Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

Ram Mandir: ಏನಿದು ಪ್ರಾಣ ಪ್ರತಿಷ್ಠೆ? ಆಚರಣೆ ಹೇಗಿರುತ್ತೆ?

Public TV
Last updated: January 5, 2024 7:36 pm
Public TV
Share
2 Min Read
ayodhya ram mandir
SHARE

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾಲ ಸನ್ನಿಹಿತವಾಗಿದೆ. ದೇಶದೆಲ್ಲೆಡೆ ಶ್ರೀರಾಮನ ಸ್ಮರಣೆ, ಭಜನೆ ಕೇಳಿಬರುತ್ತಿದೆ. ಹಿಂದೂಗಳ ಮನೆ ಮನದಲ್ಲಿ ಸಂಭ್ರಮ ತುಂಬಿದೆ. ಇದೇ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ (ಬಾಲರಾಮ) ಪ್ರಾಣ ಪ್ರತಿಷ್ಠೆ ಕೂಡ ಜರುಗಲಿದೆ. ಈ ದಿನಕ್ಕಾಗಿ ಕೋಟ್ಯಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಜ.22 ರ ಪ್ರಮುಖ ಧಾರ್ಮಿಕ ಆಚರಣೆ ಪ್ರಾಣ ಪ್ರತಿಷ್ಠೆ (Pran Pratistha). ಎಷ್ಟೋ ಜನಕ್ಕೆ ಪ್ರಾಣ ಪ್ರತಿಷ್ಠೆ ಬಗ್ಗೆ ಗೊತ್ತಿರುವುದಿಲ್ಲ. ಪ್ರಾಣ ಪ್ರತಿಷ್ಠೆ ಎಂದರೇನು? ಇದರಲ್ಲಿನ ಆಚರಣೆಗಳು ಹೇಗಿರುತ್ತವೆ? ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಇದನ್ನೂ ಓದಿ: Ram Mandir Inauguration: ತಿರುಪತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ

ram temple ayodhya

ಏನಿದು ಪ್ರಾಣ ಪ್ರತಿಷ್ಠೆ?
ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’ ಮತ್ತು ಪ್ರತಿಷ್ಠೆ ಎಂದರೆ ‘ಸ್ಥಾಪನೆ’. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪೂಜಾ ವಿಧಾನ, ವೈದಿಕ ಸ್ತೋತ್ರಗಳ ಪಠಣ ನಡೆಸಲಾಗುವುದು. ಪ್ರಾಣ ಪ್ರತಿಷ್ಠೆ ಎಂದರೆ, ವಿಗ್ರಹಕ್ಕೆ ಜೀವಶಕ್ತಿ ತುಂಬಿ ದೈವಿಕವಾಗಿಸುವ ಆಚರಣೆ ಎನ್ನುತ್ತಾರೆ ಹಿರಿಯರು.

ಪ್ರಾಣ ಪ್ರತಿಷ್ಠೆ ಪ್ರಕ್ರಿಯೆಗೂ ಮೊದಲು ವಿಗ್ರಹದಲ್ಲಿ ದೈವಿಕ ಶಕ್ತಿ ಇರುವುದಿಲ್ಲ. ಪ್ರಾಣ ಪ್ರತಿಷ್ಠೆ ನಂತರವೇ ವಿಗ್ರಹಕ್ಕೆ ವಿಶೇಷ ಶಕ್ತಿ ಬರುತ್ತದೆ. ಬಳಿಕ ವಿಗ್ರಹವು ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಆಗ ದೇವಾಲಯಗಳಲ್ಲಿ ಭಕ್ತರು ವಿಗ್ರಹವನ್ನು ಪೂಜಿಸಬಹುದು ಎಂಬ ನಂಬಿಕೆಯಿದೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

Ayodhya Ram Mandir 3

ಆಚರಣೆ ಹೇಗಿರುತ್ತೆ?
ವಿಗ್ರಹವನ್ನು ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ತರುವುದರೊಂದಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಅಂದರೆ ವಿಗ್ರಹವನ್ನು ಹೊರಗಿನಿಂದ ಕೇಂದ್ರ ಸ್ಥಳಕ್ಕೆ ಸ್ಥಳಾಂತರಿಸುವುದು. ಅತಿಥಿಯನ್ನು ಸ್ವಾಗತಿಸುವಂತೆಯೇ ದೇವಾಲಯಕ್ಕೆ ದೇವರ ವಿಗ್ರಹವನ್ನು ತರಲಾಗುವುದು. ನಂತರ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ. ನಂತರ ಸುಗಂಧ ದ್ರವ್ಯಗಳನ್ನು ಹಚ್ಚಲಾಗುತ್ತದೆ. ನಂತರ ವಿಗ್ರಹದ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಸರಿಯಾದ ಸ್ಥಳದಲ್ಲಿ ಪೂರ್ವಾಭಿಮುಖವಾಗಿ ಸ್ಥಾಪಿಸುತ್ತಾರೆ.

ಪುರೋಹಿತರು ಮಂತ್ರಗಳನ್ನು ಪಠಿಸುತ್ತಾರೆ. ಮಂತ್ರಗಳ ಪಠಣೆ, ಆಚರಣೆಯಿಂದ ವಿಗ್ರಹಕ್ಕೆ ದೈವಶಕ್ತಿ ಬರುತ್ತದೆ. ನಂತರ ವಿಗ್ರಹಕ್ಕೆ ಅಭಿಮುಖವಾಗಿ ಕನ್ನಡಿಯನ್ನು ಹಿಡಿಯಲಾಗುತ್ತದೆ. ಬಳಿಕ ವಿಗ್ರಹದ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ಬಿಚ್ಚಿಲಾಗುತ್ತದೆ. ಆಗ ಕನ್ನಡಿ ಒಡೆಯುತ್ತದೆ. ಕನ್ನಡಿ ಒಡೆಯುವುದು, ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಂಡಿದೆ ಎಂಬುದಕ್ಕೆ ಸಾಕ್ಷಿ. ಈ ಪ್ರಕ್ರಿಯೆ ಮುಗಿದ ನಂತರ ವಿಗ್ರಹವನ್ನು ಪೂಜಿಸಲು ಯೋಗ್ಯವೆಂದು ಪರಿಗಣಿಸಲಾಗುತ್ತದೆ. ವಿಗ್ರಹಕ್ಕೆ ಜೀವತುಂಬಿ ದೈವಿಕವಾಗಿಸುವ ಆಚರಣೆ ಇದು ಎಂದು ನಂಬಲಾಗಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

ಪೂರ್ವಾಭಿಮುಖವಾಗಿ ವಿಗ್ರಹ ಸ್ಥಾಪಿಸೋದ್ಯಾಕೆ?
ಪೂರ್ವಾಭಿಮುಖ ಎಂದರೆ ಸೂರ್ಯೋದಯದ ಸ್ಥಾನ. ಸೂರ್ಯನ ಉದಯದಿಂದ ಬೆಳಕು ಹೊಮ್ಮುತ್ತದೆ. ಜೀವಗಳಿಗೆ ಚೈತನ್ಯ ಬರುತ್ತದೆ. ಆ ದೃಷ್ಟಿಯಿಂದಲೇ ದೇವಾಲಯಗಳಲ್ಲಿ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಲಾಗುತ್ತದೆ. ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯ ಪೂರ್ವ ದಿಕ್ಕಿನಲ್ಲಿ ಉದಯಿಸುವುದರಿಂದ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಬೇಕು. ದೇವರ ವಿಗ್ರಹಕ್ಕೆ ಮೊದಲ ಪೂಜೆ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಬೇಕು ಎನ್ನಲಾಗುತ್ತದೆ.

TAGGED:Ram Mandirಅಯೋಧ್ಯೆಪ್ರಾಣ ಪ್ರತಿಷ್ಠೆರಾಮಮಂದಿರ
Share This Article
Facebook Whatsapp Whatsapp Telegram

You Might Also Like

Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
33 minutes ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
49 minutes ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
59 minutes ago
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
By Public TV
2 hours ago
rain weather
Districts

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ – ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

Public TV
By Public TV
2 hours ago
AI ಚಿತ್ರ
Chikkamagaluru

ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?