ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ನವೆಂಬರ್ 25, 26ರಂದು ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಟ್ರೈಲರ್ಗೆ ಪ್ರಭಾಸ್ ರಿಯಾಕ್ಷನ್
ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.
ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಮಾಡಲಾಗಿದೆ.
ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ.
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.