ಆಕಾಂಕ್ಷಿಯೂ ಅಲ್ಲದೆ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಸಿಎಂ ಆಗಿದ್ದು ಹೇಗೆ?

Public TV
1 Min Read
Bhajan Lal Sharma

– ಕರಸೇವೆಯಲ್ಲಿ ಭಾಗಿಯಾಗಿದ್ದ ರಾಜಸ್ಥಾನದ ನೂತನ ಮುಖ್ಯಮಂತ್ರಿ

ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶದ ರೀತಿಯಲ್ಲೇ ರಾಜಸ್ಥಾನದಲ್ಲೂ (Rajasthan) ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಸಿಎಂ ಆಯ್ಕೆಗೂ ಮುನ್ನ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಶರ್ಮಾ (Bhajan Lal Sharma) ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿರುವುದೇ ಅಚ್ಚರಿಯಾಗಿದೆ.

ಭಜನ್ ಲಾಲ್ ಶರ್ಮಾ 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಆರ್‌ಎಸ್‌ಎಸ್ ಕಾರ್ಯಕರ್ತರೂ ಆಗಿದ್ದರು. ಶರ್ಮಾ ಕರಸೇವೆಯಲ್ಲಿ ಭಾಗಿಯಾಗುವ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ್ದರು. ಕರಸೇವೆಯಲ್ಲಿ ಭಾಗಿಯಾಗಿದ್ದಕ್ಕೆ ಅವರು ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು.

Bhajan Lal Sharma 1

ಇದಕ್ಕೂ ಮೊದಲು ಗ್ರಾಮ ಸರಪಂಚರಾಗಿದ್ದ ಇವರು ಬಳಿಕ ಹಂತಹಂತವಾಗಿ ಬಿಜೆಪಿಯಲ್ಲಿ (BJP) ವಿವಿಧ ಸ್ಥಾನಗಳಿಗೆ ಆಯ್ಕೆಯಾದರು. ಬಳಿಕ 2023ರಲ್ಲಿ ಜೈಪುರದ ಸಂಗನೇರ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

ಚುನಾವಣೆ ಬಳಿಕ ಸಿಎಂ ಆಯ್ಕೆಗೂ ಮುನ್ನ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಎಲ್ಲಾ 115 ಶಾಸಕರ ಫೋಟೋ ಸೆಷನ್ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸ್ಥಾನ ಆಕಾಂಕ್ಷಿಗಳೆಲ್ಲರೂ ಮೊದಲ ಸಾಲಿನಲ್ಲಿ ಕುಳಿತಿದ್ದರೆ, ಭಜನ್ ಲಾಲ್ ಶರ್ಮಾ ಮಾತ್ರ ಹಿಂದಿನ ಸಾಲಿನಲ್ಲಿ ನಿಂತಿದ್ದರು. ಆದರೆ ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲವೂ ಉಲ್ಟಾ ಆಯ್ತು. ಹಿಂದಿನ ಸಾಲಿನಲ್ಲಿದ್ದ ಶರ್ಮಾ ಮುಂದಿನ ಸಾಲಿಗೆ ಆಗಮಿಸಿ ಅಚ್ಚರಿ ಮೂಡಿಸಿದರು.

ಭಜನ್ ಲಾಲ್ ಶರ್ಮಾ ಮೂಲತಃ ರಾಜಸ್ಥಾನದ ಭರತ್‌ಪುರದವರು. ಎಬಿವಿಪಿ ಮೂಲದವರಾಗಿದ್ದರಿಂದ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡು ಹಲವು ವರ್ಷಗಳಿಂದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ ಶರ್ಮಾ ಭರತ್‌ಪುರದಿಂದಲೇ ಸ್ಪರ್ಧಿಸುವ ಇಚ್ಛೆಯಿಂದ ಟಿಕೆಟ್ ಕೇಳಿದ್ದರು. ಆದರೆ ಪಕ್ಷದ ವರಿಷ್ಠರು ಭರತ್‌ಪುರದಲ್ಲಿ ಬ್ರಾಹ್ಮಣರ ಸಂಖ್ಯೆ ಕಡಿಮೆಯಿದೆ. ಅಲ್ಲಿ ನೀವು ಗೆಲ್ಲುವ ಸಾಧ್ಯತೆ ಇಲ್ಲ ಎಂದು ಸಾಂಗಾನೇರ್ ಕ್ಷೇತ್ರದಿಂದ ಟಿಕೆಟ್ ಕೊಡಿಸಿದ್ದರು. ಇದನ್ನೂ ಓದಿ: ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ

Share This Article