Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕನಾದ ಬೆನ್ನಲ್ಲೇ ಮುಂಬೈಗೆ ಶಾಕ್‌ ಕೊಟ್ಟ ಪಾಂಡ್ಯ – ಮತ್ತೆ ಕ್ಯಾಪ್ಟನ್‌ ಆಗ್ತಾರಾ ಹಿಟ್‌ಮ್ಯಾನ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನಾಯಕನಾದ ಬೆನ್ನಲ್ಲೇ ಮುಂಬೈಗೆ ಶಾಕ್‌ ಕೊಟ್ಟ ಪಾಂಡ್ಯ – ಮತ್ತೆ ಕ್ಯಾಪ್ಟನ್‌ ಆಗ್ತಾರಾ ಹಿಟ್‌ಮ್ಯಾನ್‌?

Cricket

ನಾಯಕನಾದ ಬೆನ್ನಲ್ಲೇ ಮುಂಬೈಗೆ ಶಾಕ್‌ ಕೊಟ್ಟ ಪಾಂಡ್ಯ – ಮತ್ತೆ ಕ್ಯಾಪ್ಟನ್‌ ಆಗ್ತಾರಾ ಹಿಟ್‌ಮ್ಯಾನ್‌?

Public TV
Last updated: December 24, 2023 12:43 pm
Public TV
Share
2 Min Read
Hardik Pandya
SHARE

– ಅಫ್ಘಾನಿಸ್ತಾನ ವಿರುದ್ಧದ ಟಿ20ಗೂ ಹಾರ್ದಿಕ್‌ ಪಾಂಡ್ಯ ಅಲಭ್ಯ

ಮುಂಬೈ: ಪಾದದ ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ (Hardik Pandya) ಅವರು ಮುಂಬರುವ ಅಫ್ಘಾನಿಸ್ತಾನ (Afghanistan) ವಿರುದ್ಧದ ಟಿ20 ಸರಣಿ ಹಾಗೂ 2024ರ ಐಪಿಎಲ್‌ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್‌ ಟೈಟಾನ್ಸ್‌ನಿಂದ (Gujarat Taitans) ಟ್ರೇಡ್‌ ವಿಂಡೋ (ಆಟಗಾರರ ಬದಲಾವಣೆ ಮಾಡಿಕೊಳ್ಳುವ ನಿಯಮ) ಮೂಲಕ ಮುಂಬೈ ಇಂಡಿಯನ್ಸ್‌ಗೆ (Mumbai Indians) ಮರಳಿ ನಾಯಕತ್ವ ಪಡೆದುಕೊಂಡಿದ್ದ ಹಾರ್ದಿಕ್‌ ಪಾಂಡ್ಯ ಅವರು ಮತ್ತೆ ಗಾಯದ ಸಮಸ್ಯೆಗೆ ತುತ್ತಾಗಿರುವುದು ಫ್ರಾಂಚೈಸಿಗೆ ತಲೆನೋವು ಉಂಟುಮಾಡಿದೆ. ಇದನ್ನೂ ಓದಿ: ಕುಸ್ತಿ ಬಿಟ್ಟರೂ ಚಿಂತೆ ಶುರುವಾಗಿದೆ, ಕಿರಿಯರಿಗೆ ಏನು ಹೇಳ್ಬೇಕು ತಿಳಿಯುತ್ತಿಲ್ಲ: ಸಾಕ್ಷಿ ಮಲಿಕ್‌ ಭಾವುಕ

Rohit Sharma 7

2023ರ ಏಕದಿನ ವಿಶ್ವಕಪ್ (World Cup) ಟೂರ್ನಿ ವೇಳೆ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್‌ ವೇಳೆ ಹಾರ್ದಿಕ್‌ ಪಾಂಡ್ಯ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಕ್ರೀಸ್‌ನಲ್ಲಿದ್ದ ಲಿಟ್ಟನ್‌ ದಾಸ್‌ ಹಾರ್ದಿಕ್‌ ಅವರ ಎಸೆತವನ್ನು ಸ್ಟ್ರೈಟ್‌ಡ್ರೈವ್‌ ಮಾಡಿದಾಗ, ಚೆಂಡನ್ನು ತಡೆಯುವ ಪ್ರಯತ್ನದಲ್ಲಿ ಪಾಂಡ್ಯ ಕಾಲು ಉಳುಕಿಸಿಕೊಂಡಿದ್ದರು. ನಂತರ ಪೆವಿಲಿಯನ್‌ಗೆ ಹಿಂದಿರುಗಿದರೂ ಮೈದಾನಕ್ಕೆ ಮರಳಲಿಲ್ಲ. ಅಂತಿಮವಾಗಿ ಅವರು ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದಿದ್ದರು.

Mumbai Indians 5

ಅಲ್ಲದೆ, ಏಕದಿನ ವಿಶ್ವಕಪ್ ಬಳಿಕ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಗೂ ಅಲಭ್ಯರಾದರು. ಇದೀಗ ಗಾಯದ ಸಮಸ್ಯೆ ಮತ್ತೆ ಗಂಭೀರವಾಗುತ್ತಿದ್ದು, 2024ರ ಜನವರಿಯಲ್ಲಿ ನಿಗದಿಯಾಗಿರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೇಶವ್ ಮಹಾರಾಜ್ ಎಂಟ್ರಿಗೆ `ರಾಮ್ ಸಿಯಾ ರಾಮ್’ ಹಾಡು – ಕ್ರಿಕೆಟ್ ಅಂಗಳದಲ್ಲಿ ಮತ್ತೆ ಶ್ರೀರಾಮನ ಸದ್ದು

Mumbai Indians 1

ಮತ್ತೊಂದೆಡೆ ಮಾರ್ಚ್‌ ಅಂತ್ಯದಲ್ಲಿ ಆರಂಭವಾಗುವ 2024ರ ಐಪಿಎಲ್‌ ಟೂರ್ನಿಯ ಒಳಗಾಗಿ ಅವರು ಸಂಪೂರ್ಣ ಗುಣಮುಖರಾಗುವುದು ಅನುಮಾನ ಎಂಬ ವಿಷಯಗಳು ಕೇಳಿಬರುತ್ತಿದೆ. ಇದರಿಂದ ಪಾಂಡ್ಯ ಐಪಿಎಲ್‌ನಿಂದಲೇ ಹೊರಗುಳಿಯಬಹುದು, ರೋಹಿತ್‌ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್‌ ನಾಯಕತ್ವ ವಹಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

ಹಾರ್ದಿಕ್‌ ಅಲಭ್ಯರಾದ್ರೆ ನಾಯಕ ಯಾರು?
10 ವರ್ಷಗಳ ಕಾಲ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿ 5 ಪ್ರಶಸ್ತಿಗಳನ್ನು ಗೆದ್ದು ಕೊಟ್ಟಿದ್ದ ರೋಹಿತ್ ಶರ್ಮಾ ಅವರನ್ನು ಬಿಟ್ಟು ಹಾರ್ದಿಕ್ ಪಾಂಡ್ಯಗೆ ಮಿನಿ ಹರಾಜಿಗೂ ಮುನ್ನ ನಾಯಕತ್ವ ಹಸ್ತಾಂತರಿಸಲಾಗಿತ್ತು. ಈ ನಿರ್ಧಾರಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದರೂ ಮುಂಬೈ ಇಂಡಿಯನ್ಸ್ ತಮ್ಮ ನಿರ್ಧಾರ ಸಮರ್ಥಿಸಿಕೊಂಡಿತ್ತು. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು. ಇದರಿಂದ ತೀವ್ರ ಬೇಸರಕ್ಕೆ ಒಳಗಾಗಿದ್ದ ರೋಹಿತ್ ಶರ್ಮಾ ಫ್ಯಾನ್ಸ್‌ ಮುಂಬೈ ಇಂಡಿಯನ್ಸ್‌ನ ಸೋಶಿಯಲ್‌ ಮೀಡಿಯಾ ಖಾತೆಗಳನ್ನು ಅನ್‌ಫಾಲೋ ಮಾಡಿದ್ದರು. ಒಂದು ವೇಳೆ ಹಾರ್ದಿಕ್ ಪಾಂಡ್ಯ ಐಪಿಎಲ್‌ಗೆ ಅಲಭ್ಯರಾದರೆ, ಮುಂಬೈ ಇಂಡಿಯನ್ಸ್‌ ತಂಡವನ್ನು ಯಾರು ಮುನ್ನಡೆಸಲಿದ್ದಾರೆಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಈ ವೇಳೆ ರೋಹಿತ್ ಶರ್ಮಾ ಅವರನ್ನೇ ನಾಯಕತ್ವದಲ್ಲಿ ಮುಂದುವರಿಯುವಂತೆ ಮುಂಬೈ ಟೀಮ್ ಮ್ಯಾನೇಜ್‌ಮೆಂಟ್‌ ಒತ್ತಾಯಿಸಬಹುದು ಎಂದು ಹೇಳಲಾಗಿದೆ.

TAGGED:Hardik PandyaIPL 2024Mumbai IndiansRohit Sharmat20 cricketಐಪಿಎಲ್‌ 2024ಟಿ20 ಕ್ರಿಕೆಟ್ಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
2 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
9 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
1 hour ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
1 hour ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?