Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

Public TV
Last updated: January 8, 2024 6:30 pm
Public TV
Share
2 Min Read
Congress BJP
SHARE

ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ (BJP) ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra)  ಅವರು ಇಂದು ವಿಶ್ಲೇಷಿಸಿದರು. ಬೆಂಗಳೂರಿನ (Bengaluru) ಯಲಹಂಕದ ರಮಡ ರೆಸಾರ್ಟ್ ನಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ (Loksabha Election) ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐಎ (ಇಂಡಿಯಾ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ವಿವರಿಸಿದರು. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು. ಇದನ್ನೂ ಓದಿ: ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ: ಡಾ.ಎಂ.ಸಿ ಸುಧಾಕರ್

ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಢೀಕರಣದ ವಿಚಾರದಲ್ಲಿ ಪೂರ್ಣಪ್ರಮಾಣದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರ್ಕಾರವು ಪರಿಹಾರ ಕೊಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಹಿಂದಿನ ಸಿಎಂ ಯಡಿಯೂರಪ್ಪ ಅವರು ಅತಿವೃಷ್ಟಿ ಆಗಿದ್ದಾಗ ತಕ್ಷಣ ಜನಸ್ಪಂದನ ತೋರಿದ್ದು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಪ್ರಕೃತಿ ವಿಕೋಪಕ್ಕೆ ಕೂಡಲೇ ಸ್ಪಂದಿಸಿದ್ದನ್ನು ಜನರು ಮರೆತಿಲ್ಲ. ಈ ಸರ್ಕಾರವು ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ ಹಣವನ್ನೂ ಬೇರೆಡೆಗೆ ವರ್ಗಾಯಿಸಿ ದಲಿತರಿಗೂ ಅನ್ಯಾಯ ಮಾಡಿದೆ. ಇದಕ್ಕಾಗಿ ಜನರು ಈ ಕಾಂಗ್ರೆಸ್ ಸರ್ಕಾರವನ್ನು ಶಪಿಸುವಂತಾಗಿದೆ ಎಂದು ತಿಳಿಸಿದರು.

ಕೋಟ್ಯಂತರ ಹಿಂದೂಗಳು ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದು, ಹಬ್ಬದ ವಾತಾವರಣವಿದೆ. ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಇದೆ. ಆದರೆ ಭಗವಾನ್ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದವರು ವಿಧಿ ಇಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಲು ಸುತ್ತೋಲೆ ಹೊರಡಿಸಿದೆ. ಇದು ರಾಮಭಕ್ತರಿಗೆ ಸಂದ ಜಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.

TAGGED:bengalurubjpcongressLokSabha electionಕಾಂಗ್ರೆಸ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

05 1
Chamarajanagar

5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

Public TV
By Public TV
1 hour ago
Puri Jagannath
Latest

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Davanagere Congress
Crime

ದಾವಣಗೆರೆ | ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ `ಕೈ’ ಕಾರ್ಯಕರ್ತರ ಕಾಳಗ!

Public TV
By Public TV
2 hours ago
kolkata gangrape
Crime

ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

Public TV
By Public TV
2 hours ago
almatti dam
Districts

ಆಲಮಟ್ಟಿ ಡ್ಯಾಂಗೆ 1.15 ಲಕ್ಷ ಕ್ಯೂಸೆಕ್ ಒಳಹರಿವು

Public TV
By Public TV
2 hours ago
Siddaramaiah 9
Bengaluru City

ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?