Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನನ್ನ ಮಗ ಕ್ರಾಂತಿಕಾರಿ ಪುಸ್ತಕಗಳಿಂದ ಪ್ರಭಾವಿತನಾಗಿದ್ದ, ಸಮಾಜ ಸೇವೆ ಮಾಡುವ ಹಂಬಲವಿತ್ತು – ಮನೋರಂಜನ್‌ ತಂದೆ ಬೇಸರ

Public TV
Last updated: December 14, 2023 4:34 pm
Public TV
Share
2 Min Read
Manoranjan
SHARE

– ಮನೋರಂಜನ್‌ ಮನೆಯಲ್ಲಿ ಕ್ರಾಂತಿಕಾರಿಗಳ ಸಾವಿರಾರು ಪುಸ್ತಕಗಳು ಪತ್ತೆ
– ಬಿಡುವಿನ ವೇಳೆ ಮಕ್ಕಳಿಗೆ ಕರಾಟೆ ಹೇಳಿಕೊಡ್ತಿದ್ದ ಆರೋಪಿ

ನವದೆಹಲಿ/ಮೈಸೂರು: ಸಂಸತ್ತಿಗೆ (Lok Sabha) ನುಗ್ಗಿದ ಆರೋಪಿ ಮನೋರಂಜನ್‌ ವಾಸವಿದ್ದ ಮೈಸೂರಿನ ವಿಜಯನಗರ (Mysuru Vijayanagara) ನಿವಾಸಕ್ಕೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳೊಂದಿಗೆ ನಗರದ ಹಿರಿಯ ಪೊಲೀಸ್‌ (Mysuru Police) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೋಷಕರೊಂದಿಗೂ ಮಾತನಾಡಿ ಕೆಲ ಮಾಹಿತಿ ಕಲೆಹಾಕಿದ್ದಾರೆ.

ಆರೋಪಿ ಮನೋರಂಜನ್‌ (Manoranjan) ಕ್ರಾಂತಿಕಾರಿ ನಾಯಕರ ಜೀವನ ಚರಿತ್ರೆಗಳಿಂದ ಪ್ರಭಾವಿತನಾಗಿದ್ದ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿ, ಬಳಿಕ ಬೆಂಗಳೂರಿನ ಕಾಲೇಜೊಂದರಲ್ಲಿ BA ಪದವಿ ಪಡೆದಿದ್ದ.

Parliament Smoke Bomb

ಎಂಜಿನಿಯರಿಂಗ್‌ ಮುಗಿಸಿ 9 ವರ್ಷ ಕಳೆದರೂ ಯಾವುದೇ ಉದ್ಯೋಗಕ್ಕೆ ಪ್ರಯತ್ನಿಸದೇ ದೇಶದ ವಿವಿಧೆಡೆಗಳಲ್ಲಿ ಸುತ್ತಾಡುತ್ತಿದ್ದ ಮನೋರಂಜನ್‌ ಕರಾಟೆಪಟುವಾಗಿದ್ದು, ಬಿಡುವಿನ ವೇಳೆಯಲ್ಲಿ ಮಕ್ಕಳಿಗೆ ಕರಾಟೆ ಹೇಳಿಕೊಡುತ್ತಿದ್ದ. ಪೋಷಕರಿಗೂ ಮಗ ಏನು ಮಾಡುತ್ತಿದ್ದಾನೆ ಅನ್ನುವ ಮಾಹಿತಿ ಇರಲಿಲ್ಲ. ಪೋಷಕರು ಉದ್ಯೋಗ ಮಾಡುವಂತೆ ಒತ್ತಾಯಿಸುತ್ತಿದ್ದರು. ಕೊನೇ ಪಕ್ಷ ಊರಿನಲ್ಲಿರುವ ಜಮೀನು ನೋಡಿಕೊಳ್ಳುವಂತೆ ಹೇಳಿದ್ದರು. ಅದ್ಯಾವುದು ಪ್ರಯೋಜನವಾಗದಿದ್ದಾಗ ಮಗನ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದರು. ಈಗ ಮಗನ ಕೃತ್ಯದಿಂದ ಆಘಾತಕ್ಕೆ ಒಳಗಾಗಿದ್ದು, ತಪ್ಪು ಮಾಡಿದ್ದಲ್ಲಿ ತಕ್ಕ ಶಿಕ್ಷೆಯಾಗಲಿ ಎಂದು ಮನೋರಂಜನ್‌ ತಂದೆ ದೇವರಾಜೇಗೌಡ ಹೇಳಿದ್ದಾರೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

ಮನೋರಂಜನ್‌ ಸ್ವಾಮಿ ವಿವೇಕಾನಂದ ಅವರ ಪುಸ್ತಕ ಸೇರಿದಂತೆ ಮಹಾನ್‌ ಕ್ರಾಂತಿಕಾರಿ ನಾಯಕರ (Revolutionary Leaders) ವಿಚಾರಧಾರೆಗಳಿಂದ ಪ್ರಭಾವಿತನಾಗಿದ್ದಾನೆ. ಪುಸ್ತಕಗಳಿಗೆ ಸಾವಿರಾರು ರೂ. ಖರ್ಚು ಮಾಡುತ್ತಿದ್ದ. 40 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಮನೆಯಲ್ಲಿವೆ. ನನ್ನ ಮಗನಿಗೆ ಸಮಾಜ ಸೇವೆ ಮಾಡಬೇಕೆಂಬ ಹಂಬಲವಿತ್ತು. ಒಂದು ವೇಳೆ ಅವನು ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ ಎಂದಿದ್ದಾರೆ ದೇವರಾಜೇಗೌಡ. ಇದನ್ನೂ ಓದಿ: ನಿರುದ್ಯೋಗದಿಂದ ಬೇಸತ್ತು ಸಾಯೋದೇ ಲೇಸು ಅನ್ನುತ್ತಿದ್ದಳು- ಸಂಸತ್ತಿನ ಹೊರಗಡೆ ಬಂಧಿಸಲ್ಪಟ್ಟವಳ ತಾಯಿ ಮಾತು

ಮನೋರಂಜನ್‌, ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದ ದೇವರಾಜೇಗೌಡ ಮತ್ತು ಶೈಲಜಾ ದಂಪತಿಯ ಪುತ್ರ. ಈತನಿಗೆ ಸಹೋದರಿಯೂ ಇದ್ದಾರೆ. ದೇವರಾಜೇಗೌಡ ಕೃಷಿಕರಾಗಿದ್ದು, ಮಲ್ಲಾಪುರದಲ್ಲಿ 20 ಎಕರೆ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ನಗರಕ್ಕೆ ಬಂದು ನೆಲೆಸಿದ್ದರು. ವಿಜಯನಗರದ 2ನೇ ಹಂತದಲ್ಲಿ ಸ್ವಂತ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆಗಾಗ್ಗೆ ಊರಿಗೆ ಹೋಗಿ ವ್ಯವಸಾಯ ನೋಡಿಕೊಳ್ಳುತ್ತಿದ್ದಾರೆ ಎಂದು ವಿಚಾರಣೆ ಬಳಿಕ ಅಧಿಕಾರಿಗಳಿಂದ ತಿಳಿದುಬಂದಿದೆ.

ಕ್ರಾಂತಿಕಾರಿ ನಾಯಕರ ಪುಸ್ತಕಗಳು ಪತ್ತೆ: ಮನೋರಂಜನ್‌ ಕೊಠಡಿಯನ್ನು ಪರಿಶೀಲಿಸಿದಾಗ ಕ್ರಾಂತಿಕಾರಿ ನಾಯಕರ ಜೀವನ ಚರಿತ್ರೆ, ಹೋರಾಟಗಳ ಪುಸ್ತಕಗಳು ಪತ್ತೆಯಾಗಿವೆ. ಈ ಬಗ್ಗೆ ನೆರೆಯ ನಿವಾಸಿಗಳು ಮತ್ತು ಮನೋರಂಜನ್‌ ಸ್ನೇಹಿತರನ್ನೂ ಅಧಿಕಾರಿಗಳು ಮಾತನಾಡಿಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.

ಇಲ್ಲಿನ ಉಪಪೊಲೀಸ್‌ ಆಯುಕ್ತ ಗಜೇಂದ್ರ ಪ್ರಸಾದ್‌ ಅವರೂ ಸಹ ಮನೋರಂಜನ್‌ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ವಿಜಯನಗರ ಠಾಣೆ ಪೊಲೀಸರೊಂದಿಗೆ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ ಜನ್ಮಭೂಮಿ ವಿವಾದ – ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಹೈಕೋರ್ಟ್‌ ಅನುಮತಿ

TAGGED:lok sabhaManoranjanmysuruNew Delhisecurity breachsmoke bombನವದೆಹಲಿಮನೋರಂಜನ್ಮೈಸೂರುಸಂಸತ್‌ ಭದ್ರತಾ ಲೋಪ
Share This Article
Facebook Whatsapp Whatsapp Telegram

Cinema Updates

Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
51 minutes ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
5 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
15 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
17 hours ago

You Might Also Like

Narendra Modi Stadium 2
Cricket

IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

Public TV
By Public TV
12 minutes ago
Chamarajanagar Mariyala School
Chamarajanagar

Chamarajanagar | ಶಿಕ್ಷಕರ ಒಳಜಗಳ ಆರೋಪ – ಮರಿಯಾಲ ಸರ್ಕಾರಿ ಶಾಲೆಯಲ್ಲಿ ಝೀರೋ ಅಡ್ಮಿಷನ್

Public TV
By Public TV
42 minutes ago
Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
1 hour ago
Narendra Modi
Latest

ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
By Public TV
1 hour ago
CRIME
Crime

ಅನೈತಿಕ ಸಂಬಂಧದಲ್ಲಿ ಮನಸ್ತಾಪ – ನಿವೃತ್ತ ಇನ್ಸ್‌ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟುಹಾಕಿದ ಮಹಿಳೆ

Public TV
By Public TV
1 hour ago
anil kumble
Bengaluru City

ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?