ಜೈಪುರ: ದೇಶದಲ್ಲಿ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ 4 ರಾಜ್ಯಗಳ ಚುನಾವಣಾ ಫಲಿತಾಂಶ ಸದ್ಯದಲ್ಲೇ ಹೊರಬೀಳಲಿದೆ. ಸೋಮವಾರ (ಡಿ.4) ಮಿಜೋರಂನ ಫಲಿತಾಂಶವೂ ಹೊರಬೀಳಲಿದೆ.
ರಾಜಸ್ಥಾನದಲ್ಲಿ ಸ್ಪರ್ಧಿಸಿರುವ ತಿಜಾರ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಮಹಂತ್ ಬಾಲಕ್ ನಾಥ್ ಯೋಗಿ (Mahant Balak Nath Yogi) ಅವರು ಗೆಲುವು ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. 12ನೇ ಸುತ್ತಿನ ನಂತರವೂ 4,807 ಮತಗಳ ಮುನ್ನಡೆ ಸಾಧಿಸಿದ್ದಾರೆ. 12ನೇ ಸುತ್ತಿನ ನಂತರ ಒಟ್ಟು 64,579 ಮತಗಳನ್ನು ಗಳಿಸಿದ್ದಾರೆ. ಈ ಬಾರಿ ರಾಜಸ್ಥಾನ (Rajasthan) ಅಧಿಕಾರ ಸ್ಥಾಪಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ರೆ ಬಾಲಕನಾಥ್ ಯೋಗಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಬಾಬಾ ಎಂದೇ ಖ್ಯಾತಿಯಾಗಿರುವ ಸಿಎಂ ಆಗಿರುವ ಯೋಗಿ ಆದಿತ್ಯನಾಥ್ (Yogi Adityanath) ಅವರ ಆಡಳಿತ ಪ್ರಸಿದ್ಧಿಯಾಗಿದೆ. ಈಗ ಯೋಗಿ ಆದಿತ್ಯನಾಥ್ ನಂತರ, ರಾಜಸ್ಥಾನದಲ್ಲಿ ಮತ್ತೊಬ್ಬ ಯೋಗಿಯ ಉದಯವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ವಾರ್ನಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಯೋಗಿ ಬಾಲಕ್ನಾಥ್ ಅವರನ್ನು ಪುನಃ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಸಲಾಗಿತ್ತು. ಕಾಂಗ್ರೆಸ್ನ ಇಮ್ರಾನ್ ಖಾನ್ ಎದುರು ಸ್ಪರ್ಧಿಸಿದ್ದರು. ಇದನ್ನೂ ಓದಿ: ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್ ಟ್ರೆಂಡ್
199 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ರಾಜಸ್ಥಾನದಲ್ಲಿ ಮಧ್ಯಾಹ್ನ 2 ಗಂಟೆ ನಂತರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 72 ಹಾಗೂ ಇತರೇ 14 ಸ್ಥಾನಗಳಲ್ಲಿವೆ.
ಬಾಲಕನಾಥ್ ಯೋಗಿ ಚುನಾವಣಾ ಫಲಿತಾಂಶಕ್ಕೆ ಮುನ್ನಾದಿನವೇ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಆದ್ರೆ ಇದೊಂದು ಸಹಜ ಭೇಟಿ ಎಂದು ಹೇಳಿದ್ದರು. ಫಲಿತಾಂಶದ ದಿನವಾದ ಭಾನುವಾರ (ಡಿ.3) ಸಿಎಂ ರೇಸ್ನಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ತೆಲಂಗಾಣ ಜನರ ಹೃದಯದಲ್ಲಿ ಗಾಂಧಿ ಕುಟುಂಬಕ್ಕೆ ವಿಶೇಷ ಸ್ಥಾನವಿದೆ – ಈ ಬಾರಿ ಸರ್ಕಾರ ನಮ್ಮದೇ ಎಂದ ಕಾಂಗ್ರೆಸ್ ಸಂಸದ
ನನ್ನ ಹೆಸರು ಕೇಳಿಬಂದಿರುವುದು ಸಂತೋಷವಾಗಿದೆ. ಆದ್ರೆ ಸಿಎಂ ಯಾರಾಗಬೇಕು ಅನ್ನೋದರ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ. ನಮ್ಮ ಪ್ರಧಾನಿ ಅವರು ಬಿಜೆಪಿಯ ಐಕಾನ್, ಅವರ ನಾಯಕತ್ವದಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ, ಅದರಲ್ಲೇ ನನಗೆ ತೃಪ್ತಿ ಇದೆ. ಏನೇ ಇದ್ದರೂ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂಬುದಷ್ಟೇ ನನ್ನ ಗುರಿ ಅದನ್ನೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬಾಲಕನಾಥ್ ಯೋಗಿ ತಮ್ಮ 6ನೇ ವಯಸ್ಸಿಗೇ ಕುಟುಂಬದವರ ಒಪ್ಪಿಗೆಯ ಮೇರೆಗೆ ಸನ್ಯಾಸತ್ವ ಸ್ವೀಕರಿಸಿದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ, ಲೋಕ ಸಮರಕ್ಕೆ ಮುನ್ನುಡಿ: ವಿಜಯೇಂದ್ರ