ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ: ಹೆಚ್‌ಡಿಕೆ

Public TV
1 Min Read
HD Kumaraswamy 6

ಚಿಕ್ಕಮಗಳೂರು: ರಾಮ ಮಂದಿರ (Ram Mandir) ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು. ಇದನ್ನೂ ಓದಿ:ಗ್ರಾಮದ ಅಭಿವೃದ್ಧಿ ಕೆಲಸ ಮಾಡ್ಕೊಡಿ ಎಂದ ಮಹಿಳೆ ಮುಂದೆ JDS ಶಾಸಕ ಬೇಸರ

Ayodhya Ram Mandir 5

ಕಾಂಗ್ರೆಸ್ಸಿಗರು (Congress) ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.

Ayodhya Ram Mandir 2

ಕಳೆದ ಬಾರಿಯ ಲೋಕಸಭೆ ಚುನಾವಣೆ (Lok Sabha Election) ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ. ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲಎಂದು ಹೇಳಿದರು.

ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಯಾರು? ಎಲ್ಲಿ ಎಂಬ ತೀರ್ಮಾನ ಆಗಿಲ್ಲ. ಹೊಂದಾಣಿಕೆಯ ಮಾತುಕತೆಯ ಬಳಿಕ ಎಲ್ಲಿ? ಯಾರು? ಎಂದು ತೀರ್ಮಾನ ಮಾಡುತ್ತೇವೆ. ತೀರ್ಮಾನದ ಬಳಿಕ ಎಲ್ಲಾ ಸರಿಯಾಗುತ್ತದೆ.  ಇದನ್ನೂ ಓದಿ: ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಸಿಎಂ, ಡಿಸಿಎಂ ಮಧ್ಯೆ ಭಿನ್ನಾಭಿಪ್ರಾಯ ಸ್ಫೋಟ!

 

Share This Article