Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bigg Boss Kannada: ನಾನು ಫೇಕ್ ಅಲ್ಲ, ಬೆಂಕಿನೇ: ತನಿಷಾ ಸಂದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bigg Boss Kannada: ನಾನು ಫೇಕ್ ಅಲ್ಲ, ಬೆಂಕಿನೇ: ತನಿಷಾ ಸಂದರ್ಶನ

Cinema

Bigg Boss Kannada: ನಾನು ಫೇಕ್ ಅಲ್ಲ, ಬೆಂಕಿನೇ: ತನಿಷಾ ಸಂದರ್ಶನ

Public TV
Last updated: January 22, 2024 11:05 am
Public TV
Share
6 Min Read
Tanisha Kuppanda 4
SHARE

ಬಿಗ್‌ಬಾಸ್ Bigg Boss Kannada) ಮನೆಯಲ್ಲಿ ‘ಬೆಂಕಿ’ ಎಂದೇ ಎಲ್ಲರಿಂದಲೂ ಹೇಳಿಸಿಕೊಳ್ಳುತ್ತಿದ್ದವರು ತನಿಷಾ ಕುಪ್ಪಂಡ. ಸ್ನೇಹಿತರಿಗೆ ಬೆಚ್ಚನೆಯ ಭಾವ ನೀಡುತ್ತ, ಎದುರಾಳಿಯಾಗಿ ನಿಂತರೆ ಸುಡುವ ಕೋಪವನ್ನೂ ತೋರುತ್ತಿದ್ದ ಅವರಿಗೆ ಈ ಬಿರುದು ಒಪ್ಪುವಂಥದ್ದೇ ಆಗಿದೆ. ನಡುವಲ್ಲಿ ಕಾಲುನೋವಾಗಿ ವಾಪಸ್ ಬರುತ್ತಾರೋ ಇಲ್ಲವೋ ಎಂಬ ಹಂತ ತಲುಪಿದರೂ, ಬಿಡದೇ ವಾಪಸ್ ಬಂದು ಸಾಕಷ್ಟು ಆಟವಾಡಿ ನೂರಕ್ಕೂ ಅಧಿಕ ದಿನ ಉಳಿದಿಕೊಂಡಿದ್ದ ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. ಅದಕ್ಕಾಗಿ ಹೋಗುವಾಗ ಕಣ್ಣೀರು ಹಾಕುತ್ತ ಮನೆಯ ಸದಸ್ಯರಿಗೂ ಜರಿದು, ‘ಬಿಗ್‌ಬಾಸ್ ಯಾಕಿಷ್ಟುಕೆಟ್ಟದಾಗಿ ಕಳಿಸಿಕೊಡ್ತೀರಾ?’ ಎಂದು ಕೇಳುತ್ತಲೇ ಹೊರಗೆ ಹೋದರು. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜೊತೆಗೆ ಬಿಚ್ಚುಮಾತುಗಳನ್ನಾಡಿದ ತನಿಷಾ ಕುಪ್ಪಂಡ ಮನೆಯಿಂದ ಹೊರಗೆ ಬಂದಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ.

Tanisha Kuppanda 5

ಮಿಡ್ ವೀಕ್ ಎಲಿಮಿನೇಷನ್ ಅನುಭವ ಹೇಗಿತ್ತು?

ಆ ಸಂದರ್ಭದಲ್ಲಿ ತುಂಬ ಬೇಜಾರಾಯ್ತು ನನಗೆ. ನಾನು ಇನ್ನಷ್ಟು ದಿನ ಉಳಿದುಕೊಳ್ಳಲು ಅರ್ಹಳು ಎಂಬ ಆತ್ಮವಿಶ್ವಾಸದಲ್ಲಿಯೇ ನಾನಿದ್ದೆ. ಆ ನಂಬಿಕೆ ಮುರಿದುಹೋಯಿತು ಎಂಬ ಬೇಜಾರಿದೆ. ಆದರೆ ಆಚೆ ಬಂದು ಸ್ವಲ್ಪ ರಿಲ್ಯಾಕ್ಸ್ ಆಗಿ ಯೋಚಿಸಿದಾಗ ನನ್ನ ಜರ್ನಿ ನನಗೆ ಖುಷಿ ಕೊಟ್ಟಿದೆ. ನಾನು ಮಾಡಬೇಕಾದ ಎಲ್ಲ ಕೆಲಸಗಳನ್ನೂ ಅಚ್ಚುಕಟ್ಟಾಗಿ ಮಾಡಿ ಮುಗಿಸಿದ್ದೇನೆ. ಹಾಗಾಗಿ ನಾನು ಬಿಗ್‌ಬಾಸ್ ಮನೆಯ ಒಳಗೆ ಇದ್ದಾಗ ಎಷ್ಟು ಖುಷಿಯಾಗಿದ್ದೆನೊ, ತೃಪ್ತಳಾಗಿದ್ದೇನೋ. ಆಚೆ ಬಂದಾಗಲೂ ಹಾಗೆಯೇ ಇದ್ದೇನೆ. ಎಲ್ಲರ ಮನೆಯ ಮಗಳಾಗಿದ್ದೇನೆ ನಾನು. ತುಂಬ ಖುಷಿ ಕೊಟ್ಟ ಪಯಣ ಇದು.

Tanisha Kuppanda 1 1

ಬಿಗ್‌ಬಾಸ್ ಮನೆಯಿಂದ ಯಾಕೆ ಹೊರಗೆ ಬಂದಿರಿ?

ತಪ್ಪು ಅಂತ ಏನೂ ಮಾಡಿಲ್ಲ ನಾನು. ಸಣ್ಣಪುಟ್ಟ ತಪ್ಪುಗಳನ್ನು ಮಾಡ್ತೀವಿ. ಅದು ಎಲ್ಲರಿಂದಲೂ ನಡೆಯುತ್ತದೆ. ಅದು ತಪ್ಪು ಎಂದು ಗೊತ್ತೂ ಆಗಿರಲ್ಲ. ಬಹುಶಃ ಜನರು ನಿರೀಕ್ಷೆ ಮಾಡುತ್ತಿರುವ ಯಾವುದನ್ನೋ ಹೊಸದಾಗಿ ಕೊಡಲಿಲ್ವೇನೋ ನಾನು ಅಂತ ಅನಿಸ್ತು. ನಾವು ಅಲ್ಲದೇ ಇರುವುದನ್ನು ಮಾಡಿದ್ರೆ ಖಂಡಿತವಾಗಿ ಫೇಕ್ ಆಗಿ ಕಾಣಿಸ್ತೀವಿ. ನಾನು ಫೇಕ್ ಆಗಿ ಏನನ್ನೂ ಮಾಡಲಿಲ್ಲ. ಜನರು ನನ್ನಿಂದ ಇನ್ನೂ ಏನನ್ನೋ ನಿರೀಕ್ಷೆ ಮಾಡ್ತಿದ್ರು ಅನಿಸುತ್ತದೆ. ಅನ್ನು ನಾನು ಕೊಡಲಿಲ್ವೇನೋ. ಮತ್ತೆ ಮನೆಯೊಳಗೆ ಹೋಗಲು ಅವಕಾಶ ಸಿಕ್ಕರೆ ನಿಮ್ಮಲ್ಲಿ ನೀವು ಏನನ್ನು ಬದಲಿಸಿಕೊಳ್ಳುತ್ತೀರಿ? ನನ್ನಲ್ಲಿ ನಾನು ಏನೂ ಬದಲಾವಣೆ ಮಾಡಿಕೊಳ್ಳಲ್ಲ. ಬಹುಶಃ ಇನ್ನಷ್ಟು ಮೆಲೊಡ್ರಾಮಾ ಆಡ್ ಮಾಡ್ಕೊಳ್ತಿದ್ದೆ ಅನಿಸುತ್ತದೆ. ಯಾಕಂದ್ರೆ ಎಷ್ಟೋ ಜನರನ್ನು ಮನೆಯೊಳಗಿದ್ದಾಗ ಅಯ್ಯೋ ಪಾಪ ಎಂದು ನೋಡುತ್ತಿದ್ದೆ. ಆದರೆ ಹೊರಗೆ ಬಂದು ನೋಡಿದಾಗ, ಅವರು ಕೊಡುವ ರಿಯಾಕ್ಷನ್ಗಳನ್ನು ನೋಡಿ, ಇವರನ್ನು ಅಯ್ಯೋ ಪಾಪ ಎಂದು ಕ್ಷಮಿಸಿದ್ದು ತಪ್ಪು ಅಂತ ನನಗನಿಸಿತು. ಸಾಮಾನ್ಯವಾಗಿ ನಾನು ಏನಾದ್ರೂ ಅನಿಸಿದ್ರೆ ನೇರವಾಗಿ ಹೇಳಿ ಅಷ್ಟಕ್ಕೆ ಬಿಟ್ಟುಬಿಡ್ತಿದ್ದೆ. ಆದರೆ ಹಾಗೆ ಬಿಡೋದನ್ನು ಕಡಿಮೆ ಮಾಡ್ತಿದ್ನೇನೋ. ಅಂದ್ರೆ ಇನ್ನೊಂಚೂರು ಡ್ರಾಮಾ ಮಾಡ್ತಿದ್ನೇನೋ.

Tanisha Kuppanda 2 1

ಮನೆಯೊಳಗೆ ನಿಮ್ಮ ಧ್ವನಿಯ ಬಗ್ಗೆ ಸಾಕಷ್ಟು ಚರ್ಚೆ ಬಂತು

ಮೊದಲಿಂದಲೂ ನಾನು ನನ್ನ ಬೆಸ್ಟ್ ಅನ್ನು ಕೊಡುತ್ತ ಬಂದಿದೀನಿ. ಯಾರು ಏನೇ ಅಂದುಕೊಂಡರೂ, ಎಲ್ಲರೂ ಟಾರ್ಗೆಟ್ ಮಾಡಿದಾಗಲೂ ಮನಸ್ಸಿಗೆ ತೆಗೆದುಕೊಳ್ಳದೆ ಆಡಿದ್ದೇನೆ. ಯಾಕೆಂದರೆ ಅದು ಗೇಮ್. ಆದ್ರೆ ಪ್ರತಿ ಸಲ ನನ್ನ ಧ್ವನಿಯನ್ನು ಎತ್ತಿಕೊಂಡು ಮಾತಾಡಿದಾಗಲೂ, -ಅದನ್ನು ಹೆಚ್ಚು ನಮ್ರತಾ, ವಿನಯ್ ಮಾತಾಡಿದ್ದಾರೆ- ಪ್ರತಿ ನಾಮಿನೇಷನ್‌ನಲ್ಲಿಯೂ ಈ ಕಾರಣ ಕೊಟ್ಟಿದ್ದಾರೆ, ಅವರೇನೋ ಕಡಿಮೆ ಧ್ವನಿಯಲ್ಲಿ ಮಾತಾಡುತ್ತಾರೆ ಎನ್ನುವ ರೀತಿಯಲ್ಲಿ. ನಾನು ಯಾವ ಜಾಗದಲ್ಲಿ ಮಾತಾಡಬೇಕೋ ಆ ಜಾಗದಲ್ಲಿ ಮಾತಾಡಿದ್ದೇನೆ. ನಾರ್ಮಲ್ ಆಗಿ ಮಾತಾಡುವಾಗ ನನ್ನ ಧ್ವನಿಯಲ್ಲಿ ಮಾತಾಡುವಾಗ ಎದುರಿಗಿರುವವರಿಗೆ ಕಂಪರ್ಟಬಲ್ ಇರುವ ಧ್ವನಿಯಲ್ಲಿಯೇ ಮಾತಾಡುತ್ತಿರುತ್ತೇನೆ.

Tanisha Kuppanda 3

ಕಾಲು ನೋವಾಗಿದ್ದು ನಿಮಗೆ ಹಿನ್ನೆಡೆ ತಂದಿದೆ?

ಕಾಲುನೋವಾಗಿದ್ದ ದಿನ ನನಗೆ, ಶಾಕ್ ಆಗಿತ್ತು. ನನಗೆ ಯಾರೋ ಚಾಕು ಚುಚ್ಚಿಬಿಟ್ರೆನೋ ಅನ್ನುವಷ್ಟು ನೊಂದುಕೊಂಡದ್ದೆ. ಇಷ್ಟು ಚೆನ್ನಾಗಿ ಆಡ್ತಿದ್ನಲ್ವಾ? ಯಾಕೆ ಹೀಗೆ ಕಷ್ಟಕೊಟ್ಟೆ ಎಂದು ದೇವರನ್ನೆಲ್ಲ ಬೈದುಕೊಂಡಿದ್ದೇನೆ. ಕಾಲು ನೋವು ಮಾಡಿ ಮನೆಯೊಳಗೆ ಹೋಗದೇ ಇರುವ ಹಾಗೆ ಮಾಡಿಬಿಟ್ಯಲ್ಲಾ ಎಂದು ದೂರಿದ್ದೇನೆ. ಆ ವಿಷಯದಲ್ಲಿ ನಾನು ಬಿಗ್‌ಬಾಸ್ ಟೀಮ್‌ಗೆ ಥ್ಯಾಂಕ್‌ಫುಲ್ ಆಗಿದ್ದೇನೆ. ಬಹಳಷ್ಟು ಟಾಸ್ಕ್‌ಗಳು ಕಾಲುನೋವು ಆಗಿದ್ದರೂ ಆಡಬಹುದು ಎನ್ನುವ ರೀತಿಯಲ್ಲಿಯೇ ಇರುತ್ತಿದ್ದವು. ಕಾಲು ನೋವು ನನ್ನನ್ನು ಯಾವುದೋ ನಾಲ್ಕು ಫಿಜಿಕಲ್ ಟಾಸ್ಕ್‌ನಿಂದ ಹೊರಗಿಟ್ಟಿರಬಹುದು ಬಿಟ್ರೆ, ಉಳಿದನ್ನು ನಾನು ಆಡಲು ಸಮರ್ಥಳಾಗಿದ್ದೆ. ಚಾನ್ಸ್ ಸಿಗಬೇಕಿತ್ತಷ್ಟೆ. ಅಲ್ಲದೇ ಟಾಸ್ಕ್ ಅಂತ ಬಂದಾಗ ಅದು ಬರೀ ಮೂವತ್ ಪರ್ಸಂಟ್ ಅಷ್ಟೇ ಇರುತ್ತದೆ. ಅದಕ್ಕಿಂತ ಪರ್ಸನಾಲಿಟಿ ಮುಖ್ಯ ಎಂದು ಸುದೀಪ್ ಅವರು ಮೊದಲೇ ಕ್ಲಿಯರ್ ಆಗಿ ಹೇಳಿದ್ದರು.

tanisha kuppanda 1

ನೀವು, ಸಂಗೀತಾ, ಕಾರ್ತಿಕ್ ಟ್ರಯೋ ಫ್ರೆಂಡ್‌ಷಿಪ್‌ ಬಗ್ಗೆ…?

ಮೊದಲಿನಿಂದ ನನಗೆ ಒಟ್ಟಿಗೆ ಇದ್ದಿದ್ದರಿಂದ ಸಂಗೀತಾ, ಕಾರ್ತಿಕ್, ನನ್ನ ನಡುವೆ ಟ್ರಯೊ ಫ್ರೆಂಡ್‌ಷಿಪ್ ಬೆಳೀತು. ಆದರೆ ಅವರಿಬ್ಬರೂ ಸ್ವಲ್ಪ ಜಾಸ್ತಿ ಕ್ಲೋಸ್ ಆಗಿರುವುದು ನನಗೆ ಖಂಡಿತವಾಗಲೂ ಗೊತ್ತಿತ್ತು. ಆ ಕಾರಣಕ್ಕೇ ನಾನು ಇದು ಗುಂಪಲ್ಲ. ನನಗೆ ಇವರ ಜೊತೆಗೆ ಹೆಚ್ಚು ಮಾತಾಡಬೇಕು ಅನಿಸುತ್ತದಷ್ಟೆ ಎಂದು ಹೇಳಿಕೊಂಡು ಎಲ್ಲರ ಜೊತೆ ಮಾತಾಡಿಕೊಂಡು ಓಡಾಡಿಕೊಂಡೇ ಇದ್ದೆ. ತನಿಷಾ ಅವರ ದುಃಖಕ್ಕೆ ಸ್ಪಂದಿಸುವುದಕ್ಕೆ ಪ್ರತಿ ಸಲ ಇರುತ್ತಿದ್ದಳು. ಆದರೆ ತನಿಷಾಗೆ, ತನಿಷಾ ಥರ ಯಾರೂ ಇರಲಿಲ್ಲ. ನನ್ನ ದುಃಖಕ್ಕಾಗಲಿ, ಖುಷಿಗಾಗಲಿ, ನನ್ನ ಕೋಪಕ್ಕಾಗಲಿ ಸ್ಪಂದಿಸುವವರು ಯಾರೂ ಇರಲಿಲ್ಲ. ಸಂಗೀತಾಗೆ ಏನು ಸಮಸ್ಯೆ ಎಂದರೆ, ಫ್ರೆಂಡ್ಸ್ ಅಂದ್ರೆ ಅವರನ್ನು ಸ್ವಲ್ಪ ತಲೆಮೇಲೆ ಇಟ್ಕೋಬೇಕು.ಆಗ ಅವರಿಗೆ ಸಮಾಧಾನ ಆಗುತ್ತದೆ. ಇಲ್ಲಾ ಅಂದ್ರೆ ಸಮಾಧಾನ ಆಗುವುದಿಲ್ಲ. ನಾನು ಜಗಳ ಆಯ್ತು ಅಂದ್ರೆ ಅಲ್ಲಲ್ಲೇ ಬಿಟ್ಟು ಹೋಗ್ತಾ ಇರ್ತೀನಿ. ಅವ್ರು ಜನರನ್ನೇ ಬಿಟ್ಟು ಹೋಗ್ತಿರ್ತಾರೆ. ಹಾಗಾಗಿ ಅವರು ತಪ್ಪು ಮಾಡಿದ್ರೂ ತುಂಬ ಬೇಗ ಕ್ಷಮಿಸಿ ನಾರ್ಮಲ್ ಆಗಿಬಿಡ್ತಿದ್ದೆ. ಕಾರ್ತಿಕ್ ವಿಚಾರಕ್ಕೆ ಬಂದ್ರೆ, ಕಾರ್ತಿಕ್ ಸ್ವಲ್ಪ ತಡವಾಗಿ ಅರ್ಥ ಮಾಡಿಕೊಳ್ಳುವುದು. ತುಂಬ ಚೆನ್ನಾಗಿದ್ರು, ಕೊನೆ ಕ್ಷಣದಲ್ಲಿ ಬೇರೆ ಯಾರದೋ ಮಾತು ಕೇಳಿಕೊಂಡು ಎಡವಿದ್ರು ಅಂತ ಅನಿಸ್ತು. ಪ್ರತಿ ಸಲ ಹೇಳಬೇಕಾದ್ರೆ ನಾನು ಇರ್ತಿದ್ದೆ. ಆದ್ರೆ ಅವು ಇರ್ತಿರ್ಲಿಲ್ಲ. ಹಾಗಾಗಿ ಒಬ್ರು ಸ್ವಲ್ಪ ಬೇಗ ದೂರವಾದ್ರು. ಇನ್ನೊಬ್ರು ತುಸು ತಡವಾಗಿ ದೂರವಾದ್ರು. ಆಚೆ ಹೋದರೆ ಬಹುಶಃ ನಾನು ಕಾರ್ತೀಕ್ ಜೊತೆಗೆ ಸ್ನೇಹ ಮುಂದುವರಿಸ್ತೀನಿ.

Tanisha Kuppunda 1

ಮನೆಯೊಳಗೆ ಯಾರು ಇಷ್ಟ? ಯಾರು ಫೇಕ್? ಯಾರು ಗೆಲ್ಲಬಹುದು?

ನನಗೆ ವರ್ತೂರು ಅವರ ಮುಗ್ಧತೆ ಇಷ್ಟ. ಯಾರದೋ ಮಾತಿಗೆ ಕೇಳಿಸಿಕೊಂಡು, ಬಲಿಯಾಗಿ ಯಾರ ಬಗ್ಗೆಯೋ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುವುದಿಲ್ಲ ಅವರು. ಹಾಗಾಗಿ ಅವರ ಜೊತೆಗೆ ಮಾತಾಡುವುದು ನನಗೆ ಮೊದಲಿನಿಂದಲೂ ಇಷ್ಟ.  ನನ್ನ ಪ್ರಕಾರ ಬಿಗ್‌ಬಾಸ್ ಮನೆಯಲ್ಲಿ ಫೇಕ್ ಅಂದ್ರೆ, ಸಂಗೀತಾ. ಜೆನ್ಯೂನ್ ಅನಿಸುವುದು ವರ್ತೂರು ಸಂತೋಷ್. ನನ್ನ ಪ್ರಕಾರ ಗೆಲ್ಲಬಹುದು ಅನಿಸುವುದು ಸಂಗೀತಾ. ಆದರೆ ನನಗೆ ವಿನ್ ಆಗಬೇಕು ಎಂದುನನಗೆ ಇರುವುದು ಕಾರ್ತಿಕ್.

ಜಿಯೊ ಸಿನಿಮಾ ಫನ್ ಫ್ರೈಡೆ ಟಾಸ್ಕ್‌ಗಳು ಯಾವಾಗ ಬಂದಿದ್ಯೋ ಅವುಗಳನ್ನು ಸಾಕಷ್ಟು ಎಂಜಾಯ್ ಮಾಡಿದೀನಿ ನಾನು. ಮ್ಯೂಸಿಕಲ್ ಪಾಟ್ ಅಂತೊಂದು ಗೇಮ್ ಮಾಡಿದ್ರು. ಅದರಲ್ಲಿ ನಾನು ಗೆದ್ದೆ ಕೂಡ. ಆ ಟಾಸ್ಕ್ ನಂಗೆ ತುಂಬ ಇಷ್ಟವಾಯ್ತು. ಯಾಕಂದ್ರೆ ಅಸಮರ್ಥರು ಎಂದು ನಾವು ಮನೆಯೊಳಗೆ ಎಂಟರ್‍ ಆಗಿದ್ವಿ. ಇಡೀ ವಾರ ಕೆಲಸ ಮಾಡು ಕೆಲಸ ಮಾಡು ಅಂದ್ಕೊಂಡು ಇದ್ವಿ. ಅವರಾದ್ಮೇಲೆ ತಿನ್ನು, ಅವರಾದ್ಮೇಲೆ ಮಲಗು. ಲೈಟ್ ಆಫ್ ಆಗೋವರೆಗೂ ಕಾಯಬೇಕು ಹೀಗೆಯೇ ಕಳೆದಿದ್ವಿ. ಸಾಕಾಗಿಬಿಟ್ಟಿತ್ತು. ಆ ವಾರ ಬಂದ ಮ್ಯೂಸಿಕಲ್ ಪಾಟ್ ಬಂದಾಗ ಎಂಜಾಯ್ ಮಾಡಿದೀನಿ.

 

ಬಿಗ್‌ಬಾಸ್ ಮನೆಯಿಂದ ಆಚೆಬಂದು ಏನು ಮಿಸ್ ಮಾಡ್ಕೋತಿದೀರಿ.

ಮೈಕ್. ಮೈಕ್ ಅನ್ನೋದು ನನ್ನ ದೇಹದ ಒಂದು ಭಾಗವೇ ಆಗಿಬಿಟ್ಟಿದೆ. ಎರಡನೇದಾಗಿ ಬಿಗ್‌ಬಾಸ್ ಧ್ವನಿ. ನೀವು ತುಂಬ ತಿದ್ದಿದೀರಾ, ಪ್ರೀತಿ ಕೊಟ್ಟಿದೀರಾ…. ನಾವು ಮುಂದೆ ನಡೆಯುವುದಕ್ಕೆ ದಾರಿಯೇ ಇಲ್ಲ ಅಂದಾಗ ಹೆಜ್ಜೆ ಎಲ್ಲಿ ಇಡಬಹುದು ಎಂದು ತೋರಿಸಿಕೊಟ್ಟಿದೀರಾ? ನಾನು ಲೋ ಆಗಿದ್ದಾಗ ನನಗೆ ಸಾಂತ್ವನ ಹೇಳಿದ್ದೀರಾ… ನಿಮ್ಮ ಕಡೆಯಿಂದ ಸಮಾನವಾದ ಪ್ರೀತಿ ಕಾಣಿಸ್ತಾ ಇತ್ತು. ನಮ್ಮ ಮನೆಯವರೂ ಇಷ್ಟು ಕೇರ್ ಮಾಡಿರ್ಲಿಲ್ವೇನೋ… ಅಷ್ಟು ಪ್ರೀತಿ ಕೊಟ್ಟಿದೀರಾ… ನಾನು ಇದನ್ನು ಯಾವತ್ತಿಗೂ ಮರೆಯಲಾರೆ

TAGGED:Bigg Boss Kannadainterviewtanisha kuppandaತನಿಷಾ ಕುಪ್ಪಂಡಬಿಗ್ ಬಾಸ್ ಕನ್ನಡಸಂದರ್ಶನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

siddaramaiah
Bengaluru City

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

Public TV
By Public TV
14 minutes ago
electricity chamarajanagara
Chamarajanagar

ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

Public TV
By Public TV
31 minutes ago
hyderabad telangana bjp president n ramchander rao placed under house arrest ahead of protest over womens reservation bill
Latest

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆಗೆ ಕರೆ – ಬಿಜೆಪಿ ಅಧ್ಯಕ್ಷ ರಾಮಚಂದರ್ ರಾವ್‌ಗೆ ಗೃಹಬಂಧನ

Public TV
By Public TV
31 minutes ago
Siddaramaiah Addressed the 22nd Biennial State Level Conference of Judicial Officers 2
Bengaluru City

ವಸೂಲಿ ಮಾಡಿಕೊಡುವ ದಂಡದಲ್ಲಿ 75-80% ಕೋರ್ಟ್‌ ಅಭಿವೃದ್ದಿಗೆ ನೀಡಲಿ: ನ್ಯಾ. ಅರವಿಂದ್ ಕುಮಾರ್

Public TV
By Public TV
52 minutes ago
Siddaramaiah Addressed the 22nd Biennial State Level Conference of Judicial Officers
Bengaluru City

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Public TV
By Public TV
53 minutes ago
karwar murder case
Crime

ಅರೆಬೈಲ್ ಘಟ್ಟದಲ್ಲಿ ಚಾಲಕನ ಸಮೇತ ಕಾರು ಸುಟ್ಟ ಕೇಸ್ – ಹ‌ತ್ಯೆ ಮಾಡಿದ ಮೂವರ ಬಂಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?