Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

Bengaluru City

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಹತ್ವದ ಸಭೆ- ಕಾಂಗ್ರೆಸ್ ವೈಫಲ್ಯಗಳೇ ಕಮಲಕ್ಕೆ ಅಸ್ತ್ರ

Public TV
Last updated: January 8, 2024 6:30 pm
Public TV
Share
2 Min Read
Congress BJP
SHARE

ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ (BJP) ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra)  ಅವರು ಇಂದು ವಿಶ್ಲೇಷಿಸಿದರು. ಬೆಂಗಳೂರಿನ (Bengaluru) ಯಲಹಂಕದ ರಮಡ ರೆಸಾರ್ಟ್ ನಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ (Loksabha Election) ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐಎ (ಇಂಡಿಯಾ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ವಿವರಿಸಿದರು. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು. ಇದನ್ನೂ ಓದಿ: ಮುಚ್ಚಿಹೋಗಿದ್ದ ರಾಮಮಂದಿರದ ಗರ್ಭಗುಡಿ ತೆರೆಸಿದ್ದು ರಾಜೀವ್ ಗಾಂಧಿ: ಡಾ.ಎಂ.ಸಿ ಸುಧಾಕರ್

ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಢೀಕರಣದ ವಿಚಾರದಲ್ಲಿ ಪೂರ್ಣಪ್ರಮಾಣದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರ್ಕಾರವು ಪರಿಹಾರ ಕೊಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಹಿಂದಿನ ಸಿಎಂ ಯಡಿಯೂರಪ್ಪ ಅವರು ಅತಿವೃಷ್ಟಿ ಆಗಿದ್ದಾಗ ತಕ್ಷಣ ಜನಸ್ಪಂದನ ತೋರಿದ್ದು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಪ್ರಕೃತಿ ವಿಕೋಪಕ್ಕೆ ಕೂಡಲೇ ಸ್ಪಂದಿಸಿದ್ದನ್ನು ಜನರು ಮರೆತಿಲ್ಲ. ಈ ಸರ್ಕಾರವು ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ ಹಣವನ್ನೂ ಬೇರೆಡೆಗೆ ವರ್ಗಾಯಿಸಿ ದಲಿತರಿಗೂ ಅನ್ಯಾಯ ಮಾಡಿದೆ. ಇದಕ್ಕಾಗಿ ಜನರು ಈ ಕಾಂಗ್ರೆಸ್ ಸರ್ಕಾರವನ್ನು ಶಪಿಸುವಂತಾಗಿದೆ ಎಂದು ತಿಳಿಸಿದರು.

ಕೋಟ್ಯಂತರ ಹಿಂದೂಗಳು ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದು, ಹಬ್ಬದ ವಾತಾವರಣವಿದೆ. ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಇದೆ. ಆದರೆ ಭಗವಾನ್ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದವರು ವಿಧಿ ಇಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಲು ಸುತ್ತೋಲೆ ಹೊರಡಿಸಿದೆ. ಇದು ರಾಮಭಕ್ತರಿಗೆ ಸಂದ ಜಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.

TAGGED:bengalurubjpcongressLokSabha electionಕಾಂಗ್ರೆಸ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
29 seconds ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
8 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
20 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
31 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
38 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?