Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಬಿಗ್ ಬಾಸ್’ ಎಲಿಮಿನೇಷನ್ ನಿರೀಕ್ಷಿತವೇ ಆಗಿತ್ತು: ನೀತು ವನಜಾಕ್ಷಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಬಿಗ್ ಬಾಸ್’ ಎಲಿಮಿನೇಷನ್ ನಿರೀಕ್ಷಿತವೇ ಆಗಿತ್ತು: ನೀತು ವನಜಾಕ್ಷಿ

Cinema

‘ಬಿಗ್ ಬಾಸ್’ ಎಲಿಮಿನೇಷನ್ ನಿರೀಕ್ಷಿತವೇ ಆಗಿತ್ತು: ನೀತು ವನಜಾಕ್ಷಿ

Public TV
Last updated: November 27, 2023 12:04 pm
Public TV
Share
4 Min Read
Neetu 4
SHARE

ಏಳನೇ ವಾರದಲ್ಲಿ ಬಿಗ್‌ಬಾಸ್ (Bigg Boss Kannada) ಮನೆಯಿಂದ ನೀತು ವನಜಾಕ್ಷಿ (Neetu Vanajakshi) ಹೊರಬಿದ್ದಿದ್ದಾರೆ. ಏಳು ವಾರಗಳ ಸುದೀರ್ಘ ಅವಧಿಯಲ್ಲಿ ಬಿಗ್‌ಬಾಸ್ ಮನೆಯಲ್ಲಿ ಹಲವು ಏಳುಬೀಳುಗಳನ್ನು ಅವರು ಕಂಡಿದ್ದಾರೆ. ಈ ವಾರ ಅವರೇ ಮನೆಯ ಕ್ಯಾಪ್ಟನ್ ಆಗಿರುವುದೂ ವಿಶೇಷ. ಆದರೆ ಆ ಕ್ಯಾಪ್ಟನ್ಸಿ ಅವಧಿಯನ್ನು ಪೂರ್ತಿಗೊಳಿಸುವ ಮುನ್ನವೇ ಅವರು ಹೊರಗೆ ಬರಬೇಕಾಗಿದೆ. ಬಿಗ್‌ಬಾಸ್‌ನ ಈ ಜರ್ನಿಯ ಕುರಿತು JioCinemaಗೆ ನೀಡಿರುವ ಎಕ್ಸ್‌ಕ್ಲ್ಯೂಸಿವ್ ಸಂದರ್ಶನದಲ್ಲಿ (Interview) ನೀತು ಹಲವು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

Neetu Vanajakshi 1

‘ಈವಾಗಷ್ಟೇ ಹೊರಗೆ ಬಂದಿದೀನಿ. ಸ್ವಲ್ಪ ಬೇಜಾರು ಇದ್ದೇ ಇದೆ. ಆದರೆ 50 ದಿನ ಮುಗಿಸಿದ್ದೇನೆ ಎಂಬ ಖುಷಿಯಿದೆ. ಎಲ್ಲ ಕಂಟೆಸ್ಟೆಂಟ್‌ಗಳ ಮಧ್ಯ ನಾನೂ ಅಷ್ಟು ದಿನ ಸರ್ವೈವ್ ಆಗಿದ್ದೀನಿ ಎಂಬ ಹೆಮ್ಮೆ ಇದೆ. ತುಂಬ ಅನುಭವಗಳ ಜೊತೆಗೆ ಮನೆಗೆ ಹೋಗುತ್ತಿದ್ದೇನೆ. ಈ ಅನುಭವಗಳನ್ನು ಮುಂದೆ ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಮುನ್ನುಗ್ಗುತ್ತೇನೆ.

Neetu 2

ಎಲಿಮಿನೇಷನ್‌ ನಿರೀಕ್ಷಿತವೇ ಆಗಿತ್ತು!

ಹೊರಗಡೆ ಬರ್ತೀನಿ ಅನ್ನುವುದನ್ನು ನಿರೀಕ್ಷೆ ಮಾಡಿದ್ದೆ. ಯಾಕಂದ್ರೆ ಕಳೆದ ಎರಡು ವಾರದಿಂದ ನನ್ನ ಪರ್ಪಾರ್ಫೆನ್ಸ್‌ ತುಂಬ ಕಡಿಮೆ ಇತ್ತು. ಆದರೆ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಚೆನ್ನಾಗಿ ಆಡಿದ್ದೆ. ಆದರೆ ದುರದೃಷ್ಟ. ಏನೂಮಾಡಕ್ಕಾಗಲ್ಲ.

ಕೆಲವೊಂದು ವಿಚಾರದಲ್ಲಿ ನಾನು ಸ್ವಲ್ಪ ಹಿಂದೇಟು ಹಾಕ್ತಿದ್ದೆ. ಯಾಕಂದ್ರೆ ಆರಂಭದಲ್ಲಿ ಜಗಳ ಆಡ್ತಿದ್ದೆ. ಸರಿಯಾದ ವಿಷಯಕ್ಕೇ ಜಗಳ ಆಡ್ತಿದ್ದೆ. ಆಮೇಲಾಮೇಲೆ, ನಾನು ಬೇರೆ ರೀತಿ ಪ್ರೊಜಕ್ಟ್ ಆಗ್ತಿದೀನಾ ಎಂದು ಅನಿಸಲು ಶುರುವಾಯ್ತು. ಅದರಿಂದ ಹಿಂಜರಿಗೆ. ಅಲ್ಲಿಂದ ನನ್ನ ವ್ಯಕ್ತಿತ್ವ ತೋರಿಸಲು ಸಾಧ್ಯವಾಗಲಿಲ್ಲ. ಟಾಸ್ಕ್‌ನಲ್ಲಿಯೂ ಎಲ್ಲರೂ ಹೇಳಿದ್ದನ್ನ ಒಪ್ಪಿಕೊಂಡುಬಿಡುತ್ತಿದ್ದೆ. ಅಲ್ಲಿ ಇನ್ನೂ ಸ್ವಲ್ಪ ಚುರುಕಾಗಿದ್ದಿದ್ರೆ ನಾನು ಸರ್ವೈವ್ ಆಗಬಹುದಾಗಿತ್ತು. ಈಗ ನಾನು ಮತ್ತೆ ಹೋದ್ರೆ ಖಂಡಿತ ಇನ್ನಷ್ಟು ಚೆನ್ನಾಗಿ ಪರ್ಫಾರ್ಪೆನ್ಸ್‌ ಮಾಡುತ್ತೇನೆ.

Neetu 1

ಕಿಚ್ಚನ ಚಪ್ಪಾಳೆ ಎಂಬ ಟ್ರೋಫಿ!

ಯಾವಾಗ ನನಗೆ ಕಿಚ್ಚನ ಚಪ್ಪಾಳೆ ಬಂತೋ, ನನಗದು ಟ್ರೋಫಿ ತಗೊಂಡಂಗೆ. ಅಷ್ಟು ಖುಷಿಯಾಯ್ತು ನಂಗೆ. ಚೆನ್ನಾಗಿ ಆಡ್ತಾ ಇದ್ದೀನಿ ಅನ್ನೋ ಕಾನ್ಫಿಡೆನ್ಸ್ ಬಂತು. ಒಬ್ಬ ಸ್ಪರ್ಧಿಗೆ ಏನೇನು ಸಿಗಬೇಕೋ ಅವೆಲ್ಲವೂ ನನಗೆ ಸಿಕ್ಕಿವೆ.

ಜೆನ್ಯೂನ್-ಫೇಕ್!

ಬಿಗ್‌ಬಾಸ್‌ ಮನೆಯೊಳಗೆ ನನ್ನ ಪ್ರಕಾರ ಪ್ರತಾಪ್ ತುಂಬ ಜೆನ್ಯೂನ್. ಯಾಕೆಂದ್ರೆ ಅವನತ್ರ ಮಾತಾಡಬೇಕಾದ್ರೆ ನಾಟಕೀಯತೆ ಇರುತ್ತಿರಲಿಲ್ಲ. ಚೆನ್ನಾಗಿ ಆಡ್ತಾನೂ ಇದ್ದಾನೆ. ಸ್ನೇಹಿತ್ ಫೇಕ್ ಅನಿಸ್ತಾನೆ. ಯಾಕೆಂದರೆ ‘ಟಾಸ್ಕ್ ಎಲ್ಲ ಆಯ್ತು, ಇನ್ಮೇಲಿಂದ ಫ್ರೈಡೆ ಸಾಟರ್‍ಡೇ ನಾವೊಂದ್ ಸ್ವಲ್ಪ ಎಂಟರ್‍ಟೈನಿಂಗ್ ಆಗಿರ್ಬೇಕು’ ಅಂತ. ಹಾಗಾಗಿ ಅವನು ಬಹುಶಃ ಕ್ಯಾಮೆರಾಗೋಸ್ಕರ ಚಟುವಟಿಕೆ ಮಾಡ್ತಿದ್ದಾನೆ ಅನ್ಸತ್ತೆ.

Neetu Vanajakshi 2

ನೀತು ಫೈನಲಿಸ್ಟ್‌ ಲೀಸ್ಟ್!

ಪ್ರತಾಪ್‌, ತುಕಾಲಿ ಸಂತೋಷ್, ಸಂಗೀತಾ, ಕಾರ್ತಿಕ್, ತನಿಷಾ ಈ ಐವರು ಈ ಸಲದ ಬಿಗ್‌ಬಾಸ್‌ ಫೈನಲ್‌ನಲ್ಲಿ ಇರ್ತಾರೆ. ಅವರಲ್ಲಿ ಪ್ರತಾಪ್ ವಿನ್ನರ್ ಆಗ್ತಾನೆ.

ಜಿಯೊ ಫನ್‌ ಫ್ರೈಡೆ ಟಾಸ್ಕ್

ಜಿಯೊ ಸಿನಿಮಾ ಫನ್‌ ಫ್ರೈಡೆ ಟಾಸ್ಕ್‌ಗಳನ್ನು ತುಂಬಾನೇ ಎಂಜಾಯ್ ಮಾಡಿದೀನಿ ನಾನು. ಕಥೆ ಹೇಳೋದು ಮಜವಾಗಿತ್ತು. ನನಗೆ ಗುರಿ ಇಡೋದು ಅಂದ್ರೆ ತುಂಬಾನೇ ಇಷ್ಟ. ಹಾಗಾಗಿ ಇರುಳ್ಳಿ ಅಂತ ಹೇಳಿದ ತಕ್ಷಣ ದೂರದಿಂದಲೇ ಗುರಿಇಟ್ಟು ಹಾಕಿಬಿಟ್ಟಿದ್ದೆ. ಆ ಟಾಸ್ಕ್‌ಗಳನ್ನು ಫುಲ್ ಜೋಷ್‌ನಲ್ಲಿ ಖುಷಿಯಿಟ್ಟು ಆಡ್ತಿದ್ದೆ. ಲಗೋರಿ ಆಟವೂ ಮಜವಾಗಿತ್ತು. ಚಿಕ್ಕ ಮಗುವಾಗಿದ್ದಾಗ ನಾನು ಏನೆಲ್ಲ ಎಂಜಾಯ್ ಮಾಡಲು ಸಾಧ್ಯವಾಗಿರಲಿಲ್ಲವೋ ಅವೆಲ್ಲವನ್ನೂ ಬಿಗ್‌ಬಾಸ್ ಮನೆಯ ಫನ್ ಫ್ರೈಡೆ ಟಾಸ್ಕ್‌ನಲ್ಲಿ ಎಂಜಾಯ್ ಮಾಡಿದ್ದೇನೆ.

Neetu 3

ಕಾಫಿ ಮಗ್ ಮಿಸ್ ಮಾಡ್ಕೋತೀನಿ

ಬಿಗ್‌ಬಾಸ್‌ ಮನೆಯಲ್ಲಿ ತುಂಬ ಮಿಸ್ ಮಾಡ್ಕೊಳೋದು ಕಾಫಿ ಮಗ್. ಅದರಲ್ಲಿ ನೀತು ಎಂದು ಬರೆದಿತ್ತು. ಅದು ನನ್ನ ಐಡೆಂಟಿಟಿ. ಮತ್ತು ಮಮ್ಮಿ ನಾನು ಇರುವ ಫೋಟೊ ಇತ್ತು. ಅದನ್ನೂ ಮಿಸ್ ಮಾಡ್ಕೋತೀನಿ. ಎದ್ದ ತಕ್ಷಣವೇ ಮಮ್ಮಿ ಮುಖ ನೋಡ್ತಿದ್ದೆ.

ಬಿಗ್‌ಬಾಸ್‌ ಮನೆಯಲ್ಲಿ ಎಲ್ಲರೊಟ್ಟಿಗೆ ನಾನು ಒಳ್ಳೆಯ ಕನೆಕ್ಷನ್ ಇಟ್ಟುಕೊಂಡಿದ್ದೆ. ಎಲ್ಲರಿಗೂ ಅವರದೇ ಆದ ಒಂದು ಜರ್ನಿ ಅಂತ ಇರತ್ತೆ. ಯಾವ್ದೆ ಕೆಲಸ ಅಂತ ಬಂದಾಗ ಏನಾದ್ರೂ ಕಲಿಬೇಕು, ಏನಾದ್ರು ಮಾಡಬೇಕು ಅಂದಾಗ ಮಾಡುತ್ತಿದ್ದೆ. ಅಡುಗೆ ಮಾಡುವುದರಿಂದ ಎಲ್ಲರ ಜೊತೆಗೆ ಒಂದು ಬಾಂಡಿಂಗ್ ಬೆಳೆದಿತ್ತು.

ಟಾಸ್ಕ್‌ ಅಂತ ಬಂದಾಗ ಇವರು ಸರಿ ಇಲ್ಲ, ಅವ್ರು ಸರಿ ಇಲ್ಲ ಅಂತ ಹೇಳ್ಬೇಕಾಗತ್ತೆ. ಫೇಕ್ ಅಂತ ಹೇಳ್ಬೇಕಾಗತ್ತೆ. ಎಂಡ್‌ ಆಫ್‌ ದಿ ಡೇ ಎಲ್ಲರಿಗೂ ಅವರದ್ದೇ ಆದ ವ್ಯಕ್ತಿತ್ವ ಇದೆ. ಎಲ್ಲರೂ ಸ್ಟ್ರಾಂಗ್ ಆಗಿಯೇ ಇದ್ದಾರೆ.

 

ಪ್ರೀತಿಯನ್ನು ಮನದುಂಬಿಕೊಂಡು ಹೋಗುತ್ತಿರುವೆ

ನನಗೆ ಪ್ರೀತಿ ಬೇಕಾಗಿತ್ತು. ಸಿಂಪತಿ ಬೇಕಾಗಿರ್ಲಿಲ್ಲ. ಸಿಂಪತಿ ಇಲ್ಲದ ಪರಿಪೂರ್ಣ ಪ್ರೀತಿಯನ್ನು ಹುಡುಕಿಕೊಂಡು ನಾನು ಬಿಗ್‌ಬಾಸ್ ಮನೆಗೆ ಹೋಗಿದ್ದೆ. ಅದು ನನಗೆ ಸಿಕ್ಕಿದೆ. ನನಗೆ ಇದೊಂದು ಒಳ್ಳೆಯ ಅವಕಾಶ. ಮನೆಯಲ್ಲಿ ಒಂದೊಂದು ಕ್ಷಣವನ್ನೂ ಎಂಜಾಯ್ ಮಾಡಿದೀನಿ. ಈ ನೆನಪುಗಳನ್ನು ನನ್ನ ಜೀವನವಿಡೀ ಒಂದೊಂದು ಎಪಿಸೋಡ್ ನೋಡ್ತಾ ಎಂಜಾಯ್ ಮಾಡ್ತೀನಿ. ಟ್ರಾನ್ಸ್‌ಜೆಂಡರ್‍ಗಳ ಬದುಕಿನ ಬಗ್ಗೆ ಎಷ್ಟೋ ಜನರಿಗೆ ಗೊತ್ತಿಲ್ಲ. ನಮಗೆ ಏನು ಬೇಕು, ನಾವು ಸಮಾಜದಿಂದ ಏನು ನಿರೀಕ್ಷಿಸುತ್ತಿದ್ದೇವೆ ಎಂಬುದು ಗೊತ್ತಿರಲಿಲ್ಲ. ಕೊನೆಗೂ ನಮಗೆ ಬೇಕಾಗಿರುವುದು ಪ್ರೀತಿ. ನಮಗೆ ಕರುಣೆ ಬೇಡ. ಪ್ರೀತಿ ಕೊಟ್ಟರೆ ಸಾಕು. ಅದು ನನಗೆ ಬಿಗ್‌ಬಾಸ್ ಮನೆ ಕೊಟ್ಟಿದೆ. ಅದನ್ನು ನಾನು ಮನದುಂಬಿ ತೆಗೆದುಕೊಂಡು ಹೋಗುತ್ತಿದ್ದೇನೆ.

TAGGED:Bigg Boss KannadaeliminateinterviewNeetu Vanajakshiಎಲಿಮಿನೇಟ್ನೀತು ವನಜಾಕ್ಷಿಬಿಗ್ ಬಾಸ್ ಕನ್ನಡಸಂದರ್ಶನ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Baby Foot
Bengaluru City

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು – ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ

Public TV
By Public TV
9 minutes ago
apples Goods vehicle overturns belagavi national highway 1
Belgaum

ಗೂಡ್ಸ್ ವಾಹನ ಪಲ್ಟಿ- ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

Public TV
By Public TV
1 hour ago
trump crude oil
Latest

ಟ್ರಂಪ್‌ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಏರಿಕೆ

Public TV
By Public TV
2 hours ago
Chitradurga BAMS Student Suicide
Chitradurga

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
2 hours ago
APSRTC Bus Accident Bengaluru
Bengaluru City

ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

Public TV
By Public TV
2 hours ago
Donald Trump
Latest

ಮಧ್ಯಪ್ರಾಚ್ಯ ದೇಶಗಳ ರಕ್ಷಣೆಗೆ ಯುದ್ಧ ಅನಿವಾರ್ಯ – ಈ ಪರಿಸ್ಥಿತಿಗೆ ಒಬಾಮಾ ನೀತಿಯೇ ಕಾರಣ: ಟ್ರಂಪ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?