ಸ್ಕೂಟರ್‌ಗೆ ಬೆಂಕಿ ಹಚ್ಚಿ ಪ್ರಿಯತಮೆಗೆ ವೀಡಿಯೋ ಕಾಲ್ ಮಾಡಿದ!

Public TV
1 Min Read
NELAMANGALA

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ (Nelamangala) ಪಾಗಲ್ ಪ್ರೇಮಿಯೊಬ್ಬ ಹುಚ್ಚಾಟ ಮೆರೆದ ಘಟನೆ ನಡೆದಿದೆ.

ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ (Shivagange) ಬೆಟ್ಟದ ಮುಖ್ಯ ದ್ವಾರದ ಬಸ್ ನಿಲ್ದಾಣದ ಬಳಿ ನಡೆದಿದೆ. ಪ್ರೇಯಸಿ ಕೈಕೊಟ್ಟಿದ್ದರಿಂದ ಮನನೊಂದು ಆತುರದ ನಿರ್ಧಾರ ತೆಗೆದುಕೊಂಡಿದ್ದಾನೆ.

ನಡೆದಿದ್ದೇನು..?: ಚೇತನ್ ಎಂಬಾತ 15 ದಿನಗಳ ಹಿಂದೆಯಷ್ಟೇ ಹೊಸ ಸ್ಕೂಟರ್ ಖರೀದಿ ಮಾಡಿದ್ದ. ಆದರೆ ಈ ನಡುವೆ ಚೇತನ್‍ಗೆ ಪ್ರಿಯತಮೆ ಕೈಕೊಟ್ಟಿದ್ದಾಳೆ. ಪ್ರೀತಿಸಿದ ಯುವತಿ ಕೈಕೊಟ್ಟ ವೇದನೆಯಿಂದ ಚೇತನ್ ತನ್ನ ಸ್ಕೂಟರ್ ಗೆ ತಾನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅಲ್ಲದೇ ಯುವತಿಗೆ ವೀಡಿಯೋ ಕಾಲ್ ಮಾಡಿ ಹೊತ್ತಿ ಉರಿಯುತ್ತಿದ್ದ ಬೇಕಿನ ದೃಶ್ಯವನ್ನು ತೋರಿಸಿದ್ದಾನೆ.

ಈ ಎಲ್ಲಾ ಘಟನೆಯನ್ನು ಸ್ಥಳೀಯರು ಕೂಡ ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ಯುವಕನ ಹುಚ್ಚಾಟಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಬೈಕಿಗೆ ಬೆಂಕಿ ಹಚ್ಚಿದ ಬಳಿಕ ಯುವಕ ನಾಪತ್ತೆಯಾಗಿದ್ದಾನೆ.

Share This Article