುರನೆಂಬ ಒಬ್ಬ ಬಲಾಢ್ಯ ರಾಕ್ಷಸನು ರಾಜ್ಯವನ್ನಾಳುತ್ತಿದ್ದನು. ಅವನು ದೇವತೆಗಳಿಗೆ ಮತ್ತು ಮಾನವರಿಗೆ ತೊಂದರೆ ಕೊಡುತ್ತಿದ್ದ. ರಾಕ್ಷಸನಾದ ನರಕಾಸುರನು ಭೂಮಿತಾಯಿಯ ಮಗ. ಇವನ ಆಳ್ವಿಕೆಯಲ್ಲಿ ಸಾಕಷ್ಟು ದೌರ್ಜನ್ಯ ಎಸಗಿದ್ದ, ಜನರಿಗೆ ಮೋಸ ಮಾಡಿದ್ದ. ಭೂಮಿಯ ಮೇಲೆ ತನ್ನದೇ ಆಡಳಿತ ಮಾಡುತ್ತಾ ದುರಹಂಕಾರಕ್ಕೆ ಒಳಗಾಗಿದ್ದ. ನಂತರ ತಾನು ಸ್ವರ್ಗವನ್ನು ಆಳಬೇಕು ಎಂದು ಬಯಸಿದ. ಈ ಬಯಕೆಯ ಪ್ರಯುಕ್ತ ಯುದ್ಧಕ್ಕಾಗಿ ಇಂದ್ರ ದೇವನನ್ನು ಆಹ್ವಾನಿಸಿದನು.

DEEPAVALI

ಈ ದುಷ್ಟದೈತ್ಯನು ಸ್ತ್ರೀಯರನ್ನು ಪೀಡಿಸತೊಡಗಿದನು. ಅವನು ತಾನು ಜಯಿಸಿ ತಂದಿದ್ದ 16,000 ವಿವಾಹಯೋಗ್ಯ ರಾಜಕನ್ಯೆಯರನ್ನ ಸೆರೆವಾಸದಲ್ಲಿಟ್ಟು ಅವರೊಂದಿಗೆ ವಿವಾಹವಾಗುವ ಹುನ್ನಾರ ಮಾಡಿದ್ದ. ಈ ವೃತ್ತಾಂತವು ಶ್ರೀಕೃಷ್ಣನಿಗೆ ತಿಳಿದ ಕೂಡಲೇ ಅವನು ಸತ್ಯಭಾಮೆಯೊಂದಿಗೆ ಬಂದು ನರಕಾಸುರನನ್ನು ಸಂಹಾರ ಮಾಡಿ, ಸೆರೆಯಲ್ಲಿದ್ದ ರಾಜಕನ್ಯೆಯರನ್ನ ಮುಕ್ತಗೊಳಿಸಿದನು.

ಏಕೆ ಅಭ್ಯಂಗ ಸ್ನಾನ ಮಾಡಬೇಕು?
ಕೃಷ್ಣನು ಆಶ್ವಯುಜ ಮಾಸದ ಕೃಷ್ಣಪಕ್ಷದ ಚತುರ್ದಶಿ ದಿನದಂದು ನರಕಾಸುರನನ್ನು ಸಂಹರಿಸಿದ. 16000 ರಾಜಪುತ್ರಿಯರನ್ನು ಬಂಧನದಿಂದ ಬಿಡಿಸಿ ಬೆಳಗಿನ ಜಾವ ಮನೆಗೆ ಬಂದು ಅಭ್ಯಂಜನ ಸ್ನಾನ ಮಾಡಿದ. ಅಂದಿನಿಂದ ಕೃಷ್ಣ ಚತುರ್ದಶಿಯನ್ನು ನರಕ ಚತುರ್ದಶಿ ಎಂದು ಆಚರಿಸಲಾಗುತ್ತದೆ. ನರಕಾಸುರನನ್ನು ಸಂಹರಿಸಿದಾಗ ದೇಹದ ರಕ್ತದ ಕಲೆಗಳಾಗಿದ್ದರಿಂದ ಅದನ್ನು ಶುಚಿಗೊಳಿಸಲು ಶ್ರೀಕೃಷ್ಣನು ಸಹ ಎಣ್ಣೆ-ನೀರನ್ನು ಹಾಕಿಕೊಂಡಿದ್ದನು. 16000 ರಾಜಪುತ್ರಿಯರು ಕೃಷ್ಣನ ಕಡೆಗೆ ಬಂದು ಕೃತಜ್ಞತೆ ಸಲ್ಲಿಸಿ ಸಂಭ್ರಮದಿಂದ ಕೃಷ್ಣನಿಗೆ ಆರತಿ ಬೆಳಗಿ ಪೂಜಿಸಿದರು.

deepavali

ತಾಯಿ ಭೂದೇವಿ ಮಗ ನರಕಾಸುರನನ್ನು ಕಳೆದುಕೊಂಡು ದುಃಖಿಸಿದಳು. ಈ ದಿನವು ನನ್ನ ಮಗನ ಹೆಸರಿನಿಂದ ಆಚರಿಸಲ್ಪಡಲಿ. ಈ ದಿನ ಎಲ್ಲರೂ ನಿನ್ನಂತೆಯೇ ಅಭ್ಯಂಜನ ಸ್ನಾನ ಮಾಡಲಿ ಎಂದು ಕೃಷ್ಣನಲ್ಲಿ ಬೇಡಿದಳು. ಕೃಷ್ಣ ತಥಾಸ್ತು ಎಂದ. ಈ ಕಾರಣಕ್ಕೆ ನರಕಚತುರ್ದಶಿಯಂದು ಜನರು ಅಭ್ಯಂಜನ ಮಾಡುತ್ತಾರೆ. ಬೆಳಗಿನ ಜಾವ ಮಾಡುವ ಅಭ್ಯಂಜನ ಶ್ರಿಕೃಷ್ಣನೊಂದಿಗೆ ಭೂದೇವಿಗೂ ಹಿತಕರ. ಅಂದು ಜನರು ಸೂರ್ಯೋದಯಕ್ಕೂ ಮುಂಚೆ ಎದ್ದು, ಅಭ್ಯಂಗ ಸ್ನಾನ ಮಾಡುತ್ತಾರೆ. ಜೊತೆಗೆ ಬಾಳಿನ ಕತ್ತಲೆಯನ್ನು ತೊಡೆದು ಹಾಕಬೇಕೆಂಬ ನಂಬಿಕೆಯಿಂದ ಮನೆ ಮನೆಯಲ್ಲೂ ದೀಪ ಬೆಳಗಿಸುತ್ತಾರೆ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ.

ಅಷ್ಟೇ ಅಲ್ಲದೇ ಪ್ರಾಚೀನ ವೈದ್ಯ ಪದ್ಧತಿಯಾದ ಆಯುರ್ವೇದದಲ್ಲಿಯೂ ಅಭ್ಯಂಗಕ್ಕೆ ವಿಶೇಷ ಮಹತ್ವವಿದೆ. ಶರೀರಕ್ಕೆ ತೈಲ ಹಚ್ಚಿ ಮೃದುವಾಗಿ ತೀಡಿ, ಸ್ವಲ್ಪ ಹೊತ್ತು ಕಳೆದ ನಂತರ ಸ್ನಾನ ಮಾಡುವುದನ್ನು ಅಭ್ಯಂಗ ಸ್ನಾನವೆಂದು ಹೇಳಲಾಗುತ್ತೆ. ಹಿಂದೂ ಸಂಪ್ರದಾಯದಲ್ಲಿ ಅಮಾವಾಸ್ಯೆ, ಹಬ್ಬ-ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲೂ ಅಭ್ಯಂಗ ಸ್ನಾನ ಮಾಡಿ, ದೇವರಿಗೆ ಪೂಜೆ ಸಲ್ಲಿಸುತ್ತಾರೆ.

ಅಂದು ಚಿಕ್ಕಮಕ್ಕಳಾದಿಯಾಗಿ ಎಲ್ಲರೂ ಅಭ್ಯಂಜನ ಸ್ನಾನಮಾಡಿ ಹೊಸವಸ್ತ್ರಗಳನ್ನು ಧರಿಸುತ್ತಾರೆ. ನರಕ ಎಂದರೆ ಅಜ್ಞಾನ. ಚತುರ್ದಶಿ ಎಂದರೆ ಬೆಳಕು. ಅಜ್ಞಾನ ಕಳೆದು ಸುಜ್ಞಾನದ ಬೆಳಕು ದೊರೆಯಲೆಂದೇ ನರಕಚತುರ್ದಶಿಯ ಆಚರಣೆ.

TAGGED:Deepavali festivalDiwali 2023Naraka ChaturdashiNarakasura VadhaNarakasura Vadha Storyದೀಪಾವಳಿದೀಪಾವಳಿ ವಿಶೇಷನರಕ ಚತುರ್ದಶಿನರಕಾಸುರ ಸಂಹಾರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
3 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
4 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
4 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?