Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

Latest

ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

Public TV
Last updated: December 5, 2023 6:36 pm
Public TV
Share
3 Min Read
madhya pradesh cm candidates
SHARE

– ಸಿಎಂ ರೇಸ್‌ನಲ್ಲಿ ನಾಲ್ವರ ಪೈಪೋಟಿ

ಭೋಪಾಲ್: 2003 ರಿಂದ ಮಧ್ಯಪ್ರದೇಶದಲ್ಲಿ ಆಡಳಿತ (2018 ರ ನಂತರ 15 ತಿಂಗಳ ಅವಧಿ ಹೊರತುಪಡಿಸಿ) ನಡೆಸಿಕೊಂಡು ಬಂದಿರುವ ಬಿಜೆಪಿ 2023 ರ ಚುನಾವಣೆಯಲ್ಲೂ ಭರ್ಜರಿ ಗೆಲುವು ದಾಖಲಿಸಿದೆ. ಅಮೋಘ ಜಯ ಸಾಧಿಸಿರುವ ಮಧ್ಯಪ್ರದೇಶದಲ್ಲಿ ಈಗ ಸಿಎಂ ಯಾರಾಗುತ್ತಾರೆ ಎಂಬುದೇ ಪ್ರಶ್ನೆ.

ಮಧ್ಯಪ್ರದೇಶದಲ್ಲಿ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಇದ್ದರೂ, ಇವರನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿರಲಿಲ್ಲ. ಇಲ್ಲಿ ಕೇಂದ್ರ ಸಚಿವರು, ಸಂಸದರನ್ನೂ ಕಣಕ್ಕಿಳಿಸಲಾಗಿತ್ತು. ಬಿಜೆಪಿ ತಂತ್ರ, ಸಾಮೂಹಿಕ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಫಲ ನೀಡಿತು. ರಾಜ್ಯದ 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗಳಿಸಿದ್ದು, ಕಾಂಗ್ರೆಸ್ ಕೇವಲ 66ಕ್ಕೆ ಕುಸಿದಿದೆ.

Shivraj Singh Chouhan

ಬಿಜೆಪಿ ವಲಯದಲ್ಲಿ ದಾಖಲೆ ಬರೆಯುತ್ತಾರಾ ಚೌಹಾಣ್‌
ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸದರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ಚೌಹಾಣ್ ಅವರನ್ನು ಸೈಡ್‌ಲೈನ್‌ ಮಾಡಲಾಗಿದೆ ಎಂದು ಹೇಳಲಾಗಿತ್ತು. ಅಲ್ಲದೇ ಚೌಹಾಣ್‌ಗೆ ಟಿಕೆಟ್‌ ಕೊಟ್ಟಿದ್ದೂ ತಡವಾಗಿಯೇ. ಮೊದಲ ಪಟ್ಟಿಯಲ್ಲಿ ಇವರ ಹೆಸರೇ ಇರಲಿಲ್ಲ. ಆದರೆ ಬಿಜೆಪಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆಯನ್ನು ಚೌಹಾಣ್‌ ಹೊಂದಿದ್ದಾರೆ. ಈ ಕಾರಣದಿಂದಲೂ ಅವರನ್ನು ಮೂಲೆಗುಂಪು ಮಾಡುವ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮುಖ್ಯಸ್ಥನ ಸ್ಥಾನಕ್ಕೆ ಕಮಲ್‍ನಾಥ್ ರಾಜೀನಾಮೆ?

ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ (ಇಬ್ಬರೂ ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಇರುವ ಇತರೆ ಹಿಂದುಳಿದ ವರ್ಗಗಳ ನಾಯಕರು), ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೆಸರು ಸಿಎಂ ರೇಸ್‌ನಲ್ಲಿ ಕೇಳಿಬರುತ್ತಿದೆ.

Jyotiraditya Scindia A

ಸಿಎಂ ರೇಸ್‌ನಲ್ಲಿರುವವರ ಪೈಕಿ ಇಬ್ಬರು ಬ್ರಾಹ್ಮಣ ನಾಯಕರು ಸೇರಿದ್ದಾರೆ. ಮಧ್ಯಪ್ರದೇಶ ರಾಜ್ಯಾಧ್ಯಕ್ಷರೂ ಆದ ಸಂಸದ ವಿ.ಡಿ. ಶರ್ಮಾ ಹಾಗೂ ಐದನೇ ಬಾರಿಗೆ ಶಾಸಕ ಮತ್ತು ಸಚಿವರೂ ಆದ ರಾಜೇಂದ್ರ ಶುಕ್ಲಾ ಇಬ್ಬರೂ ವಿಂಧ್ಯಾ ಪ್ರದೇಶದಿಂದ ಬಂದವರು.

ಅಮಿತ್‌ ಶಾ ನಿಕಟವರ್ತಿಗೆ ಪಟ್ಟ?
ವಿಜಯವರ್ಗಿಯಾ ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು. ಆ ಭಾಗದಲ್ಲಿ ಬಿಜೆಪಿ 66 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗೆದ್ದಿದೆ. ಇವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ನಿಕಟವರ್ತಿ. ಆದರೆ ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಇವರ ವಿರುದ್ಧವೂ ಆರೋಪ ಕೇಳಿಬಂದಿದೆ. ಇದು ಮುಖ್ಯಮಂತ್ರಿ ಆಗುವ ಇವರ ಕನಸಿಗೆ ಅಡ್ಡಗಾಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

ಮಧ್ಯಪ್ರದೇಶದಲ್ಲಿ ಪಕ್ಷದ ಗೆಲುವಿನಲ್ಲಿ ಚೌಹಾಣ್ ಅವರ ಲಾಡ್ಲಿ ಬೆಹ್ನಾ ಯೋಜನೆ ಪಾತ್ರ ವಹಿಸಿತ್ತು ಎಂದು ಹೇಳಲಾಗಿದೆ. ಆದರೆ ರಾಜ್ಯ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯ ಗೆಲುವಿನ ಹಿಂದಿನ ಏಕೈಕ ಅಂಶವೆಂದರೆ ‘ಮೋದಿ ಮ್ಯಾಜಿಕ್’ ಎಂದು ವಿಜಯವರ್ಗಿಯಾ ಅವರು ಅಭಿಪ್ರಾಯಪಟ್ಟಿದ್ದಾರೆ.

Kailash Vijayvargiya

ಸಿಎಂ ಕಿರೀಟ ಧರಿಸ್ತಾರಾ ಸಿಂಧಿಯಾ?
ಬಿಜೆಪಿಯ ಗೆಲುವಿನಲ್ಲಿ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾತ್ರವೂ ಮಹತ್ವದ್ದು ಎನ್ನಲಾಗಿದೆ. ಗ್ವಾಲಿಯರ್‌ ರಾಜಮನೆತನದಲ್ಲಿ ಜನಿಸಿದ ಸಿಂಧಿಯಾ ಅವರು, ರಾಜ್ಯದ ವರ್ಚಸ್ವಿ ಹಾಗೂ ಪ್ರಭಾವಿ ನಾಯಕನೂ ಹೌದು. 2002 ರಲ್ಲಿ ಗುನಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು, ಮೊದಲ ಬಾರಿಗೆ ಕಾಂಗ್ರೆಸ್‌ ಸಂಸದರಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದರೂ, ಸಿಎಂ ಕಮಲ್‌ನಾಥ್‌ ವಿರುದ್ಧದ ಮುನಿಸು ಮತ್ತು ಸಿಎಂ ಸ್ಥಾನ ಸಿಗಲಿಲ್ಲವೆಂಬ ಸಿಟ್ಟಿನಿಂದ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿಕೊಂಡರು.

ಈ ಬಾರಿ ಬಿಜೆಪಿಯ ಗೆಲುವಿನಲ್ಲಿ ಸಿಂಧಿಯಾ ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ವಾಲಿಯರ್‌-ಚಂಬಲ್‌ ವಲಯದಲ್ಲಿ ಬಿಜೆಪಿ ಅಮೋಘ ಬೆಂಬಲ ಸಿಗುವಂತೆ ಮಾಡಿದ್ದಾರೆ. ಈ ಭಾಗದಲ್ಲಿ 2018 ರಲ್ಲಿ ಬಿಜೆಪಿ 7 ಸ್ಥಾನ ಗೆದ್ದಿತ್ತು. ಈಗ ಆ ಸಂಖ್ಯೆ 18 ಸ್ಥಾನಗಳಿಗೆ ಏರಿದೆ. 2018 ರಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆಯೂ ಸಿಂಧಿಯಾ ಪ್ರಾಬಲ್ಯವಿರುವ ಪ್ರದೇಶಗಳೇ ಕಾರಣವಾಗಿದ್ದವು. ಆದರೆ ಈ ಬಾರಿ ಈ ಮತಗಳು ಬಿಜೆಪಿಯತ್ತ ಕ್ರೋಢೀಕರಣಗೊಂಡವು. ಬಿಜೆಪಿಯ ಗೆಲುವು ಸಿಂಧಿಯಾರನ್ನು ಮತ್ತಷ್ಟು ಬಲಶಾಲಿಯಾಗಿಸಿದ್ದು, ‘ಮಹಾರಾಜ’ನ ಕಣ್ಣು ಈಗ ಸಿಎಂ ಕುರ್ಚಿಯತ್ತ ನೆಟ್ಟಿದೆ.

Narendra Singh Tomar

ಆದರೆ ಮಾಜಿ ಕಾಂಗ್ರೆಸ್‌ ನಾಯಕ ಬಿಜೆಪಿ ಸೇರಿ ಕೇವಲ ಮೂರೂವರೆ ವರ್ಷವಷ್ಟೇ ಆಗಿದೆ. ಅವರನ್ನು ಮುಖ್ಯಮಂತ್ರಿ ಮಾಡುವುದರಿಂದ ಪಕ್ಷದ ಹಿರಿಯರ ಅಸಮಾಧಾನಕ್ಕೆ ಕಾರಣವಾಗಬಹುದು. ಇದು ಮುಂಬರುವ ಲೋಕಸಭಾ ಚುನಾವಣಾ ಮೇಲೆ ಪರಿಣಾಮ ಬೀರಬಹುದು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

ರೇಸ್‌ನಲ್ಲಿ ಕೇಂದ್ರ ಸಚಿವ
ಕೇಂದ್ರ ಕೃಷಿ ಸಚಿವ ಮತ್ತು ಪಕ್ಷದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಮುಖ್ಯಸ್ಥರಾಗಿರುವ ನರೇಂದ್ರ ಸಿಂಗ್ ತೋಮರ್ ಕೂಡ ಸಿಎಂ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಕೋಟ್ಯಂತರ ರೂ. ನಗದು ಡೀಲ್‌ ವೀಡಿಯೋ ಮೂಲಕ ಅವರ ಪುತ್ರ ದೇವೇಂದ್ರ ಸಿಂಗ್ ತೋಮರ್ ವಿವಾದಕ್ಕೆ ಸಿಲುಕಿದ್ದಾರೆ. ಇದು ತೋಮರ್‌ ಅವರಿಗೆ ಸಂಕಷ್ಟ ತಂದೊಡ್ಡಿದೆ.

TAGGED:Jyotiraditya ScindiaMadhya PradeshShivraj Singh Chouhanಜ್ಯೋತಿರಾದಿತ್ಯ ಸಿಂಧಿಯಾಬಿಜೆಪಿಮಧ್ಯಪ್ರದೇಶಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
25 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
33 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
34 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
57 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
1 hour ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?