ಹಾವೇರಿ ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಯಾರ ರಕ್ಷಣೆಯನ್ನೂ ಸರ್ಕಾರ ಮಾಡಲ್ಲ: ಪರಮೇಶ್ವರ್

Public TV
1 Min Read
G PARAMESHWAR

ಬೆಂಗಳೂರು: ಹಾವೇರಿಯಲ್ಲಿ (Haveri) ನಡೆದ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣದಲ್ಲಿ ಕೆಲವರ ಬಂಧನವಾಗಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G.Parameshwar) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ನೈತಿಕ ಪೊಲೀಸ್‍ಗಿರಿ ವಿಚಾರವಾಗಿ ಸಂತ್ರಸ್ತೆಯಿಂದ ಗ್ಯಾಂಗ್ ರೇಪ್ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಅವರು ಹಾವೇರಿ ಕೇಸ್ ತನಿಖೆ ನಡೆಯುತ್ತಿದೆ. ಮೊದಲು ಆಕೆ ಗ್ಯಾಂಗ್ ರೇಪ್ ಎಂದು ದೂರು ಕೊಟ್ಟಿರಲಿಲ್ಲ. ನಂತರ ಆಕೆ ರೇಪ್ ಎಂದು ದೂರು ಕೊಟ್ಟಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಹಲವರ ಬಂಧನ ಅಗಿದೆ. ಈ ಬಗ್ಗೆ ತನಿಖೆ ನಡೆಯಲಿದೆ. ತನಿಖೆ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?

ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋ ಕೆಲಸ ಮಾಡುವುದಿಲ್ಲ. ಈ ಪ್ರಕರಣವನ್ನು ಲೈಟ್ ಆಗಿ ತೆಗೆದುಕೊಂಡು ಬಿ ರಿಪೋರ್ಟ್ ಹಾಕೋಕು ಬಿಡುವುದಿಲ್ಲ. ರೇಪ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯಲಿದೆ. ಅಲ್ಲದೇ ಟೆಸ್ಟ್ ಮಾಡುವುದು ಸೇರಿದಂತೆ ಹಲವು ಪ್ರಕ್ರಿಯೆ ಇದೆ. ತನಿಖೆ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ಪ್ರತಿಷ್ಠಾಪನೆ, ಇತರೆ ಪೂಜೆಗಳ ಬಗ್ಗೆ ಪ್ರಧಾನ ಅರ್ಚಕರು ವಿವರಿಸಿದ್ದು ಹೀಗೆ

Share This Article