Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ವರ್ಷಗಳ ಹಿಂದೆ ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ – ಇದೇ ವಿಮಾನದಲ್ಲಿದ್ರು ಮಂಗಳೂರಿನ ಯೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 8 ವರ್ಷಗಳ ಹಿಂದೆ ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ – ಇದೇ ವಿಮಾನದಲ್ಲಿದ್ರು ಮಂಗಳೂರಿನ ಯೋಧ

Latest

8 ವರ್ಷಗಳ ಹಿಂದೆ ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ – ಇದೇ ವಿಮಾನದಲ್ಲಿದ್ರು ಮಂಗಳೂರಿನ ಯೋಧ

Public TV
Last updated: January 12, 2024 10:45 pm
Public TV
Share
3 Min Read
IAFs AN 32 aircraft Eknath Shetty
SHARE

– 2016 ರಲ್ಲಿ ಕಣ್ಮರೆಯಾಗಿದ್ದ ವಿಮಾನದಲ್ಲಿದ್ರು 29 ಯೋಧರು!

ನವದೆಹಲಿ: 2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ (IAFs AN-32 Aircraft) ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದೇ ವಿಮಾನದಲ್ಲಿ ಮಂಗಳೂರಿನ ಗುರುವಾಯನಕೆರೆಯ ಯೋಧ ಏಕನಾಥ ಶೆಟ್ಟಿ (Eknath Shetty) ಕೂಡ ಇದ್ದರು.

ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿಯು ವಿಮಾನವನ್ನು ಪತ್ತೆಹಚ್ಚಲು ಸ್ವಾಯತ್ತ ನೀರೊಳಗಿನ ವಾಹನವನ್ನು (AUV) ಬಳಸಿದೆ. ಅಪಘಾತಕ್ಕೀಡಾಗಿದ್ದ ವಿಮಾನದ ಅವಶೇಷಗಳು ಚೆನ್ನೈ ಕರಾವಳಿಯಿಂದ ಸರಿಸುಮಾರು 140 ನಾಟಿಕಲ್ ಮೈಲುಗಳಷ್ಟು (ಅಂದಾಜು 310 ಕಿಮೀ) ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಶೋಧದ ಚಿತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. An-32 ವಿಮಾನ ಎನ್ನುವುದಕ್ಕೆ ಸಾಕಷ್ಟು ಪುರಾವೆ ಸಿಕ್ಕಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

IAF missing aircraft

ಬಹು-ಬೀಮ್ ಸೋನಾರ್, ಸಿಂಥೆಟಿಕ್ ಅಪರ್ಚರ್ ಸೋನಾರ್ ಮತ್ತು ಹೈ-ರೆಸಲ್ಯೂಶನ್ ಛಾಯಾಗ್ರಹಣ ಸೇರಿದಂತೆ ಬಹು ಪೇಲೋಡ್‌ಗಳನ್ನು ಬಳಸಿಕೊಂಡು 3,400 ಮೀ ಆಳದಲ್ಲಿ ಹುಡುಕಾಟ ನಡೆಸಲಾಗಿತ್ತು ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಘಟನೆ ಏನು?
2016 ರ ಜು.22 ರಂದು ಚೆನ್ನೈಯ ತಾಂಬರಂ ಏರ್‌ಬೇಸ್‌ನಿಂದ ಅಂಡಮಾನ್‌ನ ಪೋರ್ಟ್‌ಬ್ಲೇರ್‌ ನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಸೇನೆಯ ಎಎನ್‌-32 ಯುದ್ಧ ವಿಮಾನ ನಿಗೂಢವಾಗಿ ಕಣ್ಮರೆಯಾಗಿತ್ತು. ಚೆನ್ನೈನ ತಾಂಬರಂನಿಂದ ಬೆಳಿಗ್ಗೆ 8:30 ಕ್ಕೆ ಟೇಕ್ ಆಫ್ ಆಗಿತ್ತು. ಆದರೆ ಕೊಲ ಹೊತ್ತಿನಲ್ಲೇ ಸಂಪರ್ಕ ಕಳೆದುಕೊಂಡಿತ್ತು. ಕೊನೆಯ ಬಾರಿಗೆ 16 ನಿಮಿಷಗಳ ನಂತರ ಸಂಪರ್ಕಿಸಲಾಗಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿತ್ತು. ಇದನ್ನೂ ಓದಿ: ಫೆ.1ಕ್ಕೆ ಕೇಂದ್ರ ಹಣಕಾಸು ಬಜೆಟ್‌ – ಅಂದೇ ಬಜೆಟ್‌ ಮಂಡನೆ ಯಾಕೆ?

29 ಮಂದಿ ಯೋಧರು ಕಣ್ಮರೆ
ಈ ಯುದ್ಧ ವಿಮಾನದಲ್ಲಿ 29 ಮಂದಿ ಯೋಧರಿದ್ದರು. ಈ ಯೋಧರ ಪೈಕಿ ಕರ್ನಾಟಕದ ಏಕೈಕ ಯೋಧ ಏಕನಾಥ ಶೆಟ್ಟಿ ಕೂಡ ಕಣ್ಮರೆಯಾಗಿದ್ದರು. ಐಎಎಫ್‌ನ ನಾಪತ್ತೆಯಾದ ವಿಮಾನದಲ್ಲಿದ್ದವರು ಸತ್ತಿರಬಹುದು ಎಂದು ವಿಚಾರಣೆ ವೇಳೆ ನ್ಯಾಯಾಲಯ ತೀರ್ಮಾನಿಸಿತ್ತು. ವಿಮಾನವು ನೀರೊಳಗಿನ ಲೊಕೇಟರ್ ವ್ಯವಸ್ಥೆಯನ್ನು ಹೊಂದಿರಲಿಲ್ಲ. ಇದು ಹುಡುಕಾಟವನ್ನು ಕಷ್ಟಕರವಾಗಿಸಿತ್ತು.

ವಿಮಾನ ಪತ್ತೆಗಾಗಿ ಕೇಂದ್ರ ಸರ್ಕಾರ ಮತ್ತು ಮಿಲಿಟರಿ ತಜ್ಞರು 3 ತಿಂಗಳು ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆಗಾಗಿ ಪಿ-8ಎ, ಮೂರು ಡೋರ್ನಿಯರ್‌ ವಿಮಾನ, ಜಲಾಂತರ್ಗಾಮಿ, ನೌಕಾ ಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದನ್ನೂ ಓದಿ: ದೆಹಲಿಯಲ್ಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆ?

ಮಂಗಳೂರಿನ ಯೋಧ ಏಕನಾಥ್‌ ಶೆಟ್ಟಿಯೂ ಕಣ್ಮರೆ
2016 ರಲ್ಲಿ ನಿಗೂಢವಾಗಿ ಕಣ್ಮರೆಯಾದ ವಿಮಾನದಲ್ಲಿ ಸುಬೇದಾರ್‌ ಏಕನಾಥ ಶೆಟ್ಟಿ ಕೂಡ ಇದ್ದರು. ಏಕನಾಥ ಶೆಟ್ಟಿ ಮಂಗಳೂರಿನ ಗುರುವಾಯನಕೆರೆ ಮೂಲದವರು. 1985ರಲ್ಲಿ ಭಾರತೀಯ ಭೂ ಸೇನೆಗೆ ಸೇರ್ಪಡೆಯಾದ ಏಕನಾಥ ಶೆಟ್ಟಿ, ಎಮ್ಆರ್‌ಸಿಗೆ ಸೇರಿಕೊಂಡಿದ್ದರು. ಸೇನೆಯಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1986ರಲ್ಲಿ ಶ್ರೀಲಂಕಾದಲ್ಲಿ ಭಾರತೀಯ ಶಾಂತಿಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಜಮ್ಮು-ಕಾಶ್ಮೀರ, ಪಂಜಾಬ್, ಅರುಣಾಚಲ ಪ್ರದೇಶ ಮೊದಲಾದ ರಾಜ್ಯಗಳಲ್ಲೂ ಸೇವೆ ಸಲ್ಲಿಸಿದ್ದರು.

2009ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಆದರೆ ದೇಶ ಸೇವೆಗಾಗಿ ನಿವೃತ್ತಿ ಬಳಿಕವೂ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 2016 ರಲ್ಲಿ ನಡೆದ ದುರಂತದಲ್ಲಿ ಏಕನಾಥ ಶೆಟ್ಟಿ ಕೂಡ ಕಣ್ಮರೆಯಾದರು. ನಾಪತ್ತೆಯಾದ ಸೇನಾ ವಿಮಾನದ ಪತ್ತೆಗಾಗಿ ನಾಸಾ ಸೇರಿದಂತೆ ಭಾರತೀಯ ಮೂರೂ ಸೇನಾ ವಿಭಾಗಗಳು ಸತತವಾಗಿ ಹುಡುಕಾಟ ಮಾಡಿದ್ದವು. ಆದರೆ ಈ ಕ್ಷಣದವರೆಗೆಯೂ ಸಮುದ್ರದಲ್ಲಿ ಯೋಧರ ಮೃತ ದೇಹಗಳಾಗಲೀ, ವಿಮಾನದ ಕುರುಹುಗಳಾಗಲೀ ಕಂಡು ಬಂದಿರಲಿಲ್ಲ. ಹೀಗಾಗಿ ಭಾರತ ಸರ್ಕಾರ 29 ಯೋಧರೂ ಮೃತಪಟ್ಟಿದ್ದಾರೆ ಎಂದು ಹಿಂದೆ ಘೋಷಿಸಿತ್ತು. ಈಗ ವಿಮಾನಕ್ಕೆ ಸಂಬಂಧಿಸಿದ ಕುರುಹುಗಳು ಪತ್ತೆಯಾಗಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

TAGGED:AN-32 aircraftEknath ShettyIAFಎಎನ್‌-32 ಯುದ್ಧವಿಮಾನಏಕನಾಥ ಶೆಟ್ಟಿಐಎಂಎಫ್
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

bse share market
Latest

ಟ್ರೇಡ್‌ ಡೀಲ್‌| 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ

Public TV
By Public TV
53 seconds ago
Brother murders younger brother over property dispute in Davanagere
Crime

ಜಮೀನು ಒತ್ತುವರಿ ವಿಚಾರಕ್ಕೆ ಗಲಾಟೆ – ತಮ್ಮನ ತಲೆ ಒಡೆದು ಕೊಂದ ಅಣ್ಣ

Public TV
By Public TV
7 minutes ago
davanagere attack on constable 3 son arrested
Crime

ಪೊಲೀಸರ ಮೇಲೆ ಹಲ್ಲೆ ಪ್ರಕರಣ – ತಲೆಮರೆಸಿಕೊಂಡಿದ್ದ `ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

Public TV
By Public TV
1 hour ago
asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಮಲ್ಲೇಶ್ವರಂನ 7 ರಸ್ತೆಗಳಲ್ಲಿ ಶೀಘ್ರವೇ ಪೇ ಅಂಡ್ ಪಾರ್ಕಿಂಗ್

Public TV
By Public TV
1 hour ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?