Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ – ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ

Public TV
Last updated: December 22, 2023 7:25 pm
Public TV
Share
2 Min Read
KEA
SHARE

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25 ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಮುಂಬರುವ ಏಪ್ರಿಲ್‌ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10 ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ ಗಣಿತ, 21ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬಿಇಗೆ ನೇರ ಪ್ರವೇಶ: ಏ.18ರಂದು ಸಿಇಟಿ
ಎಂಜಿನಿಯರಿಂಗ್‌ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಶುಲ್ಕ ವಾಪಸ್ ಸರಿಯಾದ ಬ್ಯಾಂಕ್‌ ವಿವರಕ್ಕೆ ಮನವಿ
2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಆದರೆ ಕೆಲವರ ಅರ್ಜಿಗಳಲ್ಲಿ ಬ್ಯಾಂಕ್‌ ವಿವರಗಳು ತಪ್ಪಾಗಿದ್ದು, ಅಂಥವರ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇಂಥವರು ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು.

TAGGED:CET ExamKEAಕೆಇಎಸಿಇಟಿ
Share This Article
Facebook Whatsapp Whatsapp Telegram

You Might Also Like

Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
2 minutes ago
Team India
Cricket

ಗಿಲ್‌ ಅಮೋಘ ಶತಕ, ಪಂತ್‌, ಜಡ್ಡು ಫಿಫ್ಟಿ – ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್‌ ಗುರಿ ನೀಡಿದ ʻಯುವ ಭಾರತʼ

Public TV
By Public TV
6 minutes ago
kea
Bengaluru City

ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

Public TV
By Public TV
11 minutes ago
allu aravind
Cinema

101.4 ಕೋಟಿ ಸಾಲ ಪಡೆದು ವಂಚನೆ ಕೇಸ್‌ – ಅಲ್ಲು ಅರ್ಜುನ್‌ ತಂದೆಗೆ 3 ಗಂಟೆ ಇಡಿ ಡ್ರಿಲ್‌

Public TV
By Public TV
31 minutes ago
Shubman Gill
Cricket

ಗಿಲ್‌ ಗಿಲ್‌ ಗಿಲಕ್‌ – ಮತ್ತೊಂದು ʻಶುಭʼ ಶತಕ, ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ನಾಯಕ

Public TV
By Public TV
1 hour ago
COVID Vaccines
Bengaluru City

ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?