Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ- ಪ್ರಧಾನಿಗೆ ಸಿದ್ದರಾಮಯ್ಯ ಸವಾಲು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ- ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Public TV
Last updated: January 22, 2024 5:38 pm
Public TV
Share
3 Min Read
NARENDRA MODI SIDDARAMAIAH
SHARE

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸವಾಲು ಹಾಕಿದ್ದಾರೆ.

ಈ ಸಂಬಂಧ ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರೇ (narendra Modi) ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ.

AYODHYA 5

ಎಕ್ಸ್‌ನಲ್ಲೇನಿದೆ..?: ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್‌) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ ಎಂದರು. ಇದನ್ನೂ ಓದಿ: 11 ದಿನಗಳ ಕಠಿಣ ವ್ರತ ಮುಗಿಸಿದ ನಮೋ

AYODHYA RAM MANDIR

ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಡಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಹೇಳಿದರು.

Rama 01

ಪ್ರಧಾನಿ ನರೇಂದ್ರ ಮೋದಿಯವರೇ ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್‌, ಸರ್ಚಾರ್ಜ್‌ಗಳನ್ನು ಹೆಚ್ಚಿಸಿದ್ದೀರಿ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರೇ, ದೇಶದ ಭದ್ರತೆಯ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಪುಂಖಾನುಪುಂಖ ಆಶ್ವಾಸನೆಗಳನ್ನು ಕೊಟ್ಟಿದ್ದಿರಿ. ಆದರೆ ಗಡಿಯೊಳಗೆ ಅತಿಕ್ರಮಣ ಮಾಡಿ ಅಕ್ರಮ ಸೇನಾ ನಿರ್ಮಾಣ ಚಟುವಟಿಕೆ ಕೈಗೊಂಡಿರುವ ಚೀನಾವನ್ನು ಹಿಂದಕ್ಕೆ ಕಳುಹಿಸಲಾಗದೆ ಚೀನಾ ನಮ್ಮ ಗಡಿಯನ್ನು ಪ್ರವೇಶಿಸಿಯೇ ಇಲ್ಲ ಎನ್ನುವ ಹೇಳಿಕೆ ನೀಡಿಬಿಟ್ಟಿರಿ! ಆ ಮೂಲಕ ಮುಂದಕ್ಕೆ ಇದ್ದ ಗಡಿ ರೇಖೆಯನ್ನು ಹಿಂದಕ್ಕೆ ಎಳೆದ ಶೂರ ನೀವು! ಯಾವ ಗಡಿ ರೇಖೆಯನ್ನು ಕಾಯುವುದಕ್ಕಾಗಿ ನಮ್ಮ ಪರಾಕ್ರಮಿ ಸೈನಿಕರು ಸಂಘರ್ಷ ನಡೆಸಿ ತಮ್ಮ ಪ್ರಾಣವನ್ನೇ ಸಮರ್ಪಿಸಿದರೋ ಆ ಸೈನಿಕರಿಗೆ ನೀವು ಮರಣೋತ್ತರ ಅವಮಾನ ಮಾಡಿದಿರಿ. ಹೀಗೆ, ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

Share This Article
Facebook Whatsapp Whatsapp Telegram
Previous Article saif ali khan ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು
Next Article Modi 9 ದೇಶ ಗುಲಾಮಗಿರಿಯಿಂದ ಮುಕ್ತವಾಗಿದೆ, ಸಾವಿರಾರು ವರ್ಷಗಳ ನಂತರವೂ ಈ ಕ್ಷಣ ನೆನಪಿಸಿಕೊಳ್ತಾರೆ: ಮೋದಿ

Latest Cinema News

Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories

You Might Also Like

Nelamangala Labour Death
Bengaluru City

Nelamangala | ಕೆಲಸ ಮಾಡುವ ವೇಳೆ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

20 minutes ago
Narendra Modi 2
Latest

ನವರಾತ್ರಿಯಿಂದ ಹೊಸ GST ಸ್ಲ್ಯಾಬ್‌ ಜಾರಿ – ದೇಶವನ್ನುದ್ದೇಶಿಸಿ ಇಂದು ಸಂಜೆ 5ಕ್ಕೆ ಮೋದಿ ಭಾಷಣ

1 hour ago
Bengaluru Traffic
Bengaluru City

ಬಂದಿದೆ ಹೊಸ ಟ್ರಾಫಿಕ್‌ ಟ್ಯಾಕ್ಸ್‌ – ವರ್ಷಕ್ಕೆ 2.5 ತಿಂಗಳು ಲಾಸ್‌: ಬೆಂಗಳೂರು ಟೆಕ್ಕಿಯ ಪೋಸ್ಟ್‌ ವೈರಲ್‌

1 hour ago
Electricity
Crime

ಕಬಡ್ಡಿ ಪಂದ್ಯದ ವೇಳೆ ಹಠಾತ್ ಬಿರುಗಾಳಿ – ವಿದ್ಯುತ್ ತಂತಿ ತಗುಲಿ ಮೂವರು ಸಾವು

1 hour ago
Mahesh Shetty Thimarody 2
Dakshina Kannada

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಆರೋಪ – ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?