ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟರು

Public TV
1 Min Read
Darshan 2 1

ಡರಾತ್ರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ (Darshan), ಚಿಕ್ಕಣ್ಣ, ಡಾಲಿ ಧನಂಜಯ್ಯ,  ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ದೇಶಕ ತರುಣ್ ಸುಧೀರ್ ಹಾಗು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಸುಬ್ರಮಣ್ಯ ನಗರ ಪೊಲೀಸ್ (Police) ಠಾಣೆಗೆ ಹಾಜರಾಗಿದ್ದಾರೆ.

Darshan 1 1

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ ಮಾಲೀಕರು ಹಾಗೂ ಮ್ಯಾನೇಜರ್ ಮೇಲೆ ಎಫ್.ಐ. ಆರ್ ದಾಖಲಾಗಿತ್ತು. ಪಾರ್ಟಿ ಮಾಡಿದ ನಟರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಪೊಲೀಸರು. ಇಂದು ಎಲ್ಲರೂ ಒಟ್ಟಾಗಿ ಸುಬ್ರಮಣ್ಯ ನಗರ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಪಬ್ ವೊಂದರಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಇತರ ನಟರಿಗೆ ಪೊಲೀಸರು ನೋಟಿಸ್ ನೀಡಿದ್ದರು. ದುಬೈ ಪ್ರವಾಸದ ನಿಮಿತ್ತ ವಿಚಾರಣೆಗೆ ದರ್ಶನ್ ಹಾಜರಾಗಿರಲಿಲ್ಲ. ಪಾರ್ಟಿಯಲ್ಲಿ ಭಾಗವಹಿಸಿದ ಚಿತ್ರತಂಡ ಹಾಗೂ ಇತರ ನಟರು ವಿಚಾರಣೆಗಾಗಿ ಇಂದು ಸ್ಟೇಶನ್ ಗೆ ಬಂದಿದ್ದಾರೆ.

Share This Article