Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಡಿಸೆಂಬರ್ 1ರಿಂದ ಭಾರತೀಯರಿಗೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

Public TV
Last updated: November 27, 2023 11:56 am
Public TV
Share
2 Min Read
Visa Free Travel To Malaysia
SHARE

ಕೌಲಾಲಂಪುರ್: ಪ್ರಧಾನಿ ಅನ್ವರ್ ಇಬ್ರಾಹಿಂ (Anwar Ibrahim) ನೇತೃತ್ವದ ಮಲೇಷ್ಯಾ (Malaysia) ಸರ್ಕಾರವು ಚೀನಾ (China) ಮತ್ತು ಭಾರತೀಯ (Indians) ನಾಗರಿಕರಿಗೆ ಪ್ರವೇಶ ವೀಸಾಗಳಿಗೆ ಸಂಬಂಧಿಸಿದಂತೆ ಮಹತ್ವದ ನೀತಿ ಬದಲಾವಣೆಯನ್ನು ಘೋಷಿಸಿದೆ. ಮಲೇಷ್ಯಾ ಸರ್ಕಾರ ಡಿಸೆಂಬರ್ 1ರಿಂದ 30 ದಿನಗಳವರೆಗೆ ವಾಸ್ತವ್ಯ ಹೂಡಲು ಚೀನಾ ಮತ್ತು ಭಾರತದ ನಾಗರಿಕರಿಗೆ ವೀಸಾಮುಕ್ತ ಪ್ರವೇಶವನ್ನು (Visa-Free Entry) ಘೋಷಿಸಿದೆ.

ಪುತ್ರಜಯದಲ್ಲಿ ನಡೆದ ಪೀಪಲ್ಸ್ ಜಸ್ಟಿಸ್ ಪಾರ್ಟಿಯ ವಾರ್ಷಿಕ ಸಭೆಯಲ್ಲಿ ಭಾಷಣ ಮಾಡುವ ಸಂದರ್ಭ ಇಬ್ರಾಹಿಂ ಈ ಘೋಷಣೆ ಮಾಡಿದರು. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಭಾರತೀಯ ಪ್ರಯಾಣಿಕರಿಗೆ ಏನು ಬದಲಾವಣೆ?
ವೀಸಾ ನಿರ್ಮೂಲನೆ: ಮಲೇಷ್ಯಾಕ್ಕೆ ಭೇಟಿ ನೀಡುವ ಭಾರತೀಯ ನಾಗರಿಕರಿಗೆ ಇನ್ನು ಮುಂದೆ ಡಿಸೆಂಬರ್ 1 ರಿಂದ ಪ್ರವೇಶ ವೀಸಾಗಳ ಅಗತ್ಯವಿಲ್ಲ.
ವೀಸಾ-ಮುಕ್ತ ವಾಸ್ತವ್ಯ: ಭಾರತೀಯರು ವೀಸಾ ಪಡೆಯದೆ 30 ದಿನಗಳವರೆಗೆ ಮಲೇಷ್ಯಾದಲ್ಲಿ ಉಳಿಯಬಹುದು.
ಭದ್ರತಾ ಸ್ಕ್ರೀನಿಂಗ್: ಮಲೇಷ್ಯಾಕ್ಕೆ ಭೇಟಿ ನೀಡುವ ಭಾರತೀಯ ಪ್ರಜೆಗಳಿಗೆ ಭದ್ರತಾ ಸ್ಕ್ರೀನಿಂಗ್ ಇರುತ್ತದೆ.

ಈ ಕ್ರಮ ಕೈಗೊಳ್ಳಲು ಕಾರಣವೇನು?
ವಿಶೇಷವಾಗಿ ಭಾರತ ಮತ್ತು ಚೀನಾದಿಂದ ಪ್ರವಾಸಿಗರು ಮತ್ತು ಹೂಡಿಕೆದಾರರ ಒಳಹರಿವನ್ನು ಮತ್ತಷ್ಟು ಉತ್ತೇಜಿಸಲು ಮುಂಬರುವ ವರ್ಷದಲ್ಲಿ ವೀಸಾ ಸೌಲಭ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ಪ್ರಧಾನಿ ಇಬ್ರಾಹಿಂ ಈ ಹಿಂದೆ ಬಹಿರಂಗಪಡಿಸಿದ್ದರು. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

ಚೀನಾ ಮತ್ತು ಭಾರತವು ಮಲೇಷ್ಯಾಕ್ಕೆ ನಿರ್ಣಾಯಕ ಮಾರುಕಟ್ಟೆಗಳಾಗಿದ್ದು, ಪ್ರವಾಸಿಗರ ಆಗಮನದ ನಾಲ್ಕನೇ ಮತ್ತು ಐದನೇ ಅತಿದೊಡ್ಡ ಮೂಲಗಳಾಗಿವೆ. ಈ ವರ್ಷದ ಜನವರಿ ಮತ್ತು ಜೂನ್ ನಡುವೆ, ಮಲೇಷ್ಯಾವು ಒಟ್ಟು 9.16 ಮಿಲಿಯನ್ ಪ್ರವಾಸಿಗರ ಆಗಮನವನ್ನು ದಾಖಲಿಸಿದೆ. ಭಾರತದಿಂದ ಮಲೇಷ್ಯಾಗೆ ಒಟ್ಟು 2,83,885 ಪ್ರವಾಸಿಗರು ಆಗಮಿಸಿದ್ದು, ಚೀನಾದಿಂದ ಒಟ್ಟು 4,98,540 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ವಿದೇಶಗಳಲ್ಲಿ ಮದುವೆ ಆಗಬೇಡಿ: ಭಾರತೀಯರಿಗೆ ಪ್ರಧಾನಿ ಮೋದಿ ಸಲಹೆ

ಪ್ರವೇಶ ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಬಹುದು ಮತ್ತು ದೇಶದೊಳಗೆ ಅವರ ವೆಚ್ಚವನ್ನು ಹೆಚ್ಚಿಸಬಹುದು. ಆ ಮೂಲಕ ಮಲೇಷ್ಯಾದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದು ಸರ್ಕಾರ ಭರವಸೆ ಹೊಂದಿದೆ. ಪ್ರಸ್ತುತ, ಚೀನಾ ಮತ್ತು ಭಾರತೀಯ ಪ್ರಜೆಗಳು ಮಲೇಷ್ಯಾ ಪ್ರವೇಶಿಸಲು ವೀಸಾಗಳಿಗೆ ಅರ್ಜಿ ಸಲ್ಲಿಸಬೇಕು. ಇದನ್ನೂ ಓದಿ: ಮೋದಿಯ ಮಾಜಿ ಸ್ನೇಹಿತ ಎಂದಿರೋ ರಾಹುಲ್‍ಗೆ ಓವೈಸಿ ತಿರುಗೇಟು

ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಘೋಷಿಸಿದ ಶ್ರೀಲಂಕಾ, ವಿಯೆಟ್ನಾಂ ಮತ್ತು ಥೈಲ್ಯಾಂಡ್ ನಂತರ ಮಲೇಷ್ಯಾ ನಾಲ್ಕನೇ ದೇಶವಾಗಿದೆ. ನವೆಂಬರ್ 10 ರಿಂದ ಥೈಲ್ಯಾಂಡ್ ಭಾರತೀಯರಿಗೆ ವೀಸಾಮುಕ್ತ ಪ್ರವೇಶವನ್ನು ನೀಡಿದ್ದು, 30 ದಿನಗಳ ವಾಸ್ತವ್ಯವನ್ನು ಘೋಷಿಸಿದೆ. ಈ ನೀತಿಯು ಮುಂದಿನ ವರ್ಷದ ಮೇ 10 ರವರೆಗೆ ಜಾರಿಯಲ್ಲಿರುತ್ತದೆ. ಥಾಯ್ ಸರ್ಕಾರವು ಸೂಚಿಸಿದಂತೆ ಬೇಡಿಕೆಯ ಆಧಾರದ ಮೇಲೆ ವಿಸ್ತರಣೆಯ ಸಾಧ್ಯತೆಯಿದೆ. ಇದನ್ನೂ ಓದಿ: ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ

ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಏಳು ದೇಶಗಳ ಸಂದರ್ಶಕರಿಗೆ ಶ್ರೀಲಂಕಾ ಅಕ್ಟೋಬರ್‌ನಲ್ಲಿ ವೀಸಾ-ಮುಕ್ತ ಪ್ರವೇಶವನ್ನು ಘೋಷಿಸಿದೆ. ಇದನ್ನೂ ಓದಿ: ಹಲಾಲ್‌ ಉತ್ಪನ್ನ ನಿಷೇಧಿಸುವ ನಿರ್ಧಾರ ತೆಗೆದುಕೊಂಡಿಲ್ಲ – ಅಮಿತ್‌ ಶಾ

TAGGED:Anwar IbrahimchinaindiaMalaysiaVisa Free Travelಅನ್ವರ್ ಇಬ್ರಾಹಿಂಚೀನಾಭಾರತಮಲೇಷ್ಯಾವೀಸಾ ಮುಕ್ತ ಪ್ರವೇಶ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
21 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
6 minutes ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
7 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
18 minutes ago
Pramodh Muthalik
Belgaum

ಕುಂಭಮೇಳದಲ್ಲಿ ಜನ ಸತ್ತರು ಅಂತ ಇಲ್ಲೂ ಸಾಯ್ಬೇಕಾ? – ಸಿಎಂ ವಿರುದ್ಧ ಪ್ರಮೋದ್ ಮುತಾಲಿಕ್‌ ಕಿಡಿ

Public TV
By Public TV
24 minutes ago
techie sahana bengaluru stampede 1
Kolar

ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

Public TV
By Public TV
34 minutes ago
KSCA 2 1
Bengaluru City

Stampede Case | ಕಾಲ್ತುಳಿತ ಬಗ್ಗೆ ʻಪಬ್ಲಿಕ್‌ ಟಿವಿʼ ಪ್ರಶ್ನೆಗೆ ಉತ್ತರ ನೀಡದೇ ನುಣುಚಿದ KSCA

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?