Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

Public TV
Last updated: January 8, 2024 5:31 pm
Public TV
Share
2 Min Read
Koppal 03
SHARE

ಕೊಪ್ಪಳ: ಕೋಟ್ಯಂತರ ರಾಮ ಭಕ್ತರ ಕನಸಿನ ಮಂದಿರ (Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲೂ ಸಾವಿರಾರು ಭಕ್ತರು ರಾಮನೂರಿಗೆ ತೆರಳಲು ಬರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಶ್ರೀರಾಮನ (Shri Rama) ನಂಟಿರುವ ಕರ್ನಾಟಕದ (Karnataka) ವಿವಿಧ ಸ್ಥಳಗಳ ಬಗ್ಗೆ ತಿಳಿಯುವುದೂ ಅಷ್ಟೇ ಅವಶ್ಯಕವಾಗಿದೆ.

Koppal 01

ಹೌದು. ಸೀತೆಯನ್ನ ಹುಡುಕುತ್ತಾ ಹೊರಟ ಶ್ರೀರಾಮನ ಹೆಜ್ಜೆ ಗುರುತುಗಳು ಕರುನಾಡಿನಲ್ಲೂ ಮೂಡಿವೆ ಅನ್ನೋದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ನಮ್ಮ ರಾಜ್ಯದ ಕೊಪ್ಪಳ ಜಿಲ್ಲೆಗೂ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ ಅನ್ನೋದಕ್ಕೆ ಅನೇಕ ನಿದರ್ಶನಗಳು ಇಲ್ಲಿವೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

Koppal 05

ರಾವಣ ಸೀತೆಯನ್ನು ಅಪಹರಿಸಿದಾಗ ವನವಾಸದಲ್ಲಿದ್ದ ಶ್ರೀರಾಮ, ಸೀತೆಯನ್ನು ಹುಡುಕುತ್ತಾ ಹೊರಟಿದ್ದ. ಈ ವೇಳೆ ಶ್ರೀರಾಮನಿಗೆ ಶಕ್ತಿ ತುಂಬಿದ್ದು ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅದುವೆ ಕಿಷ್ಕಿಂದೆ ರಾಜ್ಯ. ವಾನರಸೇನೆ ಹಾಗೂ ಶ್ರೀರಾಮನ ಬಂಟ ಹನುಮ ಸಿಕ್ಕಿದ್ದು ಇದೇ ಕಿಷ್ಕಿಂದೆ ರಾಜ್ಯದಲ್ಲಿ ಅದು ಇಂದಿನ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

Koppal 04

ಆನೆಗೊಂದಿ ಸಮೀಪದ ಪಂಪಾಸರೋವರದಲ್ಲಿ ಮೊದಲ ಬಾರಿಗೆ ಶ್ರೀರಾಮನನ್ನ ಆಂಜನೇಯ ಭೇಟಿಯಾಗುತ್ತಾನೆ. ಇದೇ ಸ್ಥಳದಲ್ಲಿ ವಾಲಿ ಸುಗ್ರೀವರ ಕಾಳಗ ಸಹ ನಡೆಯತ್ತೆ. ವಾಲಿ – ಸುಗ್ರೀವರ ಕಾಳಗದಲ್ಲಿ ಶ್ರೀರಾಮ ವಾಲಿವಧೆ ಮಾಡಿ ಸುಗ್ರೀವನಿಗೆ ಕಿಷ್ಕಿಂದೆಯ ಅಧಿಕಾರ ತಂದುಕೊಡುತ್ತಾನೆ. ಇದು ಒಂದು ಕಡೆಯಾದ್ರೆ, ಸೀತಾಮಾತೆಯನ್ನ ಹುಡುಕಿ ಹೊರಟ ಶ್ರೀ ರಾಮನಿಗೆ ಶಬರಿ ಕಾದು ಕುಳಿತಿದ್ದು ಕೂಡಾ ಇದೆ, ಪಂಪಾಸರೋವರದಲ್ಲಿ, ಈ ಪಂಪಾಸರೋವರದಲ್ಲಿ ಶಬರಿಯ ಗುಹೆ ಇಂದಿಗೂ ಇದೆ‌. ಈ ಗುಹೆಯಲ್ಲಿ ಪ್ರಭು ಶ್ರೀರಾಮನ ಪಾದುಕೆಗಳಿವೆ. ರಾಮ ಇಲ್ಲಿಂದ ತೆರಳಿದ ಬಳಿಕ ಶಬರಿ ಈ ಪಾದುಕೆಗಳಿಗೆ ಪೂಜೆ ಸಲ್ಲಿಸುತ್ತಿದ್ದಳು ಅನ್ನೋ ಬಗ್ಗೆ ಪುರಾಣಗಳಲ್ಲಿಯೂ ಉಲ್ಲೆಖವಿದೆ‌‌. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

Koppal 06

14 ವರ್ಷಗಳ ವನವಾಸದಲ್ಲಿದ್ದ ಶ್ರೀರಾಮ ಸೀತೆಯನ್ನ ಹುಡುಕಿ ಹೊರಟಾಗ ಆತನ ಬಳಿ ಯಾವುದೇ ಸೈನ್ಯವಾಗಲಿ, ಯುದ್ಧ ಸಲಕರಣೆಗಳಾಗಲಿ ಇರಲಿಲ್ಲ. ಅಲ್ಲದೇ ಸಮುದ್ರವನ್ನ ದಾಟಿ ಲಂಕೆಗೆ ಹೋಗಲು ಮುಂದಾಗಿದ್ದಾಗ ಹನುಮ ಹಾಗೂ ಕಿಷ್ಕಿಂದೆಯ ರಾಜ್ಯದ ವಾನರ ಸೇನೆ ರಾಮನನ್ನ ಸೇರಿದ್ದು ಇದೇ ಕಿಷ್ಕಿಂದೆಯಲ್ಲಿ. ಕೊಪ್ಪಳ ಜಿಲ್ಲೆಯ ಸುತ್ತ ಮುತ್ತಲಿನ, ಹೊಸಪೇಟೆ, ಬಳ್ಳಾರಿ ಭಾಗದ ಕಬ್ಬಿಣ ಅಧಿರಿನಿಂದಲೇ ಅಂದು ಯುದ್ಧಕ್ಕೆ ಬೇಕಾದ ಆಯುಧಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇಲ್ಲಿಯೇ ಸೇನೆಯನ್ನು ಸಿದ್ಧಪಡಿಸಿಕೊಂಡಿದ್ದ ಬಗ್ಗೆಯೂ ಇತಿಹಾಸವಿದೆ.

Koppal 02

ನಂತರ ವಾನರ ಸೇನೆಯ ಸಹಾಯದಿಂದಲೇ ಲಂಕೆಗೆ ಸೇತುವೆ ನಿರ್ಮಿಸಿ ಆಂಜನೇಯನ ಸಹಾಯದಿಂದ ಲಂಕಾ ಪ್ರವೇಶಿಸಿ ರಾವಣನ ಸಂಹಾರ ಮಾಡಲಾಯಿತು. ನಂತರ ಸೀತಾ ಮಾತೆಯನ್ನ ಅಯೋಧ್ಯೆಗೆ ಕರೆತರಲಾಯಿತು. ಈ ಎಲ್ಲ ಮಹತ್ಕಾರ್ಯಕ್ಕೆ ಸಹಾಯಕವಾಗಿದ್ದು ಅಂದಿನ ಕಿಷ್ಕಿಂದೆ ರಾಜ್ಯದ ವಾನರ ಸೇನೆ. ಅದು ಇಂದಿನ ಅಂಜನಾದ್ರಿಯ ಆನೆಗೊಂದಿ ಭಾಗ. ಇದಕ್ಕೆ ಅಂಜನಾದ್ರಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಹಲವು ಸಾಕ್ಷಿಗಳು ದೊರೆತಿವೆ‌. ಇದರಿಂದ ರಾಮಾಯಣಕ್ಕೂ ಕೊಪ್ಪಳ ಜಿಲ್ಲೆಯಗೂ ಅವಿನಾಭಾವ ಸಂಬಂಧವಿದೆ ಎನ್ನುತ್ತಾರೆ ಇತಿಹಾಸ ತಜ್ಞರು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

TAGGED:AnegundiAyodhyaKoppalRam MandirShabarisri ramaಅಯೋಧ್ಯೆಆನೆಗೊಂದಿಕೊಪ್ಪಳರಾಮಮಂದಿರಶಬರಿಶ್ರೀರಾಮ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
57 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
35 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
37 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
58 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?