Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ – ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ – ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್

Districts

ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ – ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್

Public TV
Last updated: January 4, 2024 8:55 am
Public TV
Share
2 Min Read
Nanjangud Temple
SHARE

ಮೈಸೂರು: ನಂಜನಗೂಡು (Nanjangud) ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ (Bandh) ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್ ಮಾಡಿ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ,

ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿಲ್ಲ. ಬಂದ್‌ಗೆ ಬೆಂಬಲ ಕೊಡುವಂತೆ ನಂಜನಗೂಡಿನಲ್ಲಿ ನಂಜುಂಡೇಶ್ವರನ ಭಕ್ತರು ಕರ ಪತ್ರ ಹಂಚುತ್ತಿದ್ದಾರೆ. ಇದನ್ನೂ ಓದಿ: ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ

Nanjangud Bandh

ಈ ಪ್ರಕರಣದ ಕುರಿತು ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್, ದೇವರಿಗೆ ಎರಚಿರುವುದು ಶುದ್ಧ ನೀರು ಎಂದು ಹೇಳಿಕೆ ನೀಡಿದ್ದರು. ನಾಗಚಂದ್ರ ದೀಕ್ಷಿತ್ ಎಡಿಸಿ ನೇತೃತ್ವದ ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದು, ಸಭೆ ನಂತರ ಉತ್ಸವ ಮೂರ್ತಿಗೆ ಶುದ್ಧ ನೀರು ಎರಚಿದ್ದಾರೆ ಎಂದು ಹೇಳಿದ್ದರು. ಬಳಿಕ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದು ಹೇಳಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

ತಾಲೂಕು ದಂಡಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಒಂದು ಪತ್ರ ನೀಡಿ ಸಹಿ ಹಾಕುವಂತೆ ಒತ್ತಾಯಿಸಿದರು. ಹೀಗಾಗಿ ನಾವು ಮೂವರು ಆ ಪತ್ರಕ್ಕೆ ಸಹಿ ಹಾಕಿದ್ದೇವೆ. ನಾವು ಸರ್ಕಾರಿ ನೌಕರರು. ಹೀಗಾಗಿ ಅಧಿಕಾರಿಗಳ ಮಾತಿಗೆ ಬೆಲೆ ಕೊಟ್ಟು ಸಹಿ ಮಾಡಿದ್ದೇವೆ. ನಂಜನಗೂಡಿನ ಜನತೆಗೆ ಈ ಪ್ರಕರಣ ಗೊತ್ತಿದೆ. ಅವರೇ ಇತ್ಯರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಬಂದ್‌ಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ನಾನು ಅಯೋಧ್ಯೆಗೆ ಹೋಗಲ್ಲ: ಸಿದ್ಧಲಿಂಗ ಶ್ರೀ

ಪ್ರಕರಣ ಏನು?
ಮಹಿಷಾಸುರ ವಧೆ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಆವರಣದಲ್ಲಿ ಸಂಪ್ರದಾಯದಂತೆ ಪಟ್ಟಣದ ರಾಕ್ಷಸ ಮಂಟಪದಲ್ಲಿ ಮಹಿಷಾಸುರ ಬೃಹತ್ ರಂಗೋಲಿ ಬರೆದು, ಬೃಹದಾಕಾರದ ಬ್ಯಾನರ್ ಕಟ್ಟಲಾಗಿತ್ತು. ಪದ್ಧತಿಯಂತೆ ನಂಜುಂಡೇಶ್ವರನ ಉತ್ಸವ ಮೂರ್ತಿಯನ್ನು ಹೊತ್ತವರು ಮಹಿಷಾಸುರನ ರಂಗೂಲಿಯ ಸುತ್ತ ಮೂರು ಸುತ್ತು ಸುತ್ತುಗಳನ್ನು ಹಾಕಿ ರಂಗೋಲಿಯನ್ನು ಅಳಿಸಿ, ಬ್ಯಾನರನ್ನು ಕಿತ್ತೆಸೆದು ತೇರಿನ ಬೀದಿಗಳಲ್ಲಿ ಮುಂದಕ್ಕೆ ಸಾಗಬೇಕು. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡ ಬಂದ ವಾಡಿಕೆಯಾಗಿತ್ತು. ಇದನ್ನೂ ಓದಿ: ಟೀ ಕುಡಿದಿದ್ದ ಉಜ್ವಲ ಫಲಾನುಭವಿ ಮಹಿಳೆಯ ಮನೆಗೆ‌ ಗಿಫ್ಟ್‌ ಜೊತೆ ಮೋದಿ ಪತ್ರ

ಮಹಿಷಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಭಕ್ತರು, ತಲಾತಲಾಂತರಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದ್ದರು. ಆದರೂ ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದರು. ಇದನ್ನೂ ಓದಿ: ಒಬ್ಬ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು: ಸಿಎಂ

ನಂಜನಗೂಡು ಅಂಧಕಾಸುರ ಆಚರಣೆಗೆ ಅಡ್ಡಿಪಡಿಸಿದ ವಿಚಾರದ ಕುರಿತು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು, ಬಾಲರಾಜು, ನಾರಾಯಣ, ನಾಗಭೂಷಣ್, ನಟೇಶ್ ಹಾಗೂ ಅಭಿ ಈ ಐವರ ಮೇಲೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್‌ಗೆ ಮಂಪರು ಪರೀಕ್ಷೆ ಮಾಡಿಸಬೇಕು: ಸಂಗಣ್ಣ ಕರಡಿ

TAGGED:bandhmysurunanjangudutsav murthyಉತ್ಸವ ಮೂರ್ತಿನಂಜನಗೂಡುನಾಗಚಂದ್ರ ದೀಕ್ಷಿತ್ಬಂದ್ಮೈಸೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
5 minutes ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
26 minutes ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
35 minutes ago
Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
57 minutes ago
Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
10 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?