Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಅಸ್ಥಿಪಂಜರ ಪತ್ತೆ ಕೇಸ್‌: ಮಾನಸಿಕ ಅಸ್ವಸ್ಥತೆಯಿಂದ ಆತ್ಮಹತ್ಯೆಗೆ ಶರಣಾಗಿತ್ತಾ ಇಡೀ ಕುಟುಂಬ? – ಪೊಲೀಸರ ತನಿಖೆ ಚುರುಕು

Public TV
Last updated: December 30, 2023 8:14 am
Public TV
Share
2 Min Read
CTD 3
SHARE

– ಆಸ್ತಿಯಿದ್ದರೂ, ಒಬ್ಬ ಮಕ್ಕಳಿಗೂ ಮದುವೆಯಾಗಿರಲಿಲ್ಲ

ಚಿತ್ರದುರ್ಗ: ಅದೊಂದು ಪಾಳುಬಿದ್ದ ಮನೆ. ಆ ಮನೆಯಲ್ಲಿ ಯಾರು ವಾಸವಿಲ್ಲ ಅಂತ ಎಲ್ರೂ ಭಾವಿಸಿದ್ರು. ಆದ್ರೆ, ಆ ಮನೆಯಲ್ಲಿ ನಿಗೂಢವಾಗಿ ಪತ್ತೆಯಾಗಿರುವ 5 ಅಸ್ಥಿಪಂಜರಗಳು ಚಿತ್ರದುರ್ಗದ (Chitradurga) ಜನರಲ್ಲಿ ಬಾರಿ ಆಂತಕ ಸೃಷ್ಟಿಸಿವೆ. ಹಾಗಾದ್ರೆ ಆ ಅಸ್ತಿಪಂಜರ ಎಲ್ಲಿಂದ ಬಂದ್ವು ಅನ್ನೋ ಅನುಮಾನಗಳ ಸರಮಾಲೆಯೇ ಹುಟ್ಟಿಕೊಂಡಿದ್ದು, ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.

ಹೀಗೆ ಮಂಚದ ಮೇಲಿರುವ ಮನುಷ್ಯರ ಅಸ್ಥಿಪಂಜರಗಳು.. (Skeleton) ಸಾವನ್ನಪ್ಪಿರೋ ನಾಯಿಯ ಕಳೆಬರಹ.. ಕುತೂಹಲದಿಂದ ವೀಕ್ಷಿಸುತ್ತಿರುವ ಜನರು.. ಈ ದೃಶ್ಯಗಳು ಕಂಡುಬಂದಿದ್ದು, ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಜಿಲ್ಲಾಕಾರಗೃಹ ರಸ್ತೆಯ ಮನೆಯಲ್ಲಿ. ಈ ಮನೆ ನಿವೃತ್ತ ಇಂಜಿನಿಯರ್ ಜಗನ್ನಾಥ್ ರೆಡ್ಡಿಯವರದು. ಮನೆಯಲ್ಲಿ ಜಗನ್ನಾಥ್ ಪತ್ನಿ ಪ್ರೇಮಕ್ಕ ಮಕ್ಕಳಾದ ಕೃಷ್ಣರೆಡ್ಡಿ, ನರೇಂದ್ರ, ತ್ರಿವೇಣಿ ವಾಸವಾಗಿದ್ರು. ಆದ್ರೆ ಹಲವು ವರ್ಷಗಳಿಂದ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಂಪರ್ಕಕ್ಕೂ ಕುಟುಂಬಸ್ಥರು ಬಂದಿರಲಿಲ್ಲ. ಎಲ್ಲೊ ದೂರದ ಊರಲ್ಲಿ ಅನಾಥಾಶ್ರಮದಲ್ಲಿ ನೆಲೆಸಿರಬಹುದು ಅಂತಲೇ ಎಲ್ರೂ ಭಾವಿಸಿದ್ರು. ಅಲ್ದೇ ಜಗನ್ನಾಥ್ ರೆಡ್ಡಿಯ ಮೂವರು ಮಕ್ಕಳಿಗೂ ವಿವಾಹವಾಗಿರಲಿಲ್ಲ. ಇದನ್ನೂ ಓದಿ: ರಾಮನೂರಿನಲ್ಲಿಂದು ಮೋದಿ ಮೆಗಾ ಶೋ – 15,000 ಕೋಟಿ ರೂ. ಯೋಜನೆಗೆ ಚಾಲನೆ

CTD

ಮೊದಲ ಮಗ ಕೃಷ್ಣರೆಡ್ಡಿ ನಿರುದ್ಯೋಗಿಯಾಗಿದ್ದರಂತೆ, ಮತ್ತೋರ್ವ ನರೇಂದ್ರರೆಡ್ಡಿ 2013 ರಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡೋದನ್ನ ಬಿಟ್ಟು ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ ಇದ್ದ ಓರ್ವ ಪುತ್ರಿಯಾದ ತ್ರಿವೇಣಿ ಬೋನ್ ಮ್ಯಾರೊ ಎಂಬ ಮೂಳೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಹಿರಿಯ ಮಗ ಮಂಜುನಾಥ ರೆಡ್ಡಿ ಕೇರಳದಲ್ಲಿ ಸಾವನ್ನಪ್ಪಿದ್ರು. ಹೀಗಾಗಿ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ 8 ವರ್ಷಗಳಿಂದ ಯಾರ ಸಂಪರ್ಕದಲ್ಲಿರಲಿಲ್ಲ ಎಂದು ಜಗನ್ನಾಥ್ ಪತ್ನಿಯಾದ ಪ್ರೇಮಕ್ಕ ಅವರ ಸಹೋದರಿ ಲಲಿತಮ್ಮ ತಿಳಿಸಿದ್ದಾರೆ.

ಹಾಗೆಯೇ ಸ್ಥಳೀಯರ ಪ್ರಕಾರ ಈ ಮನೆಯಲ್ಲಿದ್ದವರೆಲ್ಲ ಸೈಕೊಗಳಾಗಿದ್ರು. ಬೆಳಗಿನ ಜಾವ ಅವರ ಕೆಲಸ ಮುಗಿಸಿ ಮನೆಯೊಳಗೆ ಸೇರಿಕೊಳ್ಳುತ್ತಿದ್ದರು ಎಂಬ ಪ್ರತಿಕ್ರಿಯೆಗಳನ್ನ ನೀಡಿದ್ದಾರೆ. ಸಾವನ್ನಪ್ಪಿದ ಸಂಬಂಧ ಜಗನ್ನಾಥ್ ರೆಡ್ಡಿಯ ಸಂಬಂಧಿ ಪವನ್ ಕುಮಾರ್ ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗಲಿರುವ ವಿಶ್ವದರ್ಜೆಯ ವಿಮಾನ, ರೈಲು ನಿಲ್ದಾಣದ ವಿಶೇಷತೆಗಳು ಏನು?

CTD 2

ತನಿಖೆ ಚುರುಕು: ಪ್ರಕರಣ ಸಂಬಂಧ ತನಿಖೆ ಚುರುಕಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು, ಎಫ್‌ಎಸ್‌ಎಲ್ ನಿರ್ದೇಶಕಿ ದಿವ್ಯ ಗೋಪಿನಾಥ್ ತಂಡ, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸಿಬ್ಬಂದಿ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದು, ಒಂದು ಕೊಠಡಿಯಲ್ಲಿ ಒಂದು ಅಸ್ಥಿಪಂಜರ, ಮತ್ತೊಂದು ಕೊಠಡಿಯಲ್ಲಿ 4 ಅಸ್ಥಿಪಂಜರಗಳು ಪತ್ತೆಯಾಗಿವೆ. ಅಲ್ಲದೇ ಮನೆಯಲ್ಲಿ ಸಾಕಿದ್ದ ನಾಯಿಯ ಕಳೇಬರಹ ಕೂಡ ಪತ್ತೆಯಾಗಿದ್ದು, ಎಲ್ಲಾ ಅಸ್ತಿಪಂಜರಗಳನ್ನು ಜೆಎಂಐಟಿ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಗೊಳಗಾಗಿದ್ದ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ಚಿತ್ರದುರ್ಗ ಎಸ್ಪಿ ಧರ್ಮೇಂಧರ್ ಕುಮಾರ್ ಇದನ್ನು ಅಲ್ಲೆಗೆಳೆದಿದ್ದಾರೆ. ಪ್ರಕರಣ ಸಂಬಂಧ ಕೂಲಂಕಶವಾಗಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗ್ತಿದೆ. ಅಲ್ಲಿ ಸಿಕ್ಕಿರುವ ಡೆತ್ ನೋಟ್ ಕೂಡ ಅನುಮಾನಸ್ಪದವಾಗಿದೆ. ಹೀಗಾಗಿ ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಪ್ರಕರಣದ ನೈಜತೆ ತಿಳಿಯಲಿದೆ ಎಂದಿದ್ದಾರೆ. ಒಟ್ಟಿನಲ್ಲಿ ಮರಣೋತ್ತರ ಪರೀಕ್ಷಾ ವರದಿಗಳು ಬಂದ ಬಳಿಕವೇ ನಿಖರ ಕಾರಣ ತಿಳಿಯಲಿದೆ.

Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
12 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
14 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
15 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
15 hours ago

You Might Also Like

kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
29 minutes ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
31 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
34 minutes ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
42 minutes ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
1 hour ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?