– ಸಚಿವ ಜಮೀರ್ ನಮೆ ನ್ಯಾಯ ಕೊಡಿಸಿಲ್ಲ – ನೊಂದ ದಂಪತಿ ಆರೋಪ
ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊಂದು (Muslim family) ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ. ಕೊನೆಗೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತಪತಿಗಳನ್ನ ತಡೆದಿದ್ದಾರೆ. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ
ಆರೋಪ ಏನು?
ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 ಕೋಟಿ ರೂ. ಬಿಲ್ಡಿಂಗ್ ಅನ್ನು ಕೇವಲ 1.41 ಕೋಟಿ ರೂ.ಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು. ಕಳೆದ ಎರಡು ವರ್ಷಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan) ಅವರ ಮನೆಗೆ ಅಲೆಯುತ್ತಿದ್ದೇವೆ. ನಮಗೆ ಜಮೀರ್ ಅವರು ನ್ಯಾಯ ಕೊಡಿಸಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮೈಲುಗಲ್ಲು ಸಾಧಿಸುವತ್ತ ಹಿಟ್ಮ್ಯಾನ್ – ಕೊಹ್ಲಿಯನ್ನ ಹಿಂದಿಕ್ಕಿ ನಂ.1 ಪಟ್ಟಕ್ಕೇರುತ್ತಾರಾ ರೋಹಿತ್?
ಕಾರಣ ಏನು?
2016ರಲ್ಲಿ ಶುಂಠಿ ಬೆಳೆಯಲು ಬೆಂಗಳೂರು ಕೋ ಆಪರೇಟೀವ್ ಬ್ಯಾಂಕ್ ನಿಂದ 50 ಲಕ್ಷ ರೂ. ಸಾಲ ಪಡೆದುಕೊಂಡಿದ್ದೆವು. ಅಂದಿನಿಂದ ಈ ವರೆಗೆ ಬಡ್ಡಿ ಸೇರಿ 90 ಲಕ್ಷ ರೂ. ಮರುಪಾವತಿಸಿದ್ದೇವೆ. ಆರ್ಥಿಕ ಸಮಸ್ಯೆಯಾಗುತ್ತಿದ್ದ ಕಾರಣ ಬಡ್ಡಿ ದರ ಕಡಿಮೆ ಮಾಡಿಸಿಕೊಡುವಂತೆ ಸಚಿವ ಜಮೀರ್ ಅಹ್ಮರ್ ಅವರ ಬಳಿ ಹೋಗಿದ್ದೆವು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಬ್ಯಾಂಕ್ನಿಂದ ನಮಗೆ ಸೇರಿದ್ದ 3 ಕೋಟಿ ರೂ. ಮೌಲ್ಯದ ಬಿಲ್ಡಿಂಗ್ ಅನ್ನು 1.41 ಕೋಟಿ ರೂ.ಗಳಿಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಶಾಯಿಸ್ತಾ ದಂಪತಿ ಪ್ರತಿಭಟಿಸಿದ್ದಾರೆ.