ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

Public TV
1 Min Read
Pratap Simha and Vikram Simha

ಬೆಂಗಳೂರು: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಜಾರಿಬಂಡೆ ಕಾವಲ್‌ನ ಅರಣ್ಯ ಘಟಕದಲ್ಲಿ ತಲೆಮರೆಸಿಕೊಂಡಿದ್ದ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

PRATAP SIMHA

ಏನಿದು ಪ್ರಕರಣ?
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

Share This Article