Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್ ಬಂದವರಿಗೆ 7 ದಿನ ಕಡ್ಡಾಯ ರಜೆ, ಹೋಮ್ ಐಸೊಲೇಷನ್

Public TV
Last updated: December 26, 2023 6:12 pm
Public TV
Share
3 Min Read
Government Make 7 Days Home Isolation Mandatory For People Testing Positive For Covid 19 dinesh gundu rao 2
SHARE

– ಸೋಂಕಿತರ ಮನೆಗಳಿಗೆ ವೈದ್ಯರಿಂದ ಭೇಟಿ

ಬೆಂಗಳೂರು: ಕೋವಿಡ್ (Covid) ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸಂಪುಟ ಉಪಸಮಿತಿ ಸಭೆ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, Tac ಸಮಿತಿ ಅಧ್ಯಕ್ಷ ಡಾ. ರವಿ ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಜೆ.ಎನ್.1 ಉಪತಳಿ, ಹಾಗೂ ಕೋವಿಡ್ ಸೋಂಕಿನ ಕುರಿತು ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಿದ ಸಂಪುಟ ಉಪಸಮಿತಿ, ಕೋವಿಡ್ ನಿಯಂತ್ರಣ ವಿಚಾರದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತು. ಹೊಸ ವರ್ಷಾಚರಣೆಗೆ ಸದ್ಯಕ್ಕೆ ನಿರ್ಬಂಧ ಹೇರುವುದು ಬೇಡ ಎಂಬ ನಿರ್ಧಾರವನ್ನ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಆದರೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಜನರು ಮಾಸ್ಕ್ ಹಾಕಿಕೊಳ್ಳುವಂತೆ ಸಲಹೆ ನೀಡಲು ನಿರ್ಧರಿಸಲಾಯಿತು.‌

ಕಾಯಿಲೆ ಹೊಂದಿದವರು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಕ್ಸಿನ್ ತೆಗೆದುಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸದ್ಯಕ್ಕೆ 30 ಸಾವಿರ ವ್ಯಾಕ್ಸಿನ್‌ಗಳನ್ನು (Vaccine) ಕೇಂದ್ರ ಸರ್ಕಾರದಿಂದ ಪಡೆದು ರಾಜ್ಯದ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ವಿತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದನ್ನೂ ಓದಿ: ಕೋವಿಡ್‌ ವೇಳೆ 40 ಸಾವಿರ ಕೋಟಿ ಅವ್ಯವಹಾರ, 45 ರೂ. ಮಾಸ್ಕ್‌ಗೆ 485 ರೂ. ಬಿಲ್‌: ಯತ್ನಾಳ್‌ ಬಾಂಬ್‌

Government Make 7 Days Home Isolation Mandatory For People Testing Positive For Covid 19 dinesh gundu rao 1

ಸಂಪುಟ ಉಪಸಮಿತಿ ಸಭೆಯ ಹೈಲೆಟ್ಸ್
* ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ (Health Problem) ಇರುವ ಮಕ್ಕಳನ್ನು ಶಾಲೆಗಳಿಗೆ (School) ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆಗೆ ಮಾರ್ಗಸೂಚಿ ಹೊರಡಿಸಲು ನಿರ್ಧಾರ.

* ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ 7 ದಿನ ಹೋಮ್ ಐಸೊಲೇಷನಲ್‌ (Home Isolation) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ, ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು. ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ (Holiday) ಕೊಡಿಸುವ ಕುರಿತು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲು ಸಭೆಯಲ್ಲಿ ನಿರ್ಧಾರ.

* ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆಗೆ ನಿರ್ಧಾರ. ಬೆಂಗಳೂರಿನ ವಿಕ್ಟೋರಿಯಾ, ಮತ್ತು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್.‌ ಐಸಿಯು ಬೆಡ್, ಹಾಗೂ ಐಸೊಲೇಷನ್ ಬೆಡ್ ವ್ಯವಸ್ಥೆ.

* ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಹೋಮ್ ಐಸೊಲೇಷನ್ ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಭೇಟಿ ನೀಡಿ ನಿಗಾ ವಹಿಸಲು ಸೂಚನೆ ನೀಡಲಾಯಿತು. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಐಸಿಯುನಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು.‌

 

* ಇತರೇ ಕಾಯಿಲೆ ಹೊಂದಿದವರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ನಿರ್ಧಾರ. ಕೇಂದ್ರ ಸರ್ಕಾರದಿಂದ 30 ಸಾವಿರ ಲಸಿಕೆ ಪಡೆಯಲು ಸಂಪುಟ ಉಪ ಸಮಿತಿ ನಿರ್ಧಾರ. ಆರೋಗ್ಯ ಸಿಬ್ಬಂದಿಗೆ ಸುರಕ್ಷತೆಯ ದೃಷ್ಟಿಯಿಂದ ಫ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.

* ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ಯಾವುದೇ ನಿರ್ಬಂಧ ಹೇರುವುದಿಲ್ಲ. ಆದರೆ ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ (Mask) ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡಲು ಸಾರ್ವಜನಿಕರಲ್ಲಿ ಮನವಿ.

* ಕೋವಿಡ್ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುವ ಎಲ್ಲರನ್ನು ಸಿ.ಟಿ ಸ್ಕ್ಯಾನಿಂಗ್ ಗೆ ಒಳಪಡಿಸುವುದು ನಿಷೇಧ. ಕೋವಿಡ್ ಪಾಸಿಟಿವ್ ಬಂದವರನ್ನ ಮಾತ್ರ ಸಿ.ಟಿ ಸ್ಕ್ಯಾನಿಂಗ್ ಗೆ ಒಳಪಡಿಸಬಹುದು.

* ಇಂದಿನಿಂದ ಪ್ರತಿ ನಿತ್ಯ 5 ಸಾವಿರ ಕೋವಿಡ್ ಟೆಸ್ಟಿಂಗ್, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ. ನಾಲ್ಕು ಮೊಬೈಲ್ ಆಕ್ಸಿಜನ್ ಕಂಟೆಂಡರ್‌ ಖರೀದಿಗೆ ಸಭೆಯಲ್ಲಿ ತೀರ್ಮಾನ.

 

TAGGED:CoronaCorona VirusCovid 19dinesh gundu raokarnatakaಕೊರೊನಾಕೊರೊನಾ ವೈರಸ್ಕೋವಿಡ್ 19ದಿನೇಶ್ ಗುಂಡೂರಾವ್
Share This Article
Facebook Whatsapp Whatsapp Telegram

You Might Also Like

Goa Murder
Crime

ಮದುವೆಯಾಗಲು ಗೋವಾಕ್ಕೆ ತೆರಳಿದ್ದ ಜೋಡಿ – ಗಂಟಲು ಸೀಳಿ ಪ್ರೇಯಸಿಯ ಕೊಲೆ

Public TV
By Public TV
1 minute ago
Labour
Bengaluru City

ಕೆಲಸದ ಅವಧಿ 9ರಿಂದ 10ಗಂಟೆಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ – ಕಾರ್ಮಿಕ ಸಂಘಟನೆಗಳ ವಿರೋಧ

Public TV
By Public TV
14 minutes ago
Chevireddy Arrested In Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿ ಅರೆಸ್ಟ್

Public TV
By Public TV
34 minutes ago
Rachita Ram
Cinema

ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ – ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

Public TV
By Public TV
35 minutes ago
Kappatgudda
Districts

ಕಪ್ಪತಗುಡ್ಡದ 322 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ – ಕೇಂದ್ರದಿಂದ ಅಧಿಸೂಚನೆ

Public TV
By Public TV
58 minutes ago
Baindoor 6
Districts

ಡ್ರೋನ್ ಕಣ್ಣಲ್ಲಿ ಸೆರೆಯಾದ ಬೈಂದೂರಿನ ಸೌಪರ್ಣಿಕಾ ನದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?