Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

Public TV
Last updated: November 15, 2023 10:46 pm
Public TV
Share
4 Min Read
Team India 1 2
SHARE

ಮುಂಬೈ: ಮೊಹಮ್ಮದ್‌ ಶಮಿ (Mohammed Shami) ಬೆಂಕಿ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ (Team India) ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಬಾರಿಗೆ ಫೈನಲ್‌ (World Cup Final) ಪ್ರವೇಶಿಸಿದೆ. ಅಷ್ಟೇ ಅಲ್ಲದೇ 2019ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ICC poster for the Finalist – India. ???????? pic.twitter.com/Gs7UTZBwp7

— Mufaddal Vohra (@mufaddal_vohra) November 15, 2023

ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 4 ವಿಕೆಟ್‌ ನಷ್ಟಕ್ಕೆ 50 ಓವರ್‌ಗಳಲ್ಲಿ 397 ರನ್‌ ಕಲೆಹಾಕಿತ್ತು. 398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ 48.5 ಓವರ್‌ಗಳಲ್ಲೇ 327 ರನ್‌ ಗಳಿಗೆ ಸರ್ವಪತನ ಕಂಡಿತು. ಇದರಿಂದ ಟೀಂ ಇಂಡಿಯಾ ಸತತ 10ನೇ ಜಯದೊಂದಿಗೆ ಫೈನಲ್‌ ಪ್ರವೇಶಿಸಿತು. ಇದನ್ನೂ ಓದಿ: ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

Team India 3

ಕಿವೀಸ್‌ ಗೆಲುವಿಗೆ ಕೊನೆಯ 10 ಓವರ್‌ಗಳಲ್ಲಿ 132 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ಗೆ ಬಂದ ಮೊಹಮ್ಮದ್‌ ಸಿರಾಜ್‌ 41ನೇ ಓವರ್‌ನಲ್ಲಿ 20 ರನ್‌ ಬಿಟ್ಟುಕೊಟ್ಟರು. ಆದ್ರೆ 42ನೇ ಓವರ್‌ನಲ್ಲಿ ಕುಲ್ದೀಪ್‌ ಯಾದವ್‌ ಕೇವಲ 2 ರನ್‌ ನೀಡಿ ನಿಯಂತ್ರಣಕ್ಕೆ ತಂದರು. 43ನೇ ಓವರ್‌ನಲ್ಲಿ 7 ರನ್‌ ಬಿಟ್ಟುಕೊಟ್ಟರೂ ಗ್ಲೇನ್‌ ಫಿಲಿಪ್ಸ್‌ ಅವರ ಪ್ರಮುಖ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು. 44ನೇ ಓವರ್‌ನಲ್ಲಿ ತನ್ನ ಕೊನೆಯ ಓವರ್‌ ಎಸೆದ ಕುಲ್ದೀಪ್‌ ಒಂದು ವಿಕೆಟ್‌ ಕಬಳಿಸುವ ಜೊತೆಗೆ 4 ರನ್‌ ಬಿಟ್ಟುಕೊಟ್ಟರು. 45ನೇ ಓವರ್‌ನಲ್ಲಿ ಮತ್ತೆ ಬುಮ್ರಾ 7 ರನ್‌ ಬಿಟ್ಟುಕೊಟ್ಟರು. ಇನ್ನೂ 5 ಓವರ್‌ಗಳಲ್ಲಿ 92 ರನ್‌ ಬೇಕಿತ್ತು. ಅಷ್ಟರಲ್ಲೇ ಸಿಕ್ಸರ್‌ ಸಿಡಿಸುವ ಪ್ರಯತ್ನಕ್ಕೆ ಮುಂದಾದ ಮಿಚೆಲ್‌ ಶಮಿ ಬೌಲಿಂಗ್‌ನಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು. ಇದರೊಂದಿಗೆ ಕಿವೀಸ್‌ ಗೆಲುವಿನ ಕನಸು ಸಹ ಭಗ್ನಗೊಂಡಿತು. ಇನ್ನುಳಿದಂತೆ ಕೊನೆಯ ಕೊನೆಯ 4 ಓವರ್‌ಗಳಲ್ಲಿ ಕ್ರಮವಾಗಿ 2, 5,7,7 ಸೇರ್ಪಡೆಯಾಯಿತು.

Kane Williamson

398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ ಪಡೆ ಸ್ಫೋಟಕ ಇನ್ನಿಂಗ್ಸ್‌ಗೆ ಮುಂದಾಗಿತ್ತು. ಆದ್ರೆ 30 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡ ಕಿವೀಸ್‌, ಮುಂದಿನ 9 ರನ್‌ಗಳ ಅಂತರದಲ್ಲೇ ಮತ್ತೊಂದು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ಡೇರಿಲ್‌ ಮಿಚೆಲ್‌ ಜೋಡಿ ಭರ್ಜರಿ ಜೊತೆಯಾಟ ನೀಡಿತ್ತು. 3ನೇ ವಿಕೆಟ್‌ಗೆ ಈ ಜೋಡಿ 149 ಎಸೆತಗಳಲ್ಲಿ 181 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ಕೊನೆಯ 18.2 ಓವರ್‌ಗಳಲ್ಲಿ 184 ರನ್‌ಗಳ ಅಗತ್ಯವಿತ್ತು. ಅಷ್ಟರಲ್ಲಿ ತಮ್ಮ ಮಾರಕ ದಾಳಿ ಪ್ರದರ್ಶಿಸಿದ ಮೊಹಮ್ಮದ್‌ ಶಮಿ ವಿಲಿಯಮ್ಸನ್‌ ಆಟಕ್ಕೆ ಬ್ರೇಕ್‌ ಹಾಕಿದರು. ವಿಲಿಮ್ಸನ್‌ ಔಟಾದ ಬೆನ್ನಲ್ಲೇ ಟಾಮ್‌ ಲಾಥಮ್‌ 2 ಎಸೆತಗಳಲ್ಲೇ ಡಗೌಟ್‌ ಆದರು.

Daryl Mitchell

ಕೊನೆಯವರೆಗೂ ಏಕಾಂಗಿಯಾಗಿ ಹೋರಾಡಿದ ಡೇರಿಲ್‌ ಮಿಚೆಲ್‌ 119 ಎಸೆತಗಳಲ್ಲಿ 134 ರನ್‌ (7 ಸಿಕ್ಸರ್‌, 9 ಬೌಂಡರಿ) ಚಚ್ಚಿ ಔಟಾದರು. ಡೆವೋನ್‌ ಕಾನ್ವೆ 13 ರನ್‌, ರಚಿನ್‌ ರವೀಂದ್ರ 13 ರನ್‌, ಕೇನ್‌ ವಿಲಿಯಮ್ಸನ್‌ 69 ರನ್‌ (73 ಎಸೆತ, 8 ಬೌಂಡರಿ, 1 ಸಿಕ್ಸರ್)‌, ಗ್ಲೇನ್‌ ಫಿಲಿಪ್ಸ್‌ 33 ಎಸೆತಗಳಲ್ಲಿ 41 ರನ್‌ (2 ಸಿಕ್ಸರ್‌, 4 ಬೌಂಡರಿ), ಮಾರ್ಕ್‌ ಚಾಪ್ಮನ್‌ 2 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಟಿಮ್‌ ಸೌಥಿ 9 ರನ್‌, ಟ್ರೆಂಟ್‌ ಬೌಲ್ಟ್‌ 2 ರನ್‌, ಲಾಕಿ ಫರ್ಗೂಸನ್‌ 6 ರನ್‌ ಗಳಿಸಿದರು. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

ಶಮಿ ಶೈನ್:‌ ಟೀಂ ಇಂಡಿಯಾ ಪರ ಸಾಮರ್ಥ್ಯ ಪ್ರದರ್ಶಿಸಿದ ಮೊಹಮ್ಮದ್‌ ಶಮಿ 9.5 ಓವರ್‌ಗಳಲ್ಲಿ 57 ರನ್‌ ಬಿಟ್ಟು ಕೊಟ್ಟು 7 ವಿಕೆಟ್‌ ಪಡೆದರು. ಈ ಮೂಲಕ 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲೇ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಖ್ಯಾತಿಗೂ ಪಾತ್ರರಾದರು. ಇನ್ನುಳಿದಂತೆ ಬುಮ್ರಾ, ಸಿರಾಜ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

Team India 2

ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 50 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟ ನೀಡಿತು. ರೋಹಿತ್‌ ಶರ್ಮಾ ಔಟಾಗುತ್ತಿದ್ದಂತೆ 2ನೇ ವಿಕೆಟ್‌ಗೆ 93 ರನ್‌ಗಳ ಜೊತೆಯಾಟ ನೀಡಿದ್ದರು. ಆದ್ರೆ ಕಾಲುನೋವಿನಿಂದಾಗಿ ಶುಭಮನ್‌ ಗಿನ್‌ ಅರ್ಧಕ್ಕೆ ಕ್ರೀಸ್‌ನಿಂದ ಹೊರನಡೆದರು. ಈ ನಡುವೆ ಕಿವೀಸ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ವಿರಾಟ್‌ ಕೊಹ್ಲಿ ಮತ್ತು ಶ್ರೇಯಸ್‌ ಅಯ್ಯರ್‌ ಜೋಡಿ 128 ಎಸೆತಗಳಲ್ಲಿ 163 ರನ್‌ ಕಲೆಹಾಕಿತು. ಕೊಹ್ಲಿ ಶತಕ ಸಿಡಿಸಿ ಔಟಾದ ಬಳಿಕ ಕ್ರೀಸ್‌ಗಿಳಿಯುತ್ತಿದ್ದಂತೆ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದ ಕೆ.ಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಜೊತೆಗೂಡಿ 29 ಎಸೆತಗಳಲ್ಲೇ 54 ರನ್‌ಗಳ ಜೊತೆಯಾಟ ನೀಡಿದರು. ಇದರಿಂದಾಗಿ ತಂಡದ ಮೊತ್ತ 400 ರನ್‌ಗಳ ಗಡಿ ಸಮೀಪಿಸುವಲ್ಲಿ ಯಶಸ್ವಿಯಾಯಿತು.

Team India 4

ರೋಹಿತ್‌ ಶರ್ಮಾ 47 ರನ್‌ (40 ಎಸೆತ, 4 ಸಿಕ್ಸರ್‌, 4 ಬೌಂಡರಿ), ಶುಭಮನ್‌ ಗಿಲ್‌ 80 ರನ್‌ (66 ಎಸೆತ, 3 ಸಿಕ್ಸರ್‌, 8 ಬೌಂಡರಿ), ವಿರಾಟ್‌ ಕೊಹ್ಲಿ 117 ರನ್‌ (113 ಎಸೆತ, 9 ಬೌಂಡರಿ, 2 ಸಿಕ್ಸರ್)‌, ಶ್ರೇಯಸ್‌ ಅಯ್ಯರ್‌ 105 ರನ್‌ (70 ಎಸೆತ, 8 ಸಿಕ್ಸರ್‌, 4 ಬೌಂಡರಿ), ಕೆ.ಎಲ್‌ ರಾಹುಲ್‌ 39 ರನ್‌ (20 ಎಸೆತ, 5 ಬೌಂಡರಿ, 2 ಸಿಕ್ಸರ್)‌, ಸೂರ್ಯಕುಮಾರ್‌ ಯಾದವ್‌ 1 ರನ್‌ ಗಳಿಸಿದರು.

ಕಿವೀಸ್‌ ಪರ ಟಿಮ್‌ ಸೌಥಿ 10 ಓವರ್‌ಗಳಲ್ಲಿ 100 ರನ್‌ ಚಚ್ಚಿಸಿಕೊಂಡು 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೌಲ್ಟ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

TAGGED:Daryl MitchellIND vs NZindiaKane WilliamsonMohammed Shaminew zealandRohit SharmaShreyas IyerShubman Gillvirat kohliಕೇನ್ ವಿಲಿಯಮ್ಸನ್ಟೀಂ ಇಂಡಿಯಾಡೇರಿಲ್ ಮಿಚೆಲ್ನ್ಯೂಜಿಲೆಂಡ್ಮೊಹಮ್ಮದ್ ಶಮಿರೋಹಿತ್ ಶರ್ಮಾವಿರಾಟ್ ಕೊಹ್ಲಿಶ್ರೇಯಸ್ ಅಯ್ಯರ್
Share This Article
Facebook Whatsapp Whatsapp Telegram

Cinema News

Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories

You Might Also Like

8 Women Die On Way To Temple After Van Falls Off Road On Hilly Terrain In Pune
Crime

30 ಅಡಿ ಕಂದಕಕ್ಕೆ ಉರುಳಿದ ವ್ಯಾನ್ – 8 ಮಹಿಳೆಯರು ಸಾವು, 29 ಮಂದಿಗೆ ಗಾಯ

Public TV
By Public TV
4 hours ago
Dharmasthala Mass Burial Probe NHRC begins work on document collection
Districts

ಧರ್ಮಸ್ಥಳ ಬುರುಡೆ ರಹಸ್ಯ – ದಾಖಲೆ ಸಂಗ್ರಹಿಸುವ ಕೆಲಸ ಆರಂಭಿಸಿದ NHRC

Public TV
By Public TV
4 hours ago
BASAVARAJU FINE
Chamarajanagar

ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!

Public TV
By Public TV
5 hours ago
Basavaraj Bommai 1
Districts

ಗದಗ-ಯಲವಿಗಿ ರೈಲ್ವೆ ಯೋಜನೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

Public TV
By Public TV
5 hours ago
Mansukh Mandaviya
Latest

ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ

Public TV
By Public TV
5 hours ago
Brijesh Chowta
Latest

ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?